ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ ಮಾಡಿದ ಮಹಾ ಅನ್ಯಾಯವಾಗಿದೆ.

ಹೌದು, ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಈ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವ ಆಯ್ಕೆ ಕೊಟ್ಟಿದೆ. ಇದರಿಂದ ಕನ್ನಡಿಗ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪಚ್ಚಯ (ಜೆಡಿಸಿಇ) ಸುತ್ತೋಲೆ ಹೊರಡಿಸಿತ್ತು. ಹೀಗಾಗಿ, ಕನ್ನಡಿಗ ಅಭ್ಯರ್ಥಿಗಳು ಪರೀಕ್ಷಾ ಸಿದ್ಧತೆ ಕೈಗೊಂಡಿದ್ದರು.

ಆಗಸ್ಟ್ 3ಕ್ಕೆ ಈ ಪರೀಕ್ಷೆಯಿದೆ. ಆದರೆ, ಈ ನಡುವೆ ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವಂತೆ ಆಯ್ಕೆ ನೀಡಲಾಗಿದೆ. ಹುಬ್ಬಳ್ಳಿ ವಿಭಾಗದಲ್ಲಿ 521, ಮೈಸೂರು 130, ಬೆಂಗಳೂರು ವಿಭಾಗದಲ್ಲಿ 278 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ಎರಡು ತಿಂಗಳಿಂದ ಪರೀಕ್ಷೆ ಸಿದ್ಧತೆ ನಡೆಸಿದ್ದ ಕನ್ನಡಿಗರು ಇದೀಗ ಮಾತೃಭಾಷೆಯಲ್ಲಿ ಪರೀಕ್ಷೆ ಬರೆವ ಆಯ್ಕೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತಿದ್ದಾರೆ.

ಈ ಹಿಂದೆ ನಡೆದ ಜಿಡಿಸಿಇ ಪರೀಕ್ಷೆಗಳಲ್ಲಿ ಕನ್ನಡದ ಅವಕಾಶ ನೀಡಿದ್ದ ಇಲಾಖೆ ಈ ಬಾರಿ ಯಾಕೆ ನೀಡುತ್ತಿಲ್ಲ ಎಂದು ನೌಕರರು ಪ್ರಶ್ನಿಸಿದ್ದಾರೆ.

ತಮಿಳಲ್ಲಿದೆ, ಕನ್ನಡದಲ್ಲೇಕಿಲ್ಲ?: ದಕ್ಷಿಣ ರೈಲ್ವೆಯು ತಮಿಳುನಾಡಿನಲ್ಲಿ 2017-18 ರಿಂದಲೇ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನುತಮಿಳಿನಲ್ಲಿ ಬರೆವ ಆಯ್ಕೆಯನ್ನು ನೀಡಿದೆ. ಪ್ರತಿ ವರ್ಷವೂ ಸಾವಿರಾರು ಬಡ್ಡಿ ಪರೀಕ್ಷೆಗಳು ಆ ರಾಜ್ಯದ ಅಧಿಕೃತ ಭಾಷೆಯಲ್ಲಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ನೈಋತ್ಯ ರೈಲ್ವೆಯಿಂದಇದಿನ್ನೂ ಜಾರಿಯಾಗಿಲ್ಲ. ಕನ್ನಡಿಗರು ಹಿಂದಿ/ ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ರಾಜ್ಯದವರು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕೇಳುತ್ತಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ‘ನಾವು ಕನ್ನಡದಲ್ಲೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಹಾಲ್ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಕಾರಣ ಸಮಸ್ಯೆಯಾಗಿದೆ. ಇಲಾಖೆ ಪರೀಕ್ಷೆ ಮುಂದೂಡಬೇಕು. ಜೊತೆಗೆ ಕನ್ನಡದ ಆಯ್ಕೆ ನೀಡಬೇಕು’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿ ಹೇಳಿದರು.

ಇಂಗ್ಲಿಷ್ ಜ್ಞಾನಕ್ಕೆ ಪ್ರತ್ಯೇಕ ಪರೀಕ್ಷೆ: ರೈಲ್ವೆ ಮಂಡಳಿ ಪ್ರಕಾರ ಪರೀಕ್ಷೆಯಲ್ಲಿ ಇಂಗ್ಲಿಷ್ ಬದಲಿಗೆ ಪ್ರಾದೇಶಿಕ ಭಾಷೆಯ ಬಳಕೆಗೆ ಅನುಮತಿಸಬಹುದು.

ಏಕಾಏಕಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಕೊಕ್ ನೀಡಿರುವ ಬಗ್ಗೆ ನೌಕರರ ಸಂಘದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಆ.3ರ ಪರೀಕ್ಷೆಗಳನ್ನೇ ಮುಂದೂಡಲು ಚಿಂತನೆ ನಡೆಸಿದೆ. ಬಳಿಕ ಕನ್ನಡದಲ್ಲಿ ಪ್ರಶ್ನೆಪತ್ರಿಕೆ ನೀಡುವ ಅವಕಾಶ ನೀಡಬೇಕೆ, ಬೇಡವೆ ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest News

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ ಮಾಡಬೇಕು ಎಂದು ಬಿಇಒ ಎಂ.ಎಸ್.ಬಡದಾನಿ ಹೇಳಿದರು. ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಆವರಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸನ್ 2026-27ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಟಗಳಲ್ಲಿ ಇಂದು ಸಾಕಷ್ಟು ಬದಲಾವಣೆಗಳಾಗಿದ್ದು ಗೆದ್ದವರು ಹಿಗ್ಗದೇ ಸೋತವರು ಕುಗ್ಗದೇ ಸ್ಪರ್ಧಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳುವಂತೆ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ