Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ