ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕಾರ್ಗಿಲ್ ವಿಜಯೋತ್ಸವ.. ರೈತ ಸಂಘದಿಂದ ನಿವೃತ್ತ ಯೋಧರಿಗೆ ಸನ್ಮಾನ

ಕೋಲಾರ: 25ನೇ ಕಾರ್ಗಿಲ್ ವಿಜಯೋತ್ಸವವನ್ನು ರೈತ ಸಂಘದಿಂದ ಜಿಲ್ಲೆಯ ನಿವೃತ್ತ ಯೋಧರಿಗೆ ಹಸಿರು ಶಾಲು ಮ ಗಿಡ ನೀಡುವ ಮುಖಾಂತರ ಸರಳವಾಗಿ ಆಚರಣೆ ಮಾಡಿ ಯೋಧರ ಬೇಡಿಕೆಗಳನ್ನು ಸರ್ಕಾರಗಳು ಈಡೇರಿಸಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ನಿವೃತ್ತ ಯೋಧರ ಸನ್ಮಾನ ಕಾರ್ಯಕ್ರಮದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ ನಾರಾಯಣಗೌಡ ಮಾತನಾಡಿ ಆದಮ್ಯ ಸಾಹಸ ಅಪ್ರತಿಮೆ ದೇಶಭಕ್ತಿಯ ಸ್ಪೂರ್ತಿಯೊಂದಿಗೆ ಶತ್ರುಗಳನ್ನು ಸದೆಬಡಿದು ಭಾರತಾಂಭೆಯ ಘನತೆ ಗೌರವವನ್ನು ಮುಗಲೆತ್ತರಕ್ಕೆ ಹಾರಿಸಿ ಅಮರರಾದ ಕಾರ್ಗಿಲ್ ಯುದ್ದದ ವೀರ ಹುತಾತ್ಮರಿಗೆ ಶತ ಶತ ನಮನಗಳನ್ನು ಸಲ್ಲಿಸುವ ಜೊತೆಗೆ ರೈತ ಮತ್ತು ಯೋಧರನ್ನು ಸರ್ಕಾರಗಳು ನಿರ್ಲಕ್ಷ ಮಾಡಬಾರದೆಂದು ಕಿವಿ ಮಾತು ಹೇಳಿದರು.

ಕಾರ್ಗಿಲ್ ವಿಜಯ ದಿವಸಕ್ಕೆ ಇಂದು ರಜತ ಸಂಭ್ರಮ ಭಾರತೀಯ ಸೇನೆಯ ಶೌರ್ಯ ಸಾಹಸಗಾಥೆ ಎಂದೆದಿಗೂ ಪ್ರೇರಣಾದಾಯಿ ಭಾರತದ ವೀರ ಯೋಧರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಜೊತೆಗೆ ಪಾಕಿಸ್ತಾನದ ವಿರುದ್ದ ಭಾರತ ವಿಜಿಯ ಸಾದಿಸಿದ ಸಂಭ್ರವನ್ನು ಆಚರಿಸುವ ಕ್ಷಣವು ಹೌದು, ಭಾವೈಕ್ಯತೆಯನ್ನು ಜಾಗೃತಗೊಳಿಸಿದ ಕಾರ್ಗ್ರಿಲ್ ಯುದ್ದ ದೇಶ ಮೊದಲು ಎಂಬ ಉದಾತ್ತ ಭಾವಕ್ಕೆ ಜೀವ ತುಂಬಿತು ಭಯೋತ್ಪಾದನೆ ಹಾಗೂ ದೇಶ ದ್ರೋಹಿಗಳ ವಿರುದ್ದ ಕಠಿಣ ಕ್ರಮವೇ ಅನಿರ್ವಾಯ ಎಂಬುದನ್ನು ಕಾರ್ಗಿಲ್ ಸಮರ ಸಾಬೀತು ಮಾಡಿತು.

ಕಾರ್ಗಿಲ್ ಸಮರ ಪಾಕಿಸ್ತಾನಕ್ಕೆ ಹಲವು ಪಾಠಗಳನ್ನು ಕಲಿಸಿದಲ್ಲದೆ ಅಂತರ ರಾಷ್ಟ್ರೀಯ ವಲಯದಲ್ಲಿ ಅದರ ಮುಖವಾಡವನ್ನು ಬಯಲು ಮಾಡಿತು. ಗಡಿಯನ್ನು ಕಾಯುವ ಯೋಧರನ್ನು ಗೌರವಿಸುತ್ತಾ ರಾಷ್ಟ್ರಕ್ಕಾಗಿ ಜೀವಿಸುವ ಸಂಕಲ್ಪವನ್ನು ಕೈಗೊಂಡಲು ಈ ವಿಜಯದಿನ ಕಾರ್ಗಿಲ್ ವಿಜಯ ೨೫ನೇ ವರ್ಷಾಚರಣೆಯ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಯೋಧರನ್ನು ಗುರುತಿಸುವ ಇಚ್ಛಾಶಕ್ತಿ ಸರ್ಕಾರಗಳು ಮಾಡಬೇಕೆಂದು ಒತ್ತಾಯಿಸಿದರು.

ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ ದೇಶಕ್ಕೆ ತನ್ನ ಜೀವವನ್ನು ಮುಡುಪಾಗಿಟ್ಟಿರುವ ಲಕ್ಷಾಂತರ ಕುಟುಂಬಗಳ ರಕ್ಷಣೆಗೆ ಸರ್ಕಾರ ನಿಲ್ಲುತ್ತಿಲ್ಲ. ಹುತಾತ್ಮರಾದ ಯೋಧರನ್ನು ಅವರ ಅಂತ್ಯಕ್ರಿಯೆ ಆಗುವರೆಗೂ ಮಾಧ್ಯಮದ ಮುಂದೆ ಸರ್ಕಾರಗಳು ವಿವಿಧ ಆಸ್ವಾಶಣೆ ನೀಡಿ ಕಡೆಗೆ ಸರ್ಕಾರಗಳು ಕುಟುಂಬಗಳು ವರ್ಷಾನಗಟ್ಟಲೆ ಅಲೆದಾಡಿದರು ಕನಿಷ್ಠ ಅವರ ಸಮಸ್ಯೆ ಬಗ್ಗೆ ವಿಚಾರಿಸುವ ಅಧಿಕಾರಿಗಳು ಇರುವುದಿಲ್ಲವೆಂದು ಆರೋಪ ಮಾಡಿದರು.

ಸರ್ಕಾರವೇ ಮಂಜೂರು ಮಾಡುವ ಸರ್ಕಾರಿ ಜಮೀನಿಗಾಗಿ ೨೫ ವರ್ಷಗಳಿಂದ ಜಿಲ್ಲಾಡಳಿತ ತಾಲ್ಲೂಕು ಆಡಳಿತಕ್ಕೆ ಅಲೆದಾಡಿದರು ಯಾವುದೇ ನ್ಯಾಯ ಸಿಗುತ್ತಿಲ್ಲ. ಕಡೆಗೆ ದೇಶ ಕಾದು ತನ್ನ ಪ್ರಾಣವನ್ನು ಅರ್ಪಣೆ ಮಾಡಿದ ಕುಟುಂಬಗಳು ಹೋರಾಟದ ಹಾದಿ ಹಿಡಿಯಬೇಕಾದ ಪರಿಸ್ಥಿತಿ ಇರುವುದು ದುರದೃಷ್ಟಕರ ಎಂದರು.

ಪದವಿ ಪಡೆದು ಉದ್ಯೋಗ ಸಿಗದೆ ಪರದಾಡುತ್ತಿರುವ ಯುವ ಪೀಳಿಗೆಗೆ ಅನುಕೂಲವಾಗುವ ಅಗ್ನಿಪತ್ ಮೂಲಕ ಹೆಚ್ಚಿನ ಸೇನೆಗೆ ನೇಮಕ ಮಾಡಿಕೊಳ್ಳಬೇಕು. ನಿರುದ್ಯೋಗ ತಪ್ಪಿಸಿ ಯುವಕರು ತನ್ನ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿರುವುದನ್ನು ತಪ್ಪಿಸಬೇಕೆಂದು ಸರ್ಕಾರಗಳಿಗೆ ಸಲಹೆ ನೀಡಿದರು.

ನಿವೃತ್ತ ಯೋಧರಾದ ಮಂಜುನಾಥ, ವೆಂಕಟೇಶ್ ಮತ್ತಿತರರು ಮಾತನಾಡಿ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ. ಸೈನಿಕರ ವಿವಿಧ ಬೇಡಿಕೆಗಳನ್ನು ಹೀಡೇರಿಸಲು ಇಚ್ಚಾಸಕ್ತಿ ಕೊರತೆ ಇದೆ. ಜಮೀನು ಇಲ್ಲ. ಶಾಲೆ ಇಲ್ಲ. ಕನಿಷ್ಠ ಪಕ್ಷ ಯೋಧರ ಆರೋಗ್ಯದ ಹಿತದೃಷ್ಟಿಯಿಂದ ಆಸ್ಪತ್ರೆ ನಿರ್ಮಿಸಲು ಜಾಗವನ್ನು ಸಹ ನೀಡುತ್ತಿಲ್ಲವೆಂದು ಸರ್ಕಾರದ ಯೋಧರ ವಿರೋಧಿ ನೀತಿಯನ್ನು ಖಂಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಜುನಾಥಗೌಡ, ಶಾಂತಕುಮಾರ್, ಕುಮಾರ್, ಸಿ.ಎನ್.ರಘು, ಶಿವರಾಜ್, ಶ್ರೀರಾಮ್, ಸುರೇಶ್, ದೇವರಾಜ್, ಪುತ್ತೇರಿರಾಜು, ಗಿರೀಶ್, ವಕ್ಕಲೇರಿ ಹನುಮಯ್ಯ, ನಿವೃತ್ತಿ ಯೋಧರು ಭಾಗವಹಿಸಿದರು.

Latest News

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಸೆ.15 ರಂದು ಜಗದ್ಗುರು ಶ್ರೀ ವೀರಭದ್ರೇಶ್ವರ ಜಯಂತ್ಯುತ್ಸವ ಆಚರಿಸಲು ಕಾಶೀಬಾಯಿ ರಾಂಪೂರ ಕರೆ

ಮುದ್ದೇಬಿಹಾಳ : ದೇಶ-ವಿದೇಶಗಳಲ್ಲಿ ಕೋಟ್ಯಂತರ ಭಕ್ತರನ್ನು ಹೊಂದಿರುವ ಶಕ್ತಿವಂತ ದೇವರೆಂದೇ ಪ್ರಸಿದ್ಧಿಯಾದ ಶ್ರೀ ವೀರಭದ್ರೇಶ್ವರ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ:                                 ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ನಾಡಗೌಡರ ವಿರುದ್ಧ ನಡಹಳ್ಳಿ ವಾಗ್ದಾಳಿ: ಶಾಸಕ ನಾಡಗೌಡರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ-ನಡಹಳ್ಳಿ

ಮುದ್ದೇಬಿಹಾಳ : ಸಂಪೂರ್ಣ ಬಂದ್ ಮಾಡಿ ಜನರು ಸಹಕರಿಸಿದ್ದಾರೆ.ಶಾಸಕ ನಾಡಗೌಡರ ಮಾತಿಗೆ ಜನರು ಬೆಲೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ ದಿನಗಳಲ್ಲಿಯೂ ಗುರುವಿಗೆ ಮಹತ್ವವಿದೆ. ಇದನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ ಎಂದು ಬಿ.ಎ.ಎಸ್ ಇಂಟರನ್ಯಾಶನ್ ಶಾಲೆಯ ಕಾರ್ಯದರ್ಶಿ ಎಸ್.ಎಸ್.ಬಿರಾದಾರ ಹೇಳಿದರು. ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಬಿ.ಎ.ಎಸ್. ಇಂಟನ್ಯಾಷನಲ್ ಸ್ಕೂಲ್‌ನಲ್ಲಿ ಬುಧವಾರ ಶಿಕ್ಷಕರ ದಿನಾಚರಣೆ ಹಾಗೂ ಇತ್ತಿಚಿಗೆ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರ ಮಾತನಾಡಿದರು. ವಿದ್ಯಾರ್ಥಿಗಳಿಗೆ ಪಠ್ಯಯೊಂದೆ ಅಗತ್ಯವಲ್ಲ. ಪಠ್ಯತರ

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು ಲಕ್ಷಗಳವರೆಗಿನ ಸಾಲ ಮನ್ನಾ ಮಾಡಿ ರೈತರ ನೆರವಿಗೆ ಧಾವಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದಲ್ಲಿ ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆದಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ದಿನದ ಹೋರಾಟದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಮಾತ್ರ ಬರಪಟ್ಟಿಗೆ ಸೇರ್ಪಡೆಯಾದರೆ ಸುಮ್ಮನಾಗುವುದಿಲ್ಲ.ಕ್ಷೇತ್ರದ ತಾಳಿಕೋಟಿ ತಾಲ್ಲೂಕು, ಜಿಲ್ಲೆಯ