Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮಾಜಿ ಶಾಸಕರು ಐದು ವರ್ಷ ನಿದ್ದೆ ಮಾಡುತ್ತಿದ್ದರೇ ?-ಶಾಸಕ ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಮತಕ್ಷೇತ್ರದ ತಾಳಿಕೋಟಿ ತಾಲ್ಲೂಕಿನಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ತಮ್ಮ ಅವಧಿಯಲ್ಲಿ ಜಾಗೆ ಗುರುತಿಸುವುದನ್ನು

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ ಬಿರುಗಾಳಿ,ಆಲಿಕಲ್ಲು ಮಳೆ ರೈತರಿಗೆ ನಷ್ಟವನ್ನುಂಟು ಮಾಡಿದ್ದು ಫಸಲಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಬರಸಿಡಿಲು ಅಪ್ಪಳಿಸಿದಂತಾಗಿದೆ. ತಾಲ್ಲೂಕಿನ ಆಲೂರ ಗ್ರಾಮದಲ್ಲಿ ಬಿರುಗಾಳಿ,ಮಳೆಗೆ ಶಿವಪುತ್ರಪ್ಪ ಗೂಳಿ ಎಂಬುವರ ಹೊಲದಲ್ಲಿ ಬೆಳೆದಿದ್ದ ಐದು ಎಕರೆ ದ್ರಾಕ್ಷಿ ಬೆಳೆ ಹಾನಿಯಾಗಿದೆ.ಇನ್ನೆನ್ನು ವಾರದಲ್ಲಿ ದ್ರಾಕ್ಷಿ ಕಟಾವು ಮಾಡಬೇಕಿದ್ದ ರೈತನಿಗೆ ಈ ಬಿರುಗಾಳಿ,ಮಳೆ ಬರಸಿಡಿಲಿನಂತೆ ಬಂದೆರಗಿದ್ದು ದ್ರಾಕ್ಷಿ ಗೊನೆಗಳು,ಹಣ್ಣುಗಳು ಉದುರಿ ಬಿದ್ದಿವೆ.ಇದರೊಟ್ಟಿಗೆ ಚಿಕ್ಕು ಗಿಡಗಳಿಂದ