ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ತಮಿಳು OK.. ಕನ್ನಡಕ್ಕಿಲ್ಲ ಅವಕಾಶ! ಕನ್ನಡಿಗನೇ ಕೇಂದ್ರ ಸಚಿವರಾಗಿರುವ ರೈಲ್ವೆ ಇಲಾಖೆಯಿಂದಲೇ ಈ ಅನ್ಯಾಯ!

ಬೆಂಗಳೂರು: ರೈಲ್ವೆ ಇಲಾಖೆಯ ರಾಜ್ಯ ಖಾತೆಯ ಕೇಂದ್ರ ಸಚಿವರಾಗಿ ಕನ್ನಡಿಗರಾದ ವಿ. ಸೋಮಣ್ಣ ಅವರು ಇದ್ದರೂ ಇಲಾಖೆ ನಡೆಸಲು ಮುಂದಾಗಿರುವ ಪರೀಕ್ಷೆಯಲ್ಲಿ ಕನ್ನಡಗರಿಗೆ ಅನ್ಯಾಯ ಮಾಡಲಾಗುತ್ತಿದೆ. ಏತನ್ಮಧ್ಯೆ, ತಮಿಳರಿಗೆ ತಮಿಳಿನಲ್ಲೇ ಪರೀಕ್ಷೆ ಬರಯುವ ಅವಕಾಶ ನೀಡಿ, ಕನ್ನಡಿಗರಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಬರೆಯುವಂತೆ ಸೂಚಿಸಿರುವುದು ಇಲಾಖೆಯು ಕನ್ನಡಿಗರಿಗೆ ಮಾಡಿದ ಮಹಾ ಅನ್ಯಾಯವಾಗಿದೆ.

ಹೌದು, ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ರೈಲ್ವೆ ಉದ್ಯೋಗಿಗಳಿಗೆ ನೈಋತ್ಯ ರೈಲ್ವೆ ಮತ್ತೆ ಈ ಶಾಕ್ ಕೊಟ್ಟಿದೆ. ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡಿದ್ದ ಇಲಾಖೆ ಇದೀಗ ಹಾಲ್ ಟಿಕೆಟ್‌ನಲ್ಲಿ ಕನ್ನಡಕ್ಕೆ ಕೊಕ್ ನೀಡಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವ ಆಯ್ಕೆ ಕೊಟ್ಟಿದೆ. ಇದರಿಂದ ಕನ್ನಡಿಗ ಅಭ್ಯರ್ಥಿಗಳಿಗೆ ಸಂಕಷ್ಟ ಎದುರಾಗಿದೆ.

ನೈಋತ್ಯ ರೈಲ್ವೆಯು ಸಹಾಯಕ ಲೋಕೋಪೈಲಟ್ ಹುದ್ದೆಗಳಿಗೆ ಮೇ ತಿಂಗಳಲ್ಲಿ ಸಾಮಾನ್ಯ ವಿಭಾಗದ ಸ್ಪರ್ಧಾತ್ಮಕ ಪಚ್ಚಯ (ಜೆಡಿಸಿಇ) ಸುತ್ತೋಲೆ ಹೊರಡಿಸಿತ್ತು. ಹೀಗಾಗಿ, ಕನ್ನಡಿಗ ಅಭ್ಯರ್ಥಿಗಳು ಪರೀಕ್ಷಾ ಸಿದ್ಧತೆ ಕೈಗೊಂಡಿದ್ದರು.

ಆಗಸ್ಟ್ 3ಕ್ಕೆ ಈ ಪರೀಕ್ಷೆಯಿದೆ. ಆದರೆ, ಈ ನಡುವೆ ಪರೀಕ್ಷಾರ್ಥಿಗಳಿಗೆ ನೀಡಲಾದ ಹಾಲ್ ಟಿಕೆಟ್‌ನಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಬರೆವಂತೆ ಆಯ್ಕೆ ನೀಡಲಾಗಿದೆ. ಹುಬ್ಬಳ್ಳಿ ವಿಭಾಗದಲ್ಲಿ 521, ಮೈಸೂರು 130, ಬೆಂಗಳೂರು ವಿಭಾಗದಲ್ಲಿ 278 ಹುದ್ದೆಗಳಿಗೆ ಈ ಪರೀಕ್ಷೆ ನಡೆಯಲಿದೆ. ಎರಡು ತಿಂಗಳಿಂದ ಪರೀಕ್ಷೆ ಸಿದ್ಧತೆ ನಡೆಸಿದ್ದ ಕನ್ನಡಿಗರು ಇದೀಗ ಮಾತೃಭಾಷೆಯಲ್ಲಿ ಪರೀಕ್ಷೆ ಬರೆವ ಆಯ್ಕೆ ಕಳೆದುಕೊಂಡು ತಲೆ ಮೇಲೆ ಕೈ ಹೊತ್ತಿದ್ದಾರೆ.

ಈ ಹಿಂದೆ ನಡೆದ ಜಿಡಿಸಿಇ ಪರೀಕ್ಷೆಗಳಲ್ಲಿ ಕನ್ನಡದ ಅವಕಾಶ ನೀಡಿದ್ದ ಇಲಾಖೆ ಈ ಬಾರಿ ಯಾಕೆ ನೀಡುತ್ತಿಲ್ಲ ಎಂದು ನೌಕರರು ಪ್ರಶ್ನಿಸಿದ್ದಾರೆ.

ತಮಿಳಲ್ಲಿದೆ, ಕನ್ನಡದಲ್ಲೇಕಿಲ್ಲ?: ದಕ್ಷಿಣ ರೈಲ್ವೆಯು ತಮಿಳುನಾಡಿನಲ್ಲಿ 2017-18 ರಿಂದಲೇ ಸೀಮಿತ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನುತಮಿಳಿನಲ್ಲಿ ಬರೆವ ಆಯ್ಕೆಯನ್ನು ನೀಡಿದೆ. ಪ್ರತಿ ವರ್ಷವೂ ಸಾವಿರಾರು ಬಡ್ಡಿ ಪರೀಕ್ಷೆಗಳು ಆ ರಾಜ್ಯದ ಅಧಿಕೃತ ಭಾಷೆಯಲ್ಲಿ ನಡೆಯುತ್ತಿದೆ. ಆದರೆ, ಕರ್ನಾಟಕದಲ್ಲಿ ನೈಋತ್ಯ ರೈಲ್ವೆಯಿಂದಇದಿನ್ನೂ ಜಾರಿಯಾಗಿಲ್ಲ. ಕನ್ನಡಿಗರು ಹಿಂದಿ/ ಇಂಗ್ಲಿಷ್‌ನಲ್ಲೇ ಪರೀಕ್ಷೆ ಬರೆವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಕಳೆದ ಹತ್ತು ವರ್ಷಗಳಿಂದಲೂ ರಾಜ್ಯದವರು ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ಕೇಳುತ್ತಿದ್ದರೂ ಇನ್ನೂ ಬೇಡಿಕೆ ಈಡೇರಿಲ್ಲ. ‘ನಾವು ಕನ್ನಡದಲ್ಲೇ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ್ದೆವು. ಆದರೆ, ಹಾಲ್ ಟಿಕೆಟ್‌ನಲ್ಲಿ ಹಿಂದಿ/ಇಂಗ್ಲಿಷ್‌ಗೆ ಮಾತ್ರ ಅವಕಾಶ ನೀಡಿರುವ ಕಾರಣ ಸಮಸ್ಯೆಯಾಗಿದೆ. ಇಲಾಖೆ ಪರೀಕ್ಷೆ ಮುಂದೂಡಬೇಕು. ಜೊತೆಗೆ ಕನ್ನಡದ ಆಯ್ಕೆ ನೀಡಬೇಕು’ ಎಂದು ಹೆಸರು ಹೇಳಲಿಚ್ಛಿಸದ ಅಭ್ಯರ್ಥಿ ಹೇಳಿದರು.

ಇಂಗ್ಲಿಷ್ ಜ್ಞಾನಕ್ಕೆ ಪ್ರತ್ಯೇಕ ಪರೀಕ್ಷೆ: ರೈಲ್ವೆ ಮಂಡಳಿ ಪ್ರಕಾರ ಪರೀಕ್ಷೆಯಲ್ಲಿ ಇಂಗ್ಲಿಷ್ ಬದಲಿಗೆ ಪ್ರಾದೇಶಿಕ ಭಾಷೆಯ ಬಳಕೆಗೆ ಅನುಮತಿಸಬಹುದು.

ಏಕಾಏಕಿ ಪರೀಕ್ಷೆಯಲ್ಲಿ ಕನ್ನಡಕ್ಕೆ ಕೊಕ್ ನೀಡಿರುವ ಬಗ್ಗೆ ನೌಕರರ ಸಂಘದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಆ.3ರ ಪರೀಕ್ಷೆಗಳನ್ನೇ ಮುಂದೂಡಲು ಚಿಂತನೆ ನಡೆಸಿದೆ. ಬಳಿಕ ಕನ್ನಡದಲ್ಲಿ ಪ್ರಶ್ನೆಪತ್ರಿಕೆ ನೀಡುವ ಅವಕಾಶ ನೀಡಬೇಕೆ, ಬೇಡವೆ ಎಂಬ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್