ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ವಕ್ಕಲೇರಿ ಗ್ರಾಪಂ ಅಧ್ಯಕ್ಷೆ ರಾಧಾ ಮಂಜುನಾಥ್ ಉದ್ಘಾಟಿಸಿ ಮಾತನಾಡಿ, ಭಾರತೀಯರಿಗೆ ಇದು ಎಂದು ಮರೆಯದ ದಿನವಾಗಿದೆ ದೇಶದ ಅವಿಸ್ಮರಣೀಯ ದಿನಗಳಲ್ಲಿ ಜುಲೈ 26 ಒಂದಾಗಿದೆ ಕಾರ್ಗಿಲ್‌ ಯುದ್ಧ ಭಾರತದ ಪ್ರತಿಯೊಬ್ಬ ಪ್ರಜೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ. ಜಮ್ಮು ಕಾಶ್ಮೀರದ ಕಾರ್ಗಿಲ್‌ನಲ್ಲಿ ನಡೆದ ಈ ಯುದ್ಧದಲ್ಲಿ ಪಾಕಿಸ್ತಾನವನ್ನು ನಮ್ಮ ಭಾರತದ ವೀರ ಯೋಧರು ಸದೆ ಬಡೆದು ಅವರು ಆಕ್ರಮಿಸಿಕೊಂಡಿದ್ದ ಜಾಗವನ್ನು ವಶಕ್ಕೆ ಪಡೆದ ದಿನವಾಗಿದೆ ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ವಕ್ಕಲೇರಿ ರಾಜಪ್ಪ ಮಾತನಾಡಿ ದೇಶ ಸೇವೆ ಮಾಡುವ ಅವಕಾಶ ಎಲ್ಲರಿಗೂ ಸಿಗುವುದಿಲ್ಲ ನಮ್ಮ ದೇಶದ ಸೈನಿಕರು ನಮ್ಮ ಹೆಮ್ಮೆಯಾಗಿದ್ದಾರೆ. ಅವರು ಇಲ್ಲದೇ ಹೋದರೆ ನಮ್ಮ ರಕ್ಷಣೆ ಅಸಾಧ್ಯವಾಗುತ್ತದೆ ದೇಶ ಭಕ್ತಿ ಎಂಬುದು ನಮ್ಮಲ್ಲಿ ತಾನಾಗಿಯೇ ಬರಬೇಕು ನಿಮ್ಮಲ್ಲಿ ಇರುವವರು ಕೂಡ ನಾನು ದೇಶದ ಸೈನಿಕನಾಗಿ ಕಾರ್ಯನಿರ್ವಹಿಸುತ್ತೇನೆ ಎಂಬ ಛಲ ನಿಮ್ಮಲ್ಲಿ ಬರಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೈನಿಕರಾದ ಶೆಟ್ಟಿಗಾನಹಳ್ಳಿ ಮುನಿಯಪ್ಪ, ದೊಡ್ಡ ಅಯ್ಯೂರು ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು, ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು, ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರಾದ ನಾರಾಯಣಪ್ಪ, ಗೌಡರ ವೆಂಕಟಪ್ಪ, ಗೋವಿಂದಪ್ಪ, ಕನ್ವೀನರ್ ರಾಜಣ್ಣ, ಪೂಜಾರಿ ರಘು, ಭಗತ್ ಸಿಂಗ್ ಸೇವಾ ಸಮಿತಿ ಅಧ್ಯಕ್ಷ ಮೋಹನ್ ಉಪಾಧ್ಯಕ್ಷ ಮಾರ್ಕೊಂಡಯ್ಯ, ಸಮಿತಿ ಸದಸ್ಯರಾದ ರವಿಕುಮಾರ್, ನವೀನ್, ನೃತ್ಯ ನಿರ್ದೇಶಕ ಶ್ರವಣ್ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿಧ್ಯಾರ್ಥಿಗಳು ಮತ್ತು ಗ್ರಾಮಸ್ಥರು ಇದ್ದರು ಕಾರ್ಯಕ್ರಮವನ್ನು ದೊಮ್ಮಸಂದ್ರ ನರಸಿಂಹ ನಿರೂಪಣೆ ಮಾಡಿದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ