Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳದಲ್ಲಿ ಭಾರೀ ಮಳೆ: ಶೆಡ್‌ಗೆ ನುಗ್ಗಿದ ಮಳೆ ನೀರು

ಮುದ್ದೇಬಿಹಾಳ : ಪಟ್ಟಣದಲ್ಲಿ ಗುರುವಾರ ಬೆಳಗ್ಗೆ ಭರ್ಜರಿ ಮಳೆ ಸುರಿಯಿತು. ಒಂದು ತಾಸಿಗೂ ಹೆಚ್ಚು

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ

ಸಿಡಿಲು ಬಡಿದು ರೈತ ಸಾವು

ಸಿಡಿಲು ಬಡಿದು ರೈತ ಸಾವು

ಮುದ್ದೇಬಿಹಾಳ : ಸಿಡಿಲು ಬಡಿದು ರೈತನೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ರೈತ ಮಲ್ಲಪ್ಪ ಗುರುಶಾಂತಪ್ಪ ತಾಳಿಕೋಟಿ(47) ಹೊಲಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಹೊಲದಲ್ಲಿದ್ದ ಹುಣಸೆ ಮರದ ಕೆಳಗಡೆ ಆಶ್ರಯ ಪಡೆದುಕೊಂಡಾಗ ಸಿಡಿಲು ಬಡಿದು ರೈತ ಸ್ಥಳದಲ್ಲೇ ಅಸುನೀಗಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ, ನೇಬಗೇರಿ, ಗೆದ್ದಲಮರಿ, ಶಿರೋಳ, ಮುದ್ನಾಳ, ಮುದ್ದೇಬಿಹಾಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಭಾರೀ ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಆರಂಭವಾದ ಮಳೆ ಅರ್ಧ ಗಂಟೆಗೂ