Kalyana Mahotsava on May 18: Mass marriage of 46 couples with marriage of sons

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ ಅವರು ತಮ್ಮ ಪುತ್ರ ಕಿರಣ ಅವರ ಮದುವೆ ಕಾರ್ಯಕ್ರಮದೊಂದಿಗೆ 46 ಜೋಡಿಗಳಿಗೆ ಉಚಿತವಾಗಿ ಸಾಮೂಹಿಕವಾಗಿ ಮದುವೆ ಮಾಡಿಕೊಡುವ ಕಾರ್ಯಕ್ರಮವನ್ನು ಮೇ.18 ರಂದು ಆಯೋಜಿಸಿದ್ದಾರೆ.

ಪಟ್ಟಣದ ಅಭ್ಯುದಯ ಪಿ.ಯು ಸೈನ್ಸ್ ಕಾಲೇಜು ಪಕ್ಕದಲ್ಲಿರುವ ಜಾಗೆಯಲ್ಲಿ ಮದುವೆ ಕಾರ್ಯಕ್ರಮಕ್ಕಾಗಿ ಮಳೆ ನೀರು ಬೀಳದಂತ (ವಾಟರ್‌ಫ್ರೂಫ್) ಶಾಮಿಯಾನ ಹಾಕಿಸಿದ್ದಾರೆ. ಕಾರ್ಯಕ್ರಮಕ್ಕೆ ಕಲ್ಯಾಣ ಮಹೋತ್ಸವ ಎಂದು ಹೆಸರಿಟ್ಟಿದ್ದು ಮದುವೆ ಕಾರ್ಯಕ್ರಮದ ವಿವರಗಳನ್ನು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹಂಚಿಕೊಂಡರು.

ಪ್ರತಿ ವರ್ಷ ತಮ್ಮ ಸ್ವಂತ ಊರು ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ, ದ್ಯಾಮವ್ವ ದೇವಿ ಜಾತ್ರೆಯ ಸಮಯದಲ್ಲಿ ಉಚಿತವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸುತ್ತಾ ಬರುತ್ತಿದ್ದೇವು. ಆದರೆ, ಈ ವರ್ಷ ಪುತ್ರನ ಮದುವೆ ಮಾಡುತ್ತಿರುವ ಕಾರಣ ಸಾಮೂಹಿಕ ವಿವಾಹಗಳನ್ನು ಇದೇ ಮದುವೆಯಲ್ಲಿ ಆಯೋಜಿಸುವುದು ಸೂಕ್ತ ಎಂದು ತೀರ್ಮಾನಿಸಿ ಕುಟುಂಬದವರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಒಟ್ಟು 46 ಜೋಡಿ ನೋಂದಾಯಿಸಿಕೊಂಡಿದ್ದು ವಧು ವರರಿಗೆ ಎರಡು ಜೊತೆ ಬಟ್ಟೆ,ತಾಳಿ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ಮುಖಂಡ ಭಾಗಣ್ಣ ಕಡ್ಲಿ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ ಇದ್ದರು.

ಭಾಷಣ, ವೇದಿಕೆ ಕಾರ್ಯಕ್ರಮ ಇಲ್ಲ: ಇಡೀ ಮುದ್ದೇಬಿಹಾಳ ತಾಲ್ಲೂಕಿಗೆ ಆಹ್ವಾನ ನೀಡಲಾಗಿದೆ. ಅದರಲ್ಲೂ ಎಲ್ಲ ರಾಜಕೀಯ ನಾಯಕರು, ಸ್ವಾಮೀಜಿಗಳಿಗೆ ಆಹ್ವಾನ ನೀಡಿದ್ದು ವೇದಿಕೆ ಕಾರ್ಯಕ್ರಮ ನಾವು ಮಾಡುತ್ತಿಲ್ಲ. ಯಾವುದೇ ಭಾಷಣ ಇರುವುದಿಲ್ಲ. ಮದುವೆಯ ಮಾಂಗಲ್ಯಧಾರಣ ಸಮಯ ನಿಗದಿತ ವೇಳೆ ಮದ್ಯಾಹ್ನ 12.20ಕ್ಕೆ ಸಾಮೂಹಿಕವಾಗಿ ಮಾಂಗಲ್ಯಧಾರಣ ನಡೆಯಲಿದೆ. ಇದಕ್ಕೆ ಸ್ವಾಮೀಜಿಗಳು ಸಾಕ್ಷೀಕರಿಸಲಿದ್ದಾರೆ. ಕಲ್ಯಾಣ ಮಹೋತ್ಸವ ಕಾರ್ಯಕ್ರಮಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಆಗಮಿಸುವ ನೀರೀಕ್ಷೆ ಇದೆ ಎಂದು ತಿಳಿಸಿದರು.

ಮದುವೆ ಊಟಕ್ಕೆ ತಿರುಪಡಿ ಲಾಡು, ಬಾಂಬೆ ಹಲ್ವಾ : ಪುತ್ರನ ಮದುವೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ತಿರುಪತಿ ಲಾಡು ಹಾಗೂ ಬಾಂಬೆ ಹಲ್ವಾ ವ್ಯವಸ್ಥೆ ಮಾಡಿಸಿದ್ದೇವೆ.ತಿರುಪಡಿ ಲಾಡು ಸಿದ್ಧಪಡಿಸುವ ಬಾಣಸಿಗರನ್ನು ಕರೆಯಿಸಲಾಗಿದೆ. ಊಟಕ್ಕೆ ಎರಡು ತರಹದ ಪಲ್ಯೆ,ಮೊಸರನ್ನ, ಎರಡು ಸಿಹಿ,ಅನ್ನ ಸಾರು ವ್ಯವಸ್ಥೆ ಮಾಡಿಸಲಾಗಿದೆ. ಮಹಿಳೆಯರಿಗೆ, ಪುರುಷರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು ಬಂದ ವಾಹನಗಳನ್ನು ನಿಲುಗಡೆ ಮಾಡಲು ಪಾರ್ಕಿಂಗ್ ವ್ಯವಸ್ಥೆ ಇರಲಿದೆ ಎಂದು ತಿಳಿಸಿದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್