ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ನಾಗರಾಳ ಸದ್ಭಕ್ತರು ನಿರ್ಮಿಸಿದ ಕಪ್ಪರ ಪಡಿಯಮ್ಮತಾಯಿ ಸಮುದಾಯ ಸಭಾ ಭವನ ನಾಳೆ ಲೋಕಾರ್ಪಣೆ

ಬೀಳಗಿ: ನಾಗರಾಳ ಗ್ರಾಮದಲ್ಲಿ ದಿಗಂಬರೇಶ್ವರಮಠದ ಸದ್ಭಕ್ತರು ಸರಕಾರದ ಸಹಾಯಧನ ಸ್ವೀಕರಿಸದೇ ಸ್ವಯಂಪ್ರೇರಿತರಾಗಿ 50 ಲಕ್ಷ ರೂಪಾಯಿಗಳ ವಂತಿಗೆ ಸೇರಿಸಿ 60 ದಿನಗಳಲ್ಲಿ ಹಿರಿಯರು ಯುವಕರು ತಾಯಂದಿರು ಕೂಡಿಕೊಂಡು ಯಾವುದೇ ಪ್ರತಿಫಲಾಪೇಕ್ಷೆ ಬಯಸದೇ ಯಾವುದೇ ಸಂಭಾವನೆ ಪಡಿಯದೇ ಸ್ವಯ ಸೇವಕರಾಗಿ ಭವ್ಯವಾದ ಕಪ್ಪರ ಪಡಿಯಮ್ಮ ತಾಯಿ ಸಮುದಾಯ ಸಭಾ ಭವನವನ್ನು ನಿರ್ಮಿಸಿದ್ದು ಸೆ.22 ರಂದು ಸೋಮವಾರ ಮು.8.00 ಗಂಟೆಗೆ ನಾಡಿನ ಪೂಜ್ಯರ ದಿವ್ಯ ಸಾನಿಧ್ಯದಲ್ಲಿ ನೂತನ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ ಎಂದು ನಾಗರಾಳದ ದಿಗಂಬರೇಶ್ವರಮಠ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ತಿಳಿಸಿದರು.

ಅವರು ದಿಗಂಬರೇಶ್ವರಮಠದಲ್ಲಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿ ಇಂಗಳೇಶ್ವರ ವಚನ ಶಿಲಾಮಂಟಪ ವಿರಕ್ತಮಠದ ಚನ್ನಬಸವ ಸ್ವಾಮೀಜಿ,ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮೀಜಿ,
ಗಿರಿಸಾಗರ ಕಲ್ಯಾಣ ಹಿರೇಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಪೂಜ್ಯರು ದಿವ್ಯಸಾನಿದ್ಯವಹಿಸಲಿದ್ದಾರೆ ಎಂದರು.

ಶೈಕ್ಷಣಿಕ, ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸದಾಕಾಲ ಹೊಸದನ್ನೇ ಪ್ರಯೋಗ ಮಾಡುವ ಈ ಗ್ರಾಮದ ಜನರು ಸಮುದಾಯ ಭವನ ನಿರ್ಮಿಸಿದರಿಂದ ಪ್ರತಿ ವರ್ಷ ನಡೆಯುವ ನವರಾತ್ರಿ ಉತ್ಸವದಂತಹ ಧಾರ್ಮಿಕ ಹಾಗೂ ಸಾಹಿತ್ಯಿಕ , ಸಾಂಸ್ಕೃತಿಕ, ಶೈಕ್ಷಣಿಕವಾದ ಸಮಾಜಮುಖಿ ಕಾರ್ಯಕ್ರಮಗಳಿಗೆ ಸುಸಜ್ಜಿತವಾದ ವೇದಿಕೆಯನ್ನು ಒದಗಿಸಿದ್ದು ನಮಗೆ ಸಂತೋಷ ತಂದಿದೆ.

ಸಪ್ಟೆಂಬರ್ 22ರಂದು ಬೆಳಿಗ್ಗೆ 7 ಕ್ಕೆ ಹೋಮ ಹವನ ಪೂಜಾ ಕಾರ್ಯಕ್ರಮ 8 ಗಂಟೆಗೆ ನಾಡದೇವಿ ಮೂರ್ತಿ ಭವ್ಯ ಮೆರವಣಿಗೆ. 501 ಮಹಿಳೆಯರಿಂದ ಕುಂಭಮೇಳ. ನಾವಲಗಿಯ ಪ್ರಸಿದ್ಧ ಸಂಬಳ ವಾದನ ನಾಡಿನ ಪ್ರಸಿದ್ಧ ಕಲಾವಿದರಿಂದ ಭವ್ಯ ಮೆರವಣಿಗೆ. ನಂತರ 11 ಗಂಟೆಗೆ 1001 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ. ನಾಡಿನ ಹರ ಗುರು ಚರಮೂರ್ತಿಗಳ ಅಮೃತ ಹಸ್ತದಿಂದ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ ಎಂದು ದಿಗಂಬರೇಶ್ವರ ಮಠ ನಾಗರಾಳ ಶೇಷಪ್ಪಯ್ಯ ಗುರುನಿಂಗಪ್ಪಯ್ಯ ಮಹಾಸ್ವಾಮಿಗಳು ಹೇಳಿದ್ದಾರೆ.

ಈ ಸಂದರ್ಭದಲ್ಲಿ ನಿಂಗಪ್ಪಯ್ಯ ಗುರುಶೇಷಪ್ಪಯ್ಯ ಮಹಾಸ್ವಾಮಿಗಳು ಸೇರಿದಂತೆ ದಿಗಂಬರೇಶ್ವರ ಮಠದ ಸದ್ಭಕ್ತರು ಭಾಗಿಯಾಗಿದ್ದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ