Kalburgi: Honeytrap racket, arrest of accused

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

Kalburgi: ಹನಿಟ್ರ್ಯಾಪ್ ದಂಧೆ, ಆರೋಪಿಗಳ ಬಂಧನ

ಕಲಬುರಗಿ: ಅಮಾಯಕ ಯುವತಿಯರನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವರನ್ನು ಪರಿಚಯಿಸಿಕೊಂಡು ಕಲಬುರಗಿಯಲ್ಲಿನ ಸರಕಾರಿ ಅಧಿಕಾರಿಗಳ, ಉದ್ಯಮಿಗಳಿಗೆ ಹನಿಟ್ರ್ಯಾಪ್ ಮಾಡಿ ಲಕ್ಷ ಲಕ್ಷ ಹಣ ವಸೂಲಿ ಮಾಡುವ ದಂಧೆ ಎಗ್ಗಿಲ್ಲದೆ ಸಾಗಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

10ಕ್ಕೂ ಅಧಿಕ ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರಾಪ್ ದಂಧೆ ಮಾಡುತ್ತಿರುವ ಗ್ಯಾಂಗ್‌ನ ರಾಜು ಲೇಂಗಟಿ ಸೇರಿದಂತೆ 4 ಜನರ ವಿರುದ್ಧ ಇದೀಗ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇನ್ನುಳಿದ, ಗ್ಯಾಂಗ್ ನ ಸದಸ್ಯರ ಹುಡುಕಾಟಕ್ಕಾಗಿ ಪೊಲೀಸರು ತಮ್ಮ ಜಾಲವನ್ನು ಬಿಸಾಡಿದ್ದಾರೆ.

ದಲಿತ ಸೇನೆಯ ಮುಖಂಡನ ಬಂಧನ:

ಯುವತಿಯರನ್ನು ಬಳಸಿಕೊಂಡು ಸರಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಆರೋಪದ ಹಿನ್ನಲೆಯಲ್ಲಿ ದಲಿತ ಸೇನೆಯ ಮುಖಂಡ ರಾಜು ಲೇಂಗಟಿ ಅವರನ್ನು ಇದೀಗ ಪೊಲೀ ಸರು ಬಂಧನ ಮಾಡಿದ್ದಾರೆ.

ಆಡಿಯೊ ಬಿಡುಗಡೆ:

ಕಲಬುರಿಗಿಯಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜು ಬೇಂಗಟಿ ಹಾಗೂ ಸಂತ್ರಸ್ತ ಯುವತಿಯ ನಡುವಿನ ಮಾತುಕತೆಯ ಅಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಉದ್ಯಮಿಯೊಬ್ಬರ ಬಳಿ ಪಡೆದಿರುವ ಹಣದ ಕುರಿತಾಗಿ ಆರೋಪಿ ರಾಜು ಲೇಂಗಟಿ ಆಡಿಯೋದಲ್ಲಿ ಮಾತನಾಡಿದ್ದು, ಇದೀಗ ಬಹಿರಂಗವಾಗಿದೆ. 40 ಲಕ್ಷ ಡೀಲ್ ನಲ್ಲಿ ಹಣದ ಬಗ್ಗೆ ಗೊಂದಲವನ್ನು ಸೃಷ್ಟಿ ಮಾಡಿಕೊಂಡಿರುವ ಹನಿಟ್ರಾಪ್ ಗ್ಯಾಂಗ್, ಆಡಿಯೊದಲ್ಲಿ ಎಲ್ಲವೂ ಮಾತನಾಡಿರುವುದು ಬೆಳಕಿಗೆ ಬಂದಿದೆ.

ಯುವತಿಯ ಜೊತೆಗೆ ಮಾತನಾಡುವಾಗಲೇ ಉದ್ಯಮಿಗೆ ಕರೆ ಮಾಡಿ ಡೀಲ್ ಹಣದ ಸ್ಪಷ್ಟತೆಯನ್ನು ಆರೋಪಿ ರಾಜು ಲೇಂಗಟಿ ನೀಡಿದ್ದಾನೆ. 40 ಲಕ್ಷ ಹಣ ಡೀಲ ಆಗಿದೆ. ಹತ್ತು ಲಕ ಹಣ ಈಗಾಗಲೇ ಕೊಟ್ಟಿದ್ದು, ಉಳಿದ ಹಣವನ್ನು ಆಮೇಲೆ ನೀಡುವುದಾಗಿ ಹೇಳಿದ್ದಾರೆ. ಎಲ್ಲರಿಗೂ ಎರಡು ಎರಡು ಲಕ್ಷ ಹಂಚಿಕೊಳ್ಳುವುದಾಗಿ ಅಂತ ಆಡಿಯೋದಲ್ಲಿ ರಾಜು ಮಾತನಾಡಿದ್ದು, ಪ್ರಭು ಹಿರೇಮಠ ನಿಮಗೆ ಗೊಂದಲ ಸೃಷ್ಟಿ ಮಾಡುತ್ತಿದ್ದಾನೆ ಎಂದು ಆಡಿಯೋ ಮಾಡಿ ಇದೀಗ ವಿವರಣೆ ನೀಡಿದೆ.

ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ:

ಅಮಾಯಕ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ

ಕರಾಳ ದಂಧೆಯ ಮುಖವಾಡ ಬಗೆದಷ್ಟೂ ಬಯಲಾಗುತ್ತಿದೆ. ಹನಿಟ್ರಾಪ್ ಪ್ರಕರಣದ ಆರೋಪಿ ಪ್ರಭು ಸ್ವಾಮಿ ಅಜ್ಞಾತ ಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿದ್ದಾನೆ. ವಿಡಿಯೊ ಬಿಡುಗಡೆ ಮಾಡಿ, ಉದ್ಯಮಿಯಿಂದ ರಾಜು ಬೇಂಗತಿ ಅವರು 6 ಲಕ್ಷ ಹಣವನ್ನು ಪಡೆದು ನನ್ನ ಖಾತೆಗೆ ಆರ್ ಟಿ ಜಿ ಎಸ್ ಮೂಲಕ ಹಾಕಿದ್ದರು.

ಇದನ್ನೂ ಓದಿ: Shocking news: ಪತ್ನಿಯ ಹೆರಿಗೆ ಬಿಲ್ ಪಾವತಿಸಲು ಮಗನನ್ನೇ ಮಾರಲು ಮುಂದಾದ ತಂದೆ!

ಅದಾದ ಬಳಿಕ ನಮ್ಮ ಮಾವನ ಖಾತೆಗೆ 8 ಲಕ್ಷ ಹಣವನ್ನು ಪುನಃ ನೆಫ್ಟ್, ಆರ್‌ಟಿಜಿಎಸ್ ಮೂಲಕ ಹಾಕಿದ್ದಾರೆ. ಹೀಗೆ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿದ ಹಣವನ್ನು ರಾಜು ಲೇಂಗಟಿ ಅವರು ವಿತ್ ಡ್ರಾ ಮಾಡಿಕೊಂಡಿದ್ದಾರೆ. ಯಾರಿಗೋ ಕೊಡಬೇಕು ಅಂತ ಹೇಳಿ ನನ್ನ ಹಾಗೂ ನನ್ನ ಮಾವನ ಖಾತೆಗೆ ಹಾಕಿಸಿದ್ದು, ಹಣ ಹಾಕಿದ ಬಳಿಕ ಅವರೇ ವಿತ್ ಡ್ರಾ ಮಾಡಿಕೊಂಡಿದ್ದಾರೆ.ರಾಜು ಲೇಂಗಟಿ ಅವರನ್ನು ಕೇಳಿದಾಗ ಸಂಘಟನೆಯವರಿಗೆ ಕೊಡಬೇಕು ಎಂದು ಹೇಳಿದ್ದರು. ಸಾಲದಂತೆ ಹಣದ ವಿಚಾರದಲ್ಲಿ ಗಲಾಟೆ ಮಾಡಿ ನನ್ನ ಮೇಲೆ ಕೇಸ್ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಪ್ರಕರಣದ ಆರೋಪಿ ಪ್ರಭುಸ್ವಾಮಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾನೆ.

Latest News

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ : ಬಲವಂತದ ಬಂದ್ ಕರೆ ಅಗತ್ಯವಿಲ್ಲ-ಪಂಪಣ್ಣವರ

ಮುದ್ದೇಬಿಹಾಳ ; ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ದೊರಕಲಿ.ಅವರ

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

‘ಶಾಸಕ ಸಿ.ಎಸ್.ನಾಡಗೌಡರಿಗೆ ಮಂತ್ರಿ ಮಾಡಿ,ಇಲ್ಲವೇ ನಮ್ಮ ರಾಜೀನಾಮೆ ಪಡೆದುಕೊಳ್ಳಿ’

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡರಿಗೆ ನೂತನ

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಸಿಲಿಂಡರ್ ಸ್ಫೋಟದಿಂದ ಮೃತ ಕುಟುಂಬಗಳಿಗೆ ಅಸ್ಕಿ ಫೌಂಡೇಶನ್ ನೆರವು

ತಾಳಿಕೋಟಿ : ಪಟ್ಟಣದಲ್ಲಿ ಇತ್ತೀಚಿಗೆ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮೃತಪ್ಪಟ ಕಟ್ಟಡ ಕಾರ್ಮಿಕರಾದ ಶಕೀಲಅಹ್ಮದ್

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.8 ರಿಂದ ಆಲಮಟ್ಟಿ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ತಿಳಿಸಿದರು. ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಹೊಟೇಲ್ ಸಭಾಂಗಣದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ರೈತ

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಲಿ ಎಂಬ ಸದುದ್ಧೇಶದಿಂದ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ರಾಜ್ಯಾದ್ಯಾಂತ ಜೂ.1 ರಿಂದ ಸರ್ಕಾರಿ ಶಾಲೆಗಳ ಆರಂಭೋತ್ಸವಕ್ಕೆ ಸೂಚನೆ ನೀಡಿದಂತೆ ತಾಲ್ಲೂಕಿನೆಲ್ಲೆಡೆ ವೈಭವದಿಂದ ಶಾಲೆಗಳನ್ನು ಶಿಕ್ಷಕರು ಆರಂಭಿಸಿದ್ದಾರೆ. ಕೆಲವಡೆ ಮಕ್ಕಳಿಗೆ ಸರ್ಕಾರದಿಂದ ಪೂರೈಕೆಯಾಗಿರುವ ಪಠ್ಯಪುಸ್ತಕಗಳು,ಬಟ್ಟೆ ಕೊಟ್ಟು ಸ್ವಾಗತಿಸಿಕೊಂಡರೆ ಇನ್ನು ಕೆಲವೆಡೆ ಶಾಲಾ ಮಕ್ಕಳನ್ನು ಎತ್ತಿನ ಬಂಡಿಯಲ್ಲಿ ಕೂರಿಸಿಕೊಂಡು ಊರಿನ ತುಂಬೆಲ್ಲ ಮೆರವಣಿಗೆ ನಡೆಸಿ