Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು