ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ಎ.ಎಸ್.ಎನ್ ಕಾನೂನು ಮಾಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ

ನಾಲತವಾಡ : ನವೆಂಬರ್ 1ರಂದು ಎ.ಎಸ್.ಎನ್. ಕಾನೂನು ಮಾಹಾವಿದ್ಯಾಲಯ ನಾಲತವಾಡದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ ರಶ್ಮಿ ಕುಲಕರಣಿ ಅವರು, ನಾವೆಲ್ಲರೂ ಇಂದು 70ನೇ ಕನ್ನಡ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಪ್ರತಿ ವರ್ಷವೂ ನವೆಂಬರ್‌ 1ರಂದು ರಾಜ್ಯದ ಎಲ್ಲೆಡೆ ಜಾತಿ-ಧರ್ಮದ ಭೇದವಿಲ್ಲದೇ ಕನ್ನಡದ ಕಂಪನ್ನು ಪಸರಿಸಲಾಗುತ್ತದೆ. ಈಗ ಕರ್ನಾಟಕ ಎಂದು ನಾವೆಲ್ಲರೂ ಖುಷಿಯಿಂದ ಕರೆಯುವ ನಮ್ಮ ರಾಜ್ಯದ ಹೆಸರು ಮೊದಲು ಮೈಸೂರು ರಾಜ್ಯವಾಗಿತ್ತು. 1956ರ ನವೆಂಬರ್‌ 1ರಂದು ಮೈಸೂರು ರಾಜ್ಯ ನಿರ್ಮಾಣವಾಯಿತು. ಇದರ ನೆನಪಿಗಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು.

ಮೈಸೂರು ಸಂಸ್ಥಾನ, ಮುಂಬೈ ಕರ್ನಾಟಕ, ಹೈದರಾಬಾದ್‌ ಕರ್ನಾಟಕ ಹಾಗೂ ಮದ್ರಾಸ್‌ ಕರ್ನಾಟಕ ಎಂದು ನಾಲ್ಕು ಭಾಗಗಳಾಗಿದ್ದ ಕನ್ನಡ ನಾಡು ಈ ದಿನ ರಾಜಕೀಯವಾಗಿ ಒಂದಾಯಿತು. ದಕ್ಷಿಣ ಭಾರತದಲ್ಲಿ ಕನ್ನಡ ಭಾಷೆ ಮಾತನಾಡುವ ಎಲ್ಲ ಪ್ರದೇಶಗಳನ್ನು ವಿಲೀನಗೊಲೀಸಿ ಒಂದು ರಾಜ್ಯವಾಗಿ ಘೋಷಣೆ ಮಾಡಿದ ಈ ದಿನವನ್ನು ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಪಿ.ಬಿ. ಚೌಡಿಕೇರಿ, ಮನೋಹರ .ಬಿ. ಪಾಟೀಲ್, ರವಿ ನಾಲತವಾಡ, ಬಸವರಾಜ, ಹೆಚ್. ಎಲ್. ಸರೂರ, ವಿರೇಶ್ ಕತ್ತಿ, ಭಾಗ್ಯಶ್ರೀ, ನಿರೂಪಣೆ ರೇಖಾ. ಸಿ. ಕಡೂರ್, ಸ್ವಾಗತ ಶೀಲಾ ನಾಯಕ್, ವಂದನಾರ್ಪಣೆ ಅನ್ನಪೂರ್ಣ ಕಡೂರ್, ಪ್ರಾರ್ಥನ ಗೀತೆ ಹಾಡಿದವರು ಅಂಬಿಕಾ ಹಾಗೂ ಅನ್ನಪೂರ್ಣ , ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಉಪಸ್ಥಿತರಿದ್ದರು.

Latest News

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಕಂದಗನೂರ-ಮುದೂರ ರಸ್ತೆ ದುರಸ್ತಿ : ರೈತರ ಹೊಲಗಳ ದರ ದುಪ್ಪಟ್ಟು-ಶಾಸಕ ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಹಳ್ಳಿಗಳನ್ನು ಸಂಪರ್ಕಿಸುವ ರೈತರ ಹೊಲಗಳಿಗೆ ಹೋಗುವ ರಸ್ತೆಗಳ ಸುಧಾರಣೆಯಿಂದ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ನಾನು  ಕಾಂಗ್ರೆಸ್  ಹೈಕಮಾಂಡ್  ಲಿಸ್ಟ್’ನಲ್ಲಿರುವೆ-C.S.ನಾಡಗೌಡ

ಮುದ್ದೇಬಿಹಾಳ : ‘ಕೆಲವರು ನಾನು ಡಿಕೆಶಿ ಲಿಸ್ಟ್’ನಲ್ಲಿರುವೆ,ಇನ್ನು ಕೆಲವರು ಸಿದ್ಧರಾಮಯ್ಯ ಲಿಸ್ಟ್’ನಲ್ಲಿರುವೆ ಎನ್ನುತ್ತಿದ್ದಾರೆ.ನಾನು ಅವರಿಬ್ಬರ

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ಸವಾರಿ ಮಾಡುವರು : ಕೆ. ಶಿವಕುಮಾರ್

ಚಾಮರಾಜನಗರ : ಪತ್ರಕರ್ತರು ಒಗ್ಗಟ್ಟಾಗದಿದ್ದರೆ ರಾಜಕಾರಣಿಗಳು ನಿಮ್ಮಗಳ ಮೇಲೆ ಸವಾರಿ ಮಾಡುವರು ಎಂದು ವಿಧಾನ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ರೈತರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ತಾಲ್ಲೂಕು ಕೃಷಿ ಕಚೇರಿಗೆ ಮುತ್ತಿಗೆ

ಬೀದರ್ ;- ರಾಜ್ಯದಲ್ಲಿ ಸಂಭವಿಸಿರುವ ನೆರೆ, ಬರ, ಪ್ರವಾಹ ಮೊದಲಾದ ಪ್ರಕೃತಿ ವಿಕೋಪಗಳಿಂದ ರೈತರು,

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆ

ಗುಳಬಾಳ : ಹುಣಸಗಿ ತಾಲ್ಲೂಕಿನ ಗುಳಬಾಳ ಗ್ರಾಮದ ನಿವಾಸಿಯಾದ ಶ್ರೀಮತಿ ಯಂಕಮ್ಮ ಬಮ್ಮನಳ್ಳಿ ಅವರು ಕಲಿತ ಶಾಲೆಗೆ ಮೈಕ್ ಸೌಂಡ್ ಸಿಸ್ಟಮ್ ದೇಣಿಗೆಯಾಗಿ ನೀಡಿದರು. "ನಾನು ಕಲಿತ ಶಾಲೆ ನನ್ನ ಹೆಮ್ಮೆ" ಎಂದು ತಿಳಿದು ಶಾಲೆಯಲ್ಲಿ ನಡೆಯುವ ರಾಷ್ಟ್ರೀಯ ಕಾರ್ಯಕ್ರಮಗಳು ಇನ್ನಿತರೆ ಜಯಂತಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ತಮ್ಮ ವೈಯಕ್ತಿಕ ಹಣದಲ್ಲಿ ಶಾಲೆಗೆ ದೇಣಿಗೆ ನೀಡಿದರು. ಹುಣಸಗಿ ತಾಲೂಕಿನ ಪದವಿದರರೂ ತಮ್ಮ ಊರಿನ ಶಾಲೆಗೆ ದೇಣಿಗೆ ನೀಡಿ ಮಾದರಿಯಾಗಿ

ಬಸರಕೋಡ ಪಿ.ಕೆ.ಪಿ.ಎಸ್ :                                         ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಬಸರಕೋಡ ಪಿ.ಕೆ.ಪಿ.ಎಸ್ : ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ, ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿದೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹೇಮರೆಡ್ಡಿ ಮೇಟಿ,ಉಪಾಧ್ಯಕ್ಷರಾಗಿ ಬಾಬು ಸೂಳಿಭಾವಿ ಎರಡನೇ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ,ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಗಳಿಗೆ ತಲಾ ಒಂದೊAದೇ ನಾಮಪತ್ರ ಸಲ್ಲಿಕೆ ಆದ ಹಿನ್ನೆಲೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ ಎಂದು ಚುನಾವಣಾಧಿಕಾರಿ, ಸಹಕಾರ ಅಭಿವೃದ್ಧಿ ಅಧಿಕಾರಿ ವಿ.ಎಸ್.ಉತ್ನಾಳ ತಿಳಿಸಿದರು. ಎರಡನೇ ಅವಧಿಗೆ