ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ ಆದಮ್ಯ ಸಾಹಸ ಅಪ್ರತಿಮೆ ದೇಶಭಕ್ತಿಯ ಸ್ಪೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಭೆಯ ಘನತೆ ಗೌರವವನ್ನು ಮುಗಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ದದ ವೀರ ಹುತಾತ್ಮರಿಗೆ ಶತ ಶತ ನಮನಗಳನ್ನು ಸಲ್ಲಿಸುವ ಜೊತೆಗೆ ರೈತ ಮತ್ತು ಯೋಧರನ್ನು ಸರ್ಕಾರಗಳು ನಿರ್ಲಕ್ಷ ಮಾಡಬಾರದೆಂದು ಕಿವಿ ಮಾತು ಹೇಳಿದರು.

ಕಾರ್ಗಿಲ್ ವಿಜಯ ದಿವಸಕ್ಕೆ ಇಂದು ರಜತ ಸಂಭ್ರಮ ಭಾರತೀಯ ಸೇನೆಯ ಶೌರ್ಯ ಸಾಹಸಗಾಥೆ ಎಂದೆದಿಗೂ ಪ್ರೇರಣಾದಾಯಿ ಭಾರತದ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಜೊತೆಗೆ ಪಾಕಿಸ್ತಾನದ ವಿರುದ್ದ ಭಾರತ ವಿಜಿಯ ಸಾದಿಸಿದ ಸಂಭ್ರವನ್ನು ಆಚರಿಸುವ ಕ್ಷಣವು ಹೌದು, ಭಾವೈಕ್ಯತೆಯನ್ನು ಜಾಗೃತಗೊಳಿಸಿದ ಕಾರ್ಗ್ರಿಲ್ ಯುದ್ದ ದೇಶ ಮೊದಲು ಎಂಬ ಉದಾತ್ತ ಭಾವಕ್ಕೆ ಜೀವ ತುಂಬಿತು ಭಯೋತ್ಪಾದನೆ ಹಾಗೂ ದೇಶ ದ್ರೋಹಿಗಳ ವಿರುದ್ದ ಕಠಿಣ ಕ್ರಮವೇ ಅನಿರ್ವಾಯ ಎಂಬುದನ್ನು ಕಾರ್ಗಿಲ್ ಸಮರ ಸಾಬೀತು ಮಾಡಿತು.

ಕಾರ್ಗಿಲ್ ಸಮರ ಪಾಕಿಸ್ತಾನಕ್ಕೆ ಹಲವು ಪಾಠಗಳನ್ನು ಕಲಿಸಿದಲ್ಲದೆ ಅಂತರ ರಾಷ್ಟ್ರೀಯ ವಲಯದಲ್ಲಿ ಅದರ ಮುಖವಾಡವನ್ನು ಬಯಲು ಮಾಡಿತು. ಗಡಿಯನ್ನು ಕಾಯುವ ಯೋಧರನ್ನು ಗೌರವಿಸುತ್ತಾ ರಾಷ್ಟ್ರಕ್ಕಾಗಿ ಜೀವಿಸುವ ಸಂಕಲ್ಪವನ್ನು ಕೈಗೊಂಡಲು ಈ ವಿಜಯದಿನ ಕಾರ್ಗಿಲ್ ವಿಜಯ ೨೫ನೇ ವರ್ಷಾಚರಣೆಯ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಧರನ್ನು ಗುರುತಿಸುವ ಇಚ್ಛಾಶಕ್ತಿ ಸರ್ಕಾರಗಳು ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ತನ್ನ ಜೀವವನ್ನು ಮುಡುಪಾಗಿಟ್ಟಿರುವ ಲಕ್ಷಾಂತರ ಕುಟುಂಬಗಳ ರಕ್ಷಣೆಗೆ ಸರ್ಕಾರ ನಿಲ್ಲುತ್ತಿಲ್ಲ. ಹುತಾತ್ಮರಾದ ಯೋಧರನ್ನು ಅವರ ಅಂತ್ಯಕ್ರಿಯೆ ಆಗುವರೆಗೂ ಮಾಧ್ಯಮದ ಮುಂದೆ ಸರ್ಕಾರಗಳು ವಿವಿಧ ಆಸ್ವಾಶಣೆ ನೀಡಿ ಕಡೆಗೆ ಸರ್ಕಾರಗಳು ಕುಟುಂಬಗಳು ವರ್ಷಾನಗಟ್ಟಲೆ ಅಲೆದಾಡಿದರು ಕನಿಷ್ಠ ಅವರ ಸಮಸ್ಯೆ ಬಗ್ಗೆ ವಿಚಾರಿಸುವ ಅಧಿಕಾರಿಗಳು ಇರುವುದಿಲ್ಲವೆಂದು ಆರೋಪ ಮಾಡಿದರು.

ಸರ್ಕಾರವೇ ಮಂಜೂರು ಮಾಡುವ ಸರ್ಕಾರಿ ಜಮೀನಿಗಾಗಿ ೨೫ ವರ್ಷಗಳಿಂದ ಜಿಲ್ಲಾಡಳಿತ ತಾಲ್ಲೂಕು ಆಡಳಿತಕ್ಕೆ ಅಲೆದಾಡಿದರು ಯಾವುದೇ ನ್ಯಾಯ ಸಿಗುತ್ತಿಲ್ಲ. ಕಡೆಗೆ ದೇಶ ಕಾದು ತನ್ನ ಪ್ರಾಣವನ್ನು ಅರ್ಪಣೆ ಮಾಡಿದ ಕುಟುಂಬಗಳು ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಇರುವುದು ದುರದೃಷ್ಟಕರ ಎಂದರು.

ಪದವಿ ಪಡೆದು ಉದ್ಯೋಗ ಸಿಗದೆ ಪರದಾಡುತ್ತಿರುವ ಯುವ ಪೀಳಿಗೆಗೆ ಅನುಕೂಲವಾಗುವ ಅಗ್ನಿಪತ್ ಮೂಲಕ ಹೆಚ್ಚಿನ ಸೇನೆಗೆ ನೇಮಕ ಮಾಡಿಕೊಳ್ಳಬೇಕು. ನಿರುದ್ಯೋಗ ತಪ್ಪಿಸಿ ಯುವಕರು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಬೇಕೆಂದು ಸರ್ಕಾರಗಳಿಗೆ ಸಲಹೆ ನೀಡಿದರು.

ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮತ್ತಿತರರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಸೈನಿಕರ ವಿವಿಧ ಬೇಡಿಕೆಗಳನ್ನು ಹೀಡೇರಿಸಲು ಇಚ್ಚಾಸಕ್ತಿ ಕೊರತೆ ಇದೆ. ಜಮೀನು ಇಲ್ಲ. ಶಾಲೆ ಇಲ್ಲ. ಕನಿಷ್ಠ ಪಕ್ಷ ಯೋಧರ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲು ಜಾಗವನ್ನು ಸಹ ನೀಡುತ್ತಿಲ್ಲವೆಂದು ಸರ್ಕಾರದ ಯೋಧರ ವಿರೋಧಿ ನೀತಿಯನ್ನು ಖಂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ, ನಿವೃತ್ತಿ ಯೋಧರು ಭಾಗವಹಿಸಿದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್