ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ ಮಾಡಿದ ಮಹಾ ಅನ್ಯಾಯವಾಗಿದೆ.

ಹೌದು, ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಈ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವ ಆಯ್ಕೆ ಕೊಟ್ಟಿದೆ. ಇದರಿಂದ ಕನ್ನಡಿಗ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪಚ್ಚಯ (ಜೆಡಿಸಿಇ) ಸುತ್ತೋಲೆ ಹೊರಡಿಸಿತ್ತು. ಹೀಗಾಗಿ, ಕನ್ನಡಿಗ ಅಭ್ಯರ್ಥಿಗಳು ಪರೀಕ್ಷಾ ಸಿದ್ಧತೆ ಕೈಗೊಂಡಿದ್ದರು.

ಆಗಸ್ಟ್ 3ಕ್ಕೆ ಈ ಪರೀಕ್ಷೆಯಿದೆ. ಆದರೆ, ಈ ನಡುವೆ ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವಂತೆ ಆಯ್ಕೆ ನೀಡಲಾಗಿದೆ. ಹುಬ್ಬಳ್ಳಿ ವಿಭಾಗದಲ್ಲಿ 521, ಮೈಸೂರು 130, ಬೆಂಗಳೂರು ವಿಭಾಗದಲ್ಲಿ 278 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ಎರಡು ತಿಂಗಳಿಂದ ಪರೀಕ್ಷೆ ಸಿದ್ಧತೆ ನಡೆಸಿದ್ದ ಕನ್ನಡಿಗರು ಇದೀಗ ಮಾತೃಭಾಷೆಯಲ್ಲಿ ಪರೀಕ್ಷೆ ಬರೆವ ಆಯ್ಕೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತಿದ್ದಾರೆ.

ಈ ಹಿಂದೆ ನಡೆದ ಜಿಡಿಸಿಇ ಪರೀಕ್ಷೆಗಳಲ್ಲಿ ಕನ್ನಡದ ಅವಕಾಶ ನೀಡಿದ್ದ ಇಲಾಖೆ ಈ ಬಾರಿ ಯಾಕೆ ನೀಡುತ್ತಿಲ್ಲ ಎಂದು ನೌಕರರು ಪ್ರಶ್ನಿಸಿದ್ದಾರೆ.

ತಮಿಳಲ್ಲಿದೆ, ಕನ್ನಡದಲ್ಲೇಕಿಲ್ಲ?: ದಕ್ಷಿಣ ರೈಲ್ವೆಯು ತಮಿಳುನಾಡಿನಲ್ಲಿ 2017-18 ರಿಂದಲೇ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನುತಮಿಳಿನಲ್ಲಿ ಬರೆವ ಆಯ್ಕೆಯನ್ನು ನೀಡಿದೆ. ಪ್ರತಿ ವರ್ಷವೂ ಸಾವಿರಾರು ಬಡ್ಡಿ ಪರೀಕ್ಷೆಗಳು ಆ ರಾಜ್ಯದ ಅಧಿಕೃತ ಭಾಷೆಯಲ್ಲಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ನೈಋತ್ಯ ರೈಲ್ವೆಯಿಂದಇದಿನ್ನೂ ಜಾರಿಯಾಗಿಲ್ಲ. ಕನ್ನಡಿಗರು ಹಿಂದಿ/ ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ರಾಜ್ಯದವರು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕೇಳುತ್ತಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ‘ನಾವು ಕನ್ನಡದಲ್ಲೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಹಾಲ್ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಕಾರಣ ಸಮಸ್ಯೆಯಾಗಿದೆ. ಇಲಾಖೆ ಪರೀಕ್ಷೆ ಮುಂದೂಡಬೇಕು. ಜೊತೆಗೆ ಕನ್ನಡದ ಆಯ್ಕೆ ನೀಡಬೇಕು’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿ ಹೇಳಿದರು.

ಇಂಗ್ಲಿಷ್ ಜ್ಞಾನಕ್ಕೆ ಪ್ರತ್ಯೇಕ ಪರೀಕ್ಷೆ: ರೈಲ್ವೆ ಮಂಡಳಿ ಪ್ರಕಾರ ಪರೀಕ್ಷೆಯಲ್ಲಿ ಇಂಗ್ಲಿಷ್ ಬದಲಿಗೆ ಪ್ರಾದೇಶಿಕ ಭಾಷೆಯ ಬಳಕೆಗೆ ಅನುಮತಿಸಬಹುದು.

ಏಕಾಏಕಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಕೊಕ್ ನೀಡಿರುವ ಬಗ್ಗೆ ನೌಕರರ ಸಂಘದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಆ.3ರ ಪರೀಕ್ಷೆಗಳನ್ನೇ ಮುಂದೂಡಲು ಚಿಂತನೆ ನಡೆಸಿದೆ. ಬಳಿಕ ಕನ್ನಡದಲ್ಲಿ ಪ್ರಶ್ನೆಪತ್ರಿಕೆ ನೀಡುವ ಅವಕಾಶ ನೀಡಬೇಕೆ, ಬೇಡವೆ ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು