Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ