Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ