Ju. On the 30th, the first chariot arrived at Kuntoji from Koppal

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಜು. 30 ರಂದು ಕೊಪ್ಪಳದಿಂದ ಕುಂಟೋಜಿಗೆ ಪ್ರಥಮ ರಥ ಆಗಮನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ (ನಂದಿ) ಬಸವೇಶ್ವರ ಹಾಗೂ ಸಂಗಮೇಶ್ವರ ದೇವಸ್ಥಾನದ ಜಾತ್ರೆ ಶ್ರಾವಣ ಮಾಸದ ಕೊನೆಯ ಸೋಮವಾರದಿಂದ ಐದು ದಿನಗಳವರೆಗೆ ಜರುಗಲಿದ್ದು ದೇವಸ್ಥಾನದ ಪ್ರಥಮ ರಥೋತ್ಸವ ಈ ಬಾರಿ ಜಾತ್ರೆಯಲ್ಲಿ ಜರುಗಲಿದೆ ಎಂದು ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ಹೇಳಿದರು.

ತಾಲ್ಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಥಮ ರಥವನ್ನು ಕೊಪ್ಪಳದಿಂದ ತರುವ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕುಂಟೋಜಿ ಗ್ರಾಮದ ಮತ್ತು ಸುತ್ತಮುತ್ತಲಿನ ಊರುಗಳು, ನಗರ ಮತ್ತು ಬೇರೆ ಬೇರೆ ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬಸವಣ್ಣನ ಭಕ್ತರು ದೇಣಿಗೆ ನೀಡಿ ಕೊಪ್ಪಳದ ಜಕಣಾಚರ‍್ಯ ಮತ್ತು ಅಮೋಘವರ್ಷ ನೃಪತುಂಗ ಪ್ರಶಸ್ತಿ ವಿಜೇತ ರಥಶಿಲ್ಪಿ ಮಲ್ಲಪ್ಪ ಬಡಿಗೇರ ಇವರು ತಮ್ಮ ಎಂ. ಜಿ. ರಥಶಿಲ್ಪಿ ಕಲಾ ಕೇಂದ್ರದಲ್ಲಿ ಸಂಪೂರ್ಣ ಉಚಿತವಾಗಿ ನಿರ್ಮಿಸಿರುವ ಸಾಗವಾನಿ ಮರದ ರಥವನ್ನು ಜು.30 ರಂದು ಮುದ್ದೇಬಿಹಾಳ ನಗರದ ಪಿಲೇಕೆಮ್ಮ ದೇವಿ ದೇವಸ್ಥಾನದಿಂದ ಕುಂಟೋಜಿ ಗ್ರಾಮದವರೆಗೆ ಭವ್ಯ ಮೆರವಣಿಗೆಯ ಮುಖಾಂತರ ಸ್ವಾಗತಿಸಲಾಗುವುದು ಎಂದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಜು.27 ರಂದು ರಥವನ್ನು ತರಲು ಕುಂಟೋಜಿಯಿಂದ ಭಕ್ತರು ಮತ್ತು ದೇವಸ್ಥಾನ ಕಮೀಟಿಯವರು ಟ್ರ್ಯಾಕ್ಟರ್ ಮುಖಾಂತರ ಕೊಪ್ಪಳಕ್ಕೆ ತೆರಳಿಲಿದ್ದಾರೆ. ಜುಲೈ 29 ರಂದು ಬೆಳಿಗ್ಗೆ ಕೊಪ್ಪಳದಿಂದ ರಥವನ್ನು ತೆಗೆದುಕೊಂಡು ಹೊರಟು ಅಂದೇ ಸಂಜೆ ಮುದ್ದೇಬಿಹಾಳ ನಗರಕ್ಕೆ ಆಗಮಿಸಿ, 30ರಂದು ಪಿಲೇಕೆಮ್ಮ ದೇವಾಸ್ಥಾನದಿಂದ ರಥವನ್ನು ಮತ್ತು ಅದರ ಜೊತೆಗೆ 21 ಕಿಲೋ ತೂಕದ ಬಸವಣ್ಣ ಮತ್ತು ಸಂಗಮೇಶ್ವರನ ಬೆಳ್ಳಿಯ ಮುಖವಾಡಗಳನ್ನು, ನಾಗರ ಹೆಡೆಯನ್ನು, ತೇರು ಎಳೆಯುವ ಹಗ್ಗ, ತೇರಿಗೆ ರುದ್ರಾಕ್ಷಿ ಮಾಲೆ, ಕಳಸ, ಇವುಗಳನ್ನು ಮೆರವಣಿಗೆ ಮೂಲಕ ಕುಂಟೋಜಿಗೆ ತರಲಾಗುವುದು ಎಂದರು.

ದೇವಸ್ಥಾನ ಕಮೀಟಿಯ ಉಪಾಧ್ಯಕ್ಷ ಆನಂದ ಗಸ್ತಿಗಾರ, ಕಾರ್ಯದರ್ಶಿ ಮಲ್ಲಿಕಾರ್ಜುನ ನಾಟೀಕಾರ, ಸೇರಿದಂತೆ ಕಮೀಟಿ ಸದಸ್ಯರು ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ