ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ ಆದಮ್ಯ ಸಾಹಸ ಅಪ್ರತಿಮೆ ದೇಶಭಕ್ತಿಯ ಸ್ಪೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಭೆಯ ಘನತೆ ಗೌರವವನ್ನು ಮುಗಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ದದ ವೀರ ಹುತಾತ್ಮರಿಗೆ ಶತ ಶತ ನಮನಗಳನ್ನು ಸಲ್ಲಿಸುವ ಜೊತೆಗೆ ರೈತ ಮತ್ತು ಯೋಧರನ್ನು ಸರ್ಕಾರಗಳು ನಿರ್ಲಕ್ಷ ಮಾಡಬಾರದೆಂದು ಕಿವಿ ಮಾತು ಹೇಳಿದರು.

ಕಾರ್ಗಿಲ್ ವಿಜಯ ದಿವಸಕ್ಕೆ ಇಂದು ರಜತ ಸಂಭ್ರಮ ಭಾರತೀಯ ಸೇನೆಯ ಶೌರ್ಯ ಸಾಹಸಗಾಥೆ ಎಂದೆದಿಗೂ ಪ್ರೇರಣಾದಾಯಿ ಭಾರತದ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಜೊತೆಗೆ ಪಾಕಿಸ್ತಾನದ ವಿರುದ್ದ ಭಾರತ ವಿಜಿಯ ಸಾದಿಸಿದ ಸಂಭ್ರವನ್ನು ಆಚರಿಸುವ ಕ್ಷಣವು ಹೌದು, ಭಾವೈಕ್ಯತೆಯನ್ನು ಜಾಗೃತಗೊಳಿಸಿದ ಕಾರ್ಗ್ರಿಲ್ ಯುದ್ದ ದೇಶ ಮೊದಲು ಎಂಬ ಉದಾತ್ತ ಭಾವಕ್ಕೆ ಜೀವ ತುಂಬಿತು ಭಯೋತ್ಪಾದನೆ ಹಾಗೂ ದೇಶ ದ್ರೋಹಿಗಳ ವಿರುದ್ದ ಕಠಿಣ ಕ್ರಮವೇ ಅನಿರ್ವಾಯ ಎಂಬುದನ್ನು ಕಾರ್ಗಿಲ್ ಸಮರ ಸಾಬೀತು ಮಾಡಿತು.

ಕಾರ್ಗಿಲ್ ಸಮರ ಪಾಕಿಸ್ತಾನಕ್ಕೆ ಹಲವು ಪಾಠಗಳನ್ನು ಕಲಿಸಿದಲ್ಲದೆ ಅಂತರ ರಾಷ್ಟ್ರೀಯ ವಲಯದಲ್ಲಿ ಅದರ ಮುಖವಾಡವನ್ನು ಬಯಲು ಮಾಡಿತು. ಗಡಿಯನ್ನು ಕಾಯುವ ಯೋಧರನ್ನು ಗೌರವಿಸುತ್ತಾ ರಾಷ್ಟ್ರಕ್ಕಾಗಿ ಜೀವಿಸುವ ಸಂಕಲ್ಪವನ್ನು ಕೈಗೊಂಡಲು ಈ ವಿಜಯದಿನ ಕಾರ್ಗಿಲ್ ವಿಜಯ ೨೫ನೇ ವರ್ಷಾಚರಣೆಯ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಧರನ್ನು ಗುರುತಿಸುವ ಇಚ್ಛಾಶಕ್ತಿ ಸರ್ಕಾರಗಳು ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ತನ್ನ ಜೀವವನ್ನು ಮುಡುಪಾಗಿಟ್ಟಿರುವ ಲಕ್ಷಾಂತರ ಕುಟುಂಬಗಳ ರಕ್ಷಣೆಗೆ ಸರ್ಕಾರ ನಿಲ್ಲುತ್ತಿಲ್ಲ. ಹುತಾತ್ಮರಾದ ಯೋಧರನ್ನು ಅವರ ಅಂತ್ಯಕ್ರಿಯೆ ಆಗುವರೆಗೂ ಮಾಧ್ಯಮದ ಮುಂದೆ ಸರ್ಕಾರಗಳು ವಿವಿಧ ಆಸ್ವಾಶಣೆ ನೀಡಿ ಕಡೆಗೆ ಸರ್ಕಾರಗಳು ಕುಟುಂಬಗಳು ವರ್ಷಾನಗಟ್ಟಲೆ ಅಲೆದಾಡಿದರು ಕನಿಷ್ಠ ಅವರ ಸಮಸ್ಯೆ ಬಗ್ಗೆ ವಿಚಾರಿಸುವ ಅಧಿಕಾರಿಗಳು ಇರುವುದಿಲ್ಲವೆಂದು ಆರೋಪ ಮಾಡಿದರು.

ಸರ್ಕಾರವೇ ಮಂಜೂರು ಮಾಡುವ ಸರ್ಕಾರಿ ಜಮೀನಿಗಾಗಿ ೨೫ ವರ್ಷಗಳಿಂದ ಜಿಲ್ಲಾಡಳಿತ ತಾಲ್ಲೂಕು ಆಡಳಿತಕ್ಕೆ ಅಲೆದಾಡಿದರು ಯಾವುದೇ ನ್ಯಾಯ ಸಿಗುತ್ತಿಲ್ಲ. ಕಡೆಗೆ ದೇಶ ಕಾದು ತನ್ನ ಪ್ರಾಣವನ್ನು ಅರ್ಪಣೆ ಮಾಡಿದ ಕುಟುಂಬಗಳು ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಇರುವುದು ದುರದೃಷ್ಟಕರ ಎಂದರು.

ಪದವಿ ಪಡೆದು ಉದ್ಯೋಗ ಸಿಗದೆ ಪರದಾಡುತ್ತಿರುವ ಯುವ ಪೀಳಿಗೆಗೆ ಅನುಕೂಲವಾಗುವ ಅಗ್ನಿಪತ್ ಮೂಲಕ ಹೆಚ್ಚಿನ ಸೇನೆಗೆ ನೇಮಕ ಮಾಡಿಕೊಳ್ಳಬೇಕು. ನಿರುದ್ಯೋಗ ತಪ್ಪಿಸಿ ಯುವಕರು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಬೇಕೆಂದು ಸರ್ಕಾರಗಳಿಗೆ ಸಲಹೆ ನೀಡಿದರು.

ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮತ್ತಿತರರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಸೈನಿಕರ ವಿವಿಧ ಬೇಡಿಕೆಗಳನ್ನು ಹೀಡೇರಿಸಲು ಇಚ್ಚಾಸಕ್ತಿ ಕೊರತೆ ಇದೆ. ಜಮೀನು ಇಲ್ಲ. ಶಾಲೆ ಇಲ್ಲ. ಕನಿಷ್ಠ ಪಕ್ಷ ಯೋಧರ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲು ಜಾಗವನ್ನು ಸಹ ನೀಡುತ್ತಿಲ್ಲವೆಂದು ಸರ್ಕಾರದ ಯೋಧರ ವಿರೋಧಿ ನೀತಿಯನ್ನು ಖಂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ, ನಿವೃತ್ತಿ ಯೋಧರು ಭಾಗವಹಿಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು