ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ ಆದಮ್ಯ ಸಾಹಸ ಅಪ್ರತಿಮೆ ದೇಶಭಕ್ತಿಯ ಸ್ಪೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಭೆಯ ಘನತೆ ಗೌರವವನ್ನು ಮುಗಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ದದ ವೀರ ಹುತಾತ್ಮರಿಗೆ ಶತ ಶತ ನಮನಗಳನ್ನು ಸಲ್ಲಿಸುವ ಜೊತೆಗೆ ರೈತ ಮತ್ತು ಯೋಧರನ್ನು ಸರ್ಕಾರಗಳು ನಿರ್ಲಕ್ಷ ಮಾಡಬಾರದೆಂದು ಕಿವಿ ಮಾತು ಹೇಳಿದರು.

ಕಾರ್ಗಿಲ್ ವಿಜಯ ದಿವಸಕ್ಕೆ ಇಂದು ರಜತ ಸಂಭ್ರಮ ಭಾರತೀಯ ಸೇನೆಯ ಶೌರ್ಯ ಸಾಹಸಗಾಥೆ ಎಂದೆದಿಗೂ ಪ್ರೇರಣಾದಾಯಿ ಭಾರತದ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಜೊತೆಗೆ ಪಾಕಿಸ್ತಾನದ ವಿರುದ್ದ ಭಾರತ ವಿಜಿಯ ಸಾದಿಸಿದ ಸಂಭ್ರವನ್ನು ಆಚರಿಸುವ ಕ್ಷಣವು ಹೌದು, ಭಾವೈಕ್ಯತೆಯನ್ನು ಜಾಗೃತಗೊಳಿಸಿದ ಕಾರ್ಗ್ರಿಲ್ ಯುದ್ದ ದೇಶ ಮೊದಲು ಎಂಬ ಉದಾತ್ತ ಭಾವಕ್ಕೆ ಜೀವ ತುಂಬಿತು ಭಯೋತ್ಪಾದನೆ ಹಾಗೂ ದೇಶ ದ್ರೋಹಿಗಳ ವಿರುದ್ದ ಕಠಿಣ ಕ್ರಮವೇ ಅನಿರ್ವಾಯ ಎಂಬುದನ್ನು ಕಾರ್ಗಿಲ್ ಸಮರ ಸಾಬೀತು ಮಾಡಿತು.

ಕಾರ್ಗಿಲ್ ಸಮರ ಪಾಕಿಸ್ತಾನಕ್ಕೆ ಹಲವು ಪಾಠಗಳನ್ನು ಕಲಿಸಿದಲ್ಲದೆ ಅಂತರ ರಾಷ್ಟ್ರೀಯ ವಲಯದಲ್ಲಿ ಅದರ ಮುಖವಾಡವನ್ನು ಬಯಲು ಮಾಡಿತು. ಗಡಿಯನ್ನು ಕಾಯುವ ಯೋಧರನ್ನು ಗೌರವಿಸುತ್ತಾ ರಾಷ್ಟ್ರಕ್ಕಾಗಿ ಜೀವಿಸುವ ಸಂಕಲ್ಪವನ್ನು ಕೈಗೊಂಡಲು ಈ ವಿಜಯದಿನ ಕಾರ್ಗಿಲ್ ವಿಜಯ ೨೫ನೇ ವರ್ಷಾಚರಣೆಯ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಧರನ್ನು ಗುರುತಿಸುವ ಇಚ್ಛಾಶಕ್ತಿ ಸರ್ಕಾರಗಳು ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ತನ್ನ ಜೀವವನ್ನು ಮುಡುಪಾಗಿಟ್ಟಿರುವ ಲಕ್ಷಾಂತರ ಕುಟುಂಬಗಳ ರಕ್ಷಣೆಗೆ ಸರ್ಕಾರ ನಿಲ್ಲುತ್ತಿಲ್ಲ. ಹುತಾತ್ಮರಾದ ಯೋಧರನ್ನು ಅವರ ಅಂತ್ಯಕ್ರಿಯೆ ಆಗುವರೆಗೂ ಮಾಧ್ಯಮದ ಮುಂದೆ ಸರ್ಕಾರಗಳು ವಿವಿಧ ಆಸ್ವಾಶಣೆ ನೀಡಿ ಕಡೆಗೆ ಸರ್ಕಾರಗಳು ಕುಟುಂಬಗಳು ವರ್ಷಾನಗಟ್ಟಲೆ ಅಲೆದಾಡಿದರು ಕನಿಷ್ಠ ಅವರ ಸಮಸ್ಯೆ ಬಗ್ಗೆ ವಿಚಾರಿಸುವ ಅಧಿಕಾರಿಗಳು ಇರುವುದಿಲ್ಲವೆಂದು ಆರೋಪ ಮಾಡಿದರು.

ಸರ್ಕಾರವೇ ಮಂಜೂರು ಮಾಡುವ ಸರ್ಕಾರಿ ಜಮೀನಿಗಾಗಿ ೨೫ ವರ್ಷಗಳಿಂದ ಜಿಲ್ಲಾಡಳಿತ ತಾಲ್ಲೂಕು ಆಡಳಿತಕ್ಕೆ ಅಲೆದಾಡಿದರು ಯಾವುದೇ ನ್ಯಾಯ ಸಿಗುತ್ತಿಲ್ಲ. ಕಡೆಗೆ ದೇಶ ಕಾದು ತನ್ನ ಪ್ರಾಣವನ್ನು ಅರ್ಪಣೆ ಮಾಡಿದ ಕುಟುಂಬಗಳು ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಇರುವುದು ದುರದೃಷ್ಟಕರ ಎಂದರು.

ಪದವಿ ಪಡೆದು ಉದ್ಯೋಗ ಸಿಗದೆ ಪರದಾಡುತ್ತಿರುವ ಯುವ ಪೀಳಿಗೆಗೆ ಅನುಕೂಲವಾಗುವ ಅಗ್ನಿಪತ್ ಮೂಲಕ ಹೆಚ್ಚಿನ ಸೇನೆಗೆ ನೇಮಕ ಮಾಡಿಕೊಳ್ಳಬೇಕು. ನಿರುದ್ಯೋಗ ತಪ್ಪಿಸಿ ಯುವಕರು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಬೇಕೆಂದು ಸರ್ಕಾರಗಳಿಗೆ ಸಲಹೆ ನೀಡಿದರು.

ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮತ್ತಿತರರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಸೈನಿಕರ ವಿವಿಧ ಬೇಡಿಕೆಗಳನ್ನು ಹೀಡೇರಿಸಲು ಇಚ್ಚಾಸಕ್ತಿ ಕೊರತೆ ಇದೆ. ಜಮೀನು ಇಲ್ಲ. ಶಾಲೆ ಇಲ್ಲ. ಕನಿಷ್ಠ ಪಕ್ಷ ಯೋಧರ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲು ಜಾಗವನ್ನು ಸಹ ನೀಡುತ್ತಿಲ್ಲವೆಂದು ಸರ್ಕಾರದ ಯೋಧರ ವಿರೋಧಿ ನೀತಿಯನ್ನು ಖಂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ, ನಿವೃತ್ತಿ ಯೋಧರು ಭಾಗವಹಿಸಿದರು.

Latest News

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ಪ್ರತಿಭಾ ಕಾರಂಜಿಯಲ್ಲಿ ಮಕ್ಕಳ ಕಲರವ

ನಾಲತವಾಡ: ಸಮೀಪದ ಲೊಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತಿಯ ಕಾಂತಿ ಮಕ್ಕಳ ಮೂಲಕ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮಹಿಳೆಯರಿಗೆ ಋತುಚಕ್ರ ರಜೆ :ಸರ್ಕಾರದಿಂದ ಮಾನವೀಯ ಸಂವೇದನೆಯ ಆದೇಶ-ಸಂಗೀತಾ ನಾಡಗೌಡ

ಮುದ್ದೇಬಿಹಾಳ : ರಾಜ್ಯ ಸರ್ಕಾರ ಎರಡು ದಿನಗಳ ಹಿಂದಷ್ಟೇ ರಾಜ್ಯದ ಸರ್ಕಾರಿ,ಖಾಸಗಿ.ಗುತ್ತಿಗೆ,ಹೊರಗುತ್ತಿಗೆ ಕ್ಷೇತ್ರದಲ್ಲಿ ಸೇವೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ  :       ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ನ.16 ರಂದು ವಿಜಯಪುರದಲ್ಲಿ ಪದಗ್ರಹಣ : ಮುದ್ದೇಬಿಹಾಳ A.I.B.S.S ಸಂಘಕ್ಕೆ ಬಹಾದ್ದೂರ ರಾಠೋಡ ಪುನರಾಯ್ಕೆ

ಮುದ್ದೇಬಿಹಾಳ : ಬಂಜಾರಾ ಸಮಾಜದ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಲು, ಸಮಾಜದ ಮಕ್ಕಳು ಶೈಕ್ಷಣಿಕ,ಔದ್ಯೋಗಿಕ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಅಸ್ಕಿ ಫೌಂಡೇಶನ್‌ದಿಂದ 50 ಸಾವಿರ ರೂ.ನೆರವು: ಕೆಬಿಜೆಎನ್‌ಎಲ್‌ದಿಂದ ರಕ್ಷಣಾಗೋಡೆ ನಿರ್ಮಾಣಕ್ಕೆ ಸಿ.ಬಿ.ಅಸ್ಕಿ ಒತ್ತಾಯ

ಮುದ್ದೇಬಿಹಾಳ : ತಂಗಡಗಿ ಇಳಿಜಾರಿನಿಂದ ಶಿರೋಳ ಗ್ರಾಮದ ಬಳಿ ಹಾಯ್ದು ಹೋಗಿರುವ ಕೆಬಿಜೆಎನ್‌ಎಲ್‌ನ ಎಡದಂಡೆ

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ ಮಂಗಳವಾರ ಮದ್ಯಾಹ್ನ ನಡೆದಿದೆ. ಈ ಘಟನೆ ಹಿನ್ನೆಲೆಯಲ್ಲಿ ಅಗ್ನಿಶಾಮಕ ಠಾಣೆ ಹಾಗೂ ಪೊಲೀಸ್ ಇಲಾಖೆಯಿಂದ ಶೋಧ ಕಾರ್ಯ ಮುಂದುವರೆದಿದೆ. ಮಹೆಬೂಬ ನಗರದ ಪಕ್ಕದಲ್ಲಿರುವ ಆಶ್ರಯ ಕಾಲನಿಯಲ್ಲಿ ವಾಸವಿದ್ದ ಸುಡಗಾಡ ಸಿದ್ಧ ಜನಾಂಗದ ಇಬ್ಬರು ಯುವಕರು, ಓರ್ವ ಯುವತಿ ಕಾಲುವೆಯಲ್ಲಿ ಮುಳುಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರಿಂದ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ. ಬಸಮ್ಮ ಚೆನ್ನಪ್ಪ ಕೊಣ್ಣೂರ(21),

ಐದು ದಿನಗಳ ಹೋರಾಟ ಅಂತ್ಯ :                                       ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ  ಅಧಿಕೃತ ಘೋಷಣೆ

ಐದು ದಿನಗಳ ಹೋರಾಟ ಅಂತ್ಯ : ಟನ್ ಕಬ್ಬಿಗೆ 3264 – ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಅಧಿಕೃತ ಘೋಷಣೆ

ಮುದ್ದೇಬಿಹಾಳ : ಕಬ್ಬಿನ ರಿಕವರಿ ಆಧಾರದ ಮೇಲೆ ಟನ್ ಕಬ್ಬಿಗೆ 3264 ರೂ.ನೀಡುವುದಾಗಿ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಶನಿವಾರ ಅಧಿಕೃತ ಘೋಷಣೆ ಮಾಡಿದ್ದು ಕಳೆದ ಐದು ದಿನಗಳಿಂದ ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ನಡೆಯುತ್ತಿದ್ದ ರೈತರ ಹೋರಾಟ ಅಂತ್ಯಗೊAಡಿದೆ. ತಾಲ್ಲೂಕಿನ ಅಮರಗೋಳ ಕ್ರಾಸ್ ಬಳಿ ಕಬ್ಬಿನ ವಾಹನಗಳನ್ನು ತಡೆದು ನಿಲ್ಲಿಸಿ ಕರ್ನಾಟಕ ರೈತ ಸಂಘ ಹಾಗೂ ರೈತಪರ ಸಂಘಟನೆಯ ಮುಖಂಡರು ಹೋರಾಟ ಆರಂಭಿಸಿದ್ದರು.ಇಲ್ಲಿನ