ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ಬೀಳಗಿ: ನಾಗರಾಳ ಗ್ರಾಮದಲ್ಲಿ ದಿಗಂಬರೇಶ್ವರಮಠದ ಸದ್ಭಕ್ತರು ಸರಕಾರದ ಸಹಾಯಧನ ಸ್ವೀಕರಿಸದೇ ಸ್ವಯಂಪ್ರೇರಿತರಾಗಿ 50 ಲಕ್ಷ ರೂಪಾಯಿಗಳ ವಂತಿಗೆ ಸೇರಿಸಿ 60 ದಿನಗಳಲ್ಲಿ ಹಿರಿಯರು ಯುವಕರು ತಾಯಂದಿರು ಕೂಡಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಯಾವುದೇ ಸಂಭಾವನೆ ಪಡಿಯದೇ ಸ್ವಯ ಸೇವಕರಾಗಿ ಭವ್ಯವಾದ ಕಪ್ಪರ ಪಡಿಯಮ್ಮ ತಾಯಿ ಸಮುದಾಯ ಸಭಾ ಭವನವನ್ನು ನಿರ್ಮಿಸಿದ್ದು ಸೆ.22 ರಂದು ಸೋಮವಾರ ಮು.8.00 ಗಂಟೆಗೆ ನಾಡಿನ ಪೂಜ್ಯರ ದಿವ್ಯ ಸಾನಿಧ್ಯದಲ್ಲಿ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ನಾಗರಾಳದ ದಿಗಂಬರೇಶ್ವರಮಠ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ತಿಳಿಸಿದರು.

ಅವರು ದಿಗಂಬರೇಶ್ವರಮಠದಲ್ಲಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿ ಇಂಗಳೇಶ್ವರ ವಚನ ಶಿಲಾಮಂಟಪ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿ,
ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಪೂಜ್ಯರು ದಿವ್ಯಸಾನಿದ್ಯವಹಿಸಲಿದ್ದಾರೆ ಎಂದರು.

ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸದಾಕಾಲ ಹೊಸದನ್ನೇ ಪ್ರಯೋಗ ಮಾಡುವ ಈ ಗ್ರಾಮದ ಜನರು ಸಮುದಾಯ ಭವನ ನಿರ್ಮಿಸಿದರಿಂದ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದಂತಹ ಧಾರ್ಮಿಕ ಹಾಗೂ ಸಾಹಿತ್ಯಿಕ , ಸಾಂಸ್ಕೃತಿಕ, ಶೈಕ್ಷಣಿಕವಾದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸುಸಜ್ಜಿತವಾದ ವೇದಿಕೆಯನ್ನು ಒದಗಿಸಿದ್ದು ನಮಗೆ ಸಂತೋಷ ತಂದಿದೆ.

ಸಪ್ಟೆಂಬರ್ 22ರಂದು ಬೆಳಿಗ್ಗೆ 7 ಕ್ಕೆ ಹೋಮ ಹವನ ಪೂಜಾ ಕಾರ್ಯಕ್ರಮ 8 ಗಂಟೆಗೆ ನಾಡದೇವಿ ಮೂರ್ತಿ ಭವ್ಯ ಮೆರವಣಿಗೆ. 501 ಮಹಿಳೆಯರಿಂದ ಕುಂಭಮೇಳ. ನಾವಲಗಿಯ ಪ್ರಸಿದ್ಧ ಸಂಬಳ ವಾದನ ನಾಡಿನ ಪ್ರಸಿದ್ಧ ಕಲಾವಿದರಿಂದ ಭವ್ಯ ಮೆರವಣಿಗೆ. ನಂತರ 11 ಗಂಟೆಗೆ 1001 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ನಾಡಿನ ಹರ ಗುರು ಚರಮೂರ್ತಿಗಳ ಅಮೃತ ಹಸ್ತದಿಂದ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ ಎಂದು ದಿಗಂಬರೇಶ್ವರ ಮಠ ನಾಗರಾಳ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಮಹಾಸ್ವಾಮಿಗಳು ಸೇರಿದಂತೆ ದಿಗಂಬರೇಶ್ವರ ಮಠದ ಸದ್ಭಕ್ತರು ಭಾಗಿಯಾಗಿದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,