Karnataka cm race: 'Bande' foreign tour; Rahul Gandhi in America before DK!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಬೆಂಗಳೂರು: ಇದೇ ವರ್ಷ ನವೆಂಬರ್‌ 5ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ (Election of the President of the United States) ಐತಿಹಾಸಿಕ ಚುನಾವಣೆ ನಡೆಯಲಿದ್ದು, ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ (Kamala Harris) ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ (Republican Party) ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌ (DK Shivakumar) ಅಮೆರಿಕಾಗೆ ತೆರಳಿದ್ದಾರೆ.

ಹ್ಯಾರಿಸ್‌ಗೂ ಡಿಸಿಎಂಗೂ ಹೇಗೆ ನಂಟು?

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ನಿಂತಿರುವ ಭಾರತ ಮೂಲದ ಕಮಲಾ ಹ್ಯಾರಿಸ್‌ಗೂ ಕರ್ನಾಟಕದ ಡಿ.ಕೆ.ಶಿವಕುಮಾರ್‌ಗೂ ಏನಪ್ಪಾ ಸಂಬಂಧ ಅಂತೀರಾ? ಹೌದು, ಇದು ಡಿ.ಕೆ.ಶಿವಕುಮಾರ್‌ ಆಪ್ತರು, ಕಾಂಗ್ರೆಸ್ಸಿಗರು, ಬಿಜೆಪಿ, ಜೆಡಿಎಸ್‌ನವರ ಜೊತೆ ಬಹುತೇಕ ಕನ್ನಡಿಗರನ್ನೂ ಕಾಡ್ತಿರೋ ಪ್ರಶ್ನೆಯಾಗಿದೆ. ಎಲ್ಲಿಯ ಕಮಲಾ ಹ್ಯಾರಿಸ್‌, ಎಲ್ಲಿಯ ಡಿಕೆಶಿ ಹ್ಯಾರಿಸ್‌ಗೂ ಏನು ನಂಟು ಅಂತಾ ಅದಕ್ಕೂ ಉತ್ತರ ಇದೆ ನೋಡಿ..

ಕಮಲಾ ಹ್ಯಾರಿಸ್‌-ಡಿಕೆಶಿ ಗೆಳೆತನ!

ಕಮಲಾ ತಾಯಿ ಶ್ಯಾಮಲಾ ಗೋಪಾಲನ್‌ ತಮಿಳುನಾಡಿನವರು. ಅಮೆರಿಕದಲ್ಲಿದ್ದರೂ ಭಾರತದಲ್ಲಿ ಟ್ರಸ್ಟ್ ಮೂಲಕ ಜನಸೇವೆ ಮಾಡ್ತಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆಶಿ ಅವರಿಗೆ ನಂಟಿದೆಯಂತೆ! ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ಗೆ ಡಿಕೆ ಶಿವಕುಮಾರ್‌ ಎಲ್ಲಾ ರೀತಿಯ ನೆರವನ್ನೂ ಕೊಟ್ಟಿದ್ದಾರೆ ಅಂತೆ. ಹಾಗಾಗಿನೇ ಕಮಲಾ ಹ್ಯಾರಿಸ್‌ ಜೊತೆ ಡಿಕೆಶಿ ರಾಜಕೀಯ ಒಡನಾಟ ಶುರುವಾಗುವ ಲಕ್ಷಣ ಕಾಣಿಸಿದ್ದು. ಅನಿವಾಸಿ ಕನ್ನಡಿಗರ ಮತ ಸೆಳೆಯಲು ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್‌ 10ರಂದು ಅಮೆರಿಕದ ನಾರ್ತ್ ಕ್ಯಾರೊಲಿನಾದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಅಮೆರಿಕದಲ್ಲಿರುವ ಭಾರತೀಯ ಮತದಾರರನ್ನು ಸೇರಿಸಲಾಗ್ತಿದ್ದು ಭಾರತೀಯ ಗಣ್ಯರನ್ನೂ ಆಹ್ವಾನಿಸಲಾಗಿದ್ದು ಡಿ.ಕೆ.ಶಿವಕುಮಾರ್‌ ಕೂಡ ಒಬ್ಬರು ಅನ್ನೋದು ಪ್ರಮುಖ ವಿಷ್ಯ.

ಅಂದಹಾಗೆ, ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ದೇಶ ಬಿಟ್ಟು ಹೋಗುವಂತಿಲ್ಲ. ಹೀಗಾಗಿ ಕೋರ್ಟ್‌ನಿಂದ ಅನುಮತಿಯನ್ನೂ ಪಡೆದು ಅಮೆರಿಕಗೆ ಹೋಗಿದ್ದಾರೆ. ಸೆಪ್ಟೆಂಬರ್‌ 14ಕ್ಕೆ ಡಿಕೆಶಿ ವಾಪಸ್ಸಾಗಲಿದ್ದಾರೆ. ಆದರೆ, ಇದು ಖಾಸಗಿ ಕಾರ್ಯಕ್ರಮ ಅಷ್ಟೇ ಅಂತ ಯಾವ ಗುಟ್ಟನ್ನೂ ಡಿ.ಕೆ.ಶಿವಕುಮಾರ್‌ ಬಿಟ್ಟುಕೊಟ್ಟಿಲ್ಲ.

ಡಿಕೆಶಿಗೂ ಮೊದಲೇ ಅಮೆರಿಕ ತಲುಪಿದ ರಾಹುಲ್‌‌:

ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ಬೆಂಬಲ ಘೋಷಿಸಿತ್ತು. ಅವತ್ತು ಮೋದಿಯವ್ರೇ ಅಮೆರಿಕಾಗೆ ತೆರಳಿ ಟ್ರಂಪ್‌ ಪರ ಮತಯಾಚಿಸಿದ್ರು. ಈಗ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಪರ ಕಾಂಗ್ರೆಸ್‌ ಪ್ರಚಾರ ಮಾಡ್ತಿದೆ. ರಾಹುಲ್ ಗಾಂಧಿಯವ್ರು ಕೂಡ 3 ದಿನಗಳ ಅಮೆರಿಕ ಪ್ರವಾಸ ನಡೆಸ್ತಿದ್ದು ಈಗಾಗ್ಲೇ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ ತಲುಪಿದದಾರೆ ಟೆಕ್ಸಾಸ್‌ ಏರ್‌ಪೋರ್ಟ್‌ನಲ್ಲಿ ರಾಹುಲ್ ಗಾಂಧಿಯವ್ರನ್ನ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸ್ವಾಗತಿಸಿದ್ದರು.

ರಾಹುಲ್‌ ಗಾಂಧಿ ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ಸಂವಾದ ನಡೆಸ್ತಾರೆ. ಡಿ.ಕೆ.ಶಿವಕುಮಾರ್‌ ನಾರ್ತ್‌ ಕ್ಯಾರೊಲಿನಾದಲ್ಲಿ ಕಮಲಾ ಹ್ಯಾರಿಸ್‌ ಪರ ಪ್ರಚಾರ ಮಾಡ್ತಿದ್ದಾರೆ. ಏನೇ ಆಗ್ಲಿ ಅಮೆರಿಕಾ ಎಲೆಕ್ಷನ್‌ನಲ್ಲೂ ಭಾರತೀಯರ ಪಾತ್ರ ಅದ್ರಲ್ಲೂ ದಕ್ಷಿಣ ಭಾರತದವ್ರು, ನಮ್ಮ ಕನ್ನಡಿಗರ ಪಾತ್ರನೂ ಮುಖ್ಯವಾಗಿದೆ ಅನ್ನೋದಕ್ಕೆ ಡಿಕೆಶಿ ಅಮೆರಿಕ ಟೂರೇ ಸಾಕ್ಷಿ.

ಇದನ್ನೂ ಓದಿ: FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಇದೇ ವೇಳೆ ರಾಹುಲ್ ಗಾಂಧಿ ಮತ್ತು ಡಿಕೆಶಿ ರಹಸ್ಯೆ ಸಭೆಗೆ ವೇದಿಕೆ ಸಿದ್ಧವಾಗಿದೆಯಂತೆ. ಆ ಸಭೆಯಲ್ಲಿ, ಒಂದು ವೇಳೆ ಕರ್ನಾಟಕದ ಸಿಎಂ ಬದಲಾವಣೆ ಮಾಡುವ ಪ್ರಸಂಗ ಬಂದರೆ ಆಗ ಯಾರನ್ನು ಸಿಎಂ ಮಾಡಬೇಕು ಎಂದು ನಿರ್ಧಾರ ಮಾಡಲಾಗುತ್ತದೆ ಅಂತೆ. ಡಿಕೆಶಿ ತಮಗೆ ಸಿಎಂ ಹುದ್ದೆ ನೀಡುವಂತೆ ಲಾಭಿ ಮಾಡಲು ಇದು ಸಕಾಲ ಎಂಬುದು ರಾಜಕೀಯ ಪಂಡಿತರ ವಿಶ್ಲೇಷಣೆಯಾಗಿದೆ.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ