Karnataka cm race: 'Bande' foreign tour; Rahul Gandhi in America before DK!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

Karnataka cm race: ‘ಬಂಡೆ’ ಫಾರಿನ್​ ಟೂರ್​​​​​; ಡಿಕೆಶಿಗೂ ಮೊದಲೇ ಅಮೆರಿಕದಲ್ಲಿ ರಾಹುಲ್‌ ಗಾಂಧಿ!

ಬೆಂಗಳೂರು: ಇದೇ ವರ್ಷ ನವೆಂಬರ್‌ 5ರಂದು ಅಮೆರಿಕ ಅಧ್ಯಕ್ಷರ ಆಯ್ಕೆಯ (Election of the President of the United States) ಐತಿಹಾಸಿಕ ಚುನಾವಣೆ ನಡೆಯಲಿದ್ದು, ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ (Kamala Harris) ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ (Republican Party) ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌ (DK Shivakumar) ಅಮೆರಿಕಾಗೆ ತೆರಳಿದ್ದಾರೆ.

ಹ್ಯಾರಿಸ್‌ಗೂ ಡಿಸಿಎಂಗೂ ಹೇಗೆ ನಂಟು?

ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ನಿಂತಿರುವ ಭಾರತ ಮೂಲದ ಕಮಲಾ ಹ್ಯಾರಿಸ್‌ಗೂ ಕರ್ನಾಟಕದ ಡಿ.ಕೆ.ಶಿವಕುಮಾರ್‌ಗೂ ಏನಪ್ಪಾ ಸಂಬಂಧ ಅಂತೀರಾ? ಹೌದು, ಇದು ಡಿ.ಕೆ.ಶಿವಕುಮಾರ್‌ ಆಪ್ತರು, ಕಾಂಗ್ರೆಸ್ಸಿಗರು, ಬಿಜೆಪಿ, ಜೆಡಿಎಸ್‌ನವರ ಜೊತೆ ಬಹುತೇಕ ಕನ್ನಡಿಗರನ್ನೂ ಕಾಡ್ತಿರೋ ಪ್ರಶ್ನೆಯಾಗಿದೆ. ಎಲ್ಲಿಯ ಕಮಲಾ ಹ್ಯಾರಿಸ್‌, ಎಲ್ಲಿಯ ಡಿಕೆಶಿ ಹ್ಯಾರಿಸ್‌ಗೂ ಏನು ನಂಟು ಅಂತಾ ಅದಕ್ಕೂ ಉತ್ತರ ಇದೆ ನೋಡಿ..

ಕಮಲಾ ಹ್ಯಾರಿಸ್‌-ಡಿಕೆಶಿ ಗೆಳೆತನ!

ಕಮಲಾ ತಾಯಿ ಶ್ಯಾಮಲಾ ಗೋಪಾಲನ್‌ ತಮಿಳುನಾಡಿನವರು. ಅಮೆರಿಕದಲ್ಲಿದ್ದರೂ ಭಾರತದಲ್ಲಿ ಟ್ರಸ್ಟ್ ಮೂಲಕ ಜನಸೇವೆ ಮಾಡ್ತಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆಶಿ ಅವರಿಗೆ ನಂಟಿದೆಯಂತೆ! ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ಗೆ ಡಿಕೆ ಶಿವಕುಮಾರ್‌ ಎಲ್ಲಾ ರೀತಿಯ ನೆರವನ್ನೂ ಕೊಟ್ಟಿದ್ದಾರೆ ಅಂತೆ. ಹಾಗಾಗಿನೇ ಕಮಲಾ ಹ್ಯಾರಿಸ್‌ ಜೊತೆ ಡಿಕೆಶಿ ರಾಜಕೀಯ ಒಡನಾಟ ಶುರುವಾಗುವ ಲಕ್ಷಣ ಕಾಣಿಸಿದ್ದು. ಅನಿವಾಸಿ ಕನ್ನಡಿಗರ ಮತ ಸೆಳೆಯಲು ಆಹ್ವಾನ ಕೊಟ್ಟಿದ್ದಾರೆ ಎನ್ನಲಾಗಿದೆ.

ಸೆಪ್ಟೆಂಬರ್‌ 10ರಂದು ಅಮೆರಿಕದ ನಾರ್ತ್ ಕ್ಯಾರೊಲಿನಾದಲ್ಲಿ ಭವ್ಯ ಸಮಾರಂಭ ಆಯೋಜಿಸಲಾಗಿದೆ. ಆ ಕಾರ್ಯಕ್ರಮಕ್ಕೆ ಅಮೆರಿಕದಲ್ಲಿರುವ ಭಾರತೀಯ ಮತದಾರರನ್ನು ಸೇರಿಸಲಾಗ್ತಿದ್ದು ಭಾರತೀಯ ಗಣ್ಯರನ್ನೂ ಆಹ್ವಾನಿಸಲಾಗಿದ್ದು ಡಿ.ಕೆ.ಶಿವಕುಮಾರ್‌ ಕೂಡ ಒಬ್ಬರು ಅನ್ನೋದು ಪ್ರಮುಖ ವಿಷ್ಯ.

ಅಂದಹಾಗೆ, ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್‌ ದೇಶ ಬಿಟ್ಟು ಹೋಗುವಂತಿಲ್ಲ. ಹೀಗಾಗಿ ಕೋರ್ಟ್‌ನಿಂದ ಅನುಮತಿಯನ್ನೂ ಪಡೆದು ಅಮೆರಿಕಗೆ ಹೋಗಿದ್ದಾರೆ. ಸೆಪ್ಟೆಂಬರ್‌ 14ಕ್ಕೆ ಡಿಕೆಶಿ ವಾಪಸ್ಸಾಗಲಿದ್ದಾರೆ. ಆದರೆ, ಇದು ಖಾಸಗಿ ಕಾರ್ಯಕ್ರಮ ಅಷ್ಟೇ ಅಂತ ಯಾವ ಗುಟ್ಟನ್ನೂ ಡಿ.ಕೆ.ಶಿವಕುಮಾರ್‌ ಬಿಟ್ಟುಕೊಟ್ಟಿಲ್ಲ.

ಡಿಕೆಶಿಗೂ ಮೊದಲೇ ಅಮೆರಿಕ ತಲುಪಿದ ರಾಹುಲ್‌‌:

ರಿಪಬ್ಲಿಕನ್‌ ಪಕ್ಷದ ಡೊನಾಲ್ಡ್‌ ಟ್ರಂಪ್‌ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಿಂದಿನ ಚುನಾವಣೆಯಲ್ಲಿ ಬೆಂಬಲ ಘೋಷಿಸಿತ್ತು. ಅವತ್ತು ಮೋದಿಯವ್ರೇ ಅಮೆರಿಕಾಗೆ ತೆರಳಿ ಟ್ರಂಪ್‌ ಪರ ಮತಯಾಚಿಸಿದ್ರು. ಈಗ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಪರ ಕಾಂಗ್ರೆಸ್‌ ಪ್ರಚಾರ ಮಾಡ್ತಿದೆ. ರಾಹುಲ್ ಗಾಂಧಿಯವ್ರು ಕೂಡ 3 ದಿನಗಳ ಅಮೆರಿಕ ಪ್ರವಾಸ ನಡೆಸ್ತಿದ್ದು ಈಗಾಗ್ಲೇ ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ ತಲುಪಿದದಾರೆ ಟೆಕ್ಸಾಸ್‌ ಏರ್‌ಪೋರ್ಟ್‌ನಲ್ಲಿ ರಾಹುಲ್ ಗಾಂಧಿಯವ್ರನ್ನ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಸ್ವಾಗತಿಸಿದ್ದರು.

ರಾಹುಲ್‌ ಗಾಂಧಿ ವಾಷಿಂಗ್ಟನ್‌, ಡಲ್ಲಾಸ್‌ ನಗರಗಳಲ್ಲಿ, ಜಾರ್ಜ್‌ಟೌನ್‌ ಮತ್ತು ಟೆಕ್ಸಾಸ್‌ ವಿಶ್ವವಿದ್ಯಾಲಯಗಳಲ್ಲಿ ಸಂವಾದ ನಡೆಸ್ತಾರೆ. ಡಿ.ಕೆ.ಶಿವಕುಮಾರ್‌ ನಾರ್ತ್‌ ಕ್ಯಾರೊಲಿನಾದಲ್ಲಿ ಕಮಲಾ ಹ್ಯಾರಿಸ್‌ ಪರ ಪ್ರಚಾರ ಮಾಡ್ತಿದ್ದಾರೆ. ಏನೇ ಆಗ್ಲಿ ಅಮೆರಿಕಾ ಎಲೆಕ್ಷನ್‌ನಲ್ಲೂ ಭಾರತೀಯರ ಪಾತ್ರ ಅದ್ರಲ್ಲೂ ದಕ್ಷಿಣ ಭಾರತದವ್ರು, ನಮ್ಮ ಕನ್ನಡಿಗರ ಪಾತ್ರನೂ ಮುಖ್ಯವಾಗಿದೆ ಅನ್ನೋದಕ್ಕೆ ಡಿಕೆಶಿ ಅಮೆರಿಕ ಟೂರೇ ಸಾಕ್ಷಿ.

ಇದನ್ನೂ ಓದಿ: FDI: ಸಿಂಗಪುರ್ ಉದ್ಯಮಿಗಳ ಹೂಡಿಕೆಗೆ ಕರ್ನಾಟಕದಲ್ಲಿ ಮುಕ್ತ ಸ್ವಾಗತ: ಸಚಿವ ಎಂ ಬಿ ಪಾಟೀಲ

ಇದೇ ವೇಳೆ ರಾಹುಲ್ ಗಾಂಧಿ ಮತ್ತು ಡಿಕೆಶಿ ರಹಸ್ಯೆ ಸಭೆಗೆ ವೇದಿಕೆ ಸಿದ್ಧವಾಗಿದೆಯಂತೆ. ಆ ಸಭೆಯಲ್ಲಿ, ಒಂದು ವೇಳೆ ಕರ್ನಾಟಕದ ಸಿಎಂ ಬದಲಾವಣೆ ಮಾಡುವ ಪ್ರಸಂಗ ಬಂದರೆ ಆಗ ಯಾರನ್ನು ಸಿಎಂ ಮಾಡಬೇಕು ಎಂದು ನಿರ್ಧಾರ ಮಾಡಲಾಗುತ್ತದೆ ಅಂತೆ. ಡಿಕೆಶಿ ತಮಗೆ ಸಿಎಂ ಹುದ್ದೆ ನೀಡುವಂತೆ ಲಾಭಿ ಮಾಡಲು ಇದು ಸಕಾಲ ಎಂಬುದು ರಾಜಕೀಯ ಪಂಡಿತರ ವಿಶ್ಲೇಷಣೆಯಾಗಿದೆ.

Latest News

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಇ.ಆರ್.ಟಿ ಅನುಷ್ಠಾನ; ಜನಪ್ರತಿನಿಧಿಗಳ, ಸಾರ್ವಜನಿಕರ ಅಭಿಪ್ರಾಯಕ್ಕೆ ಮನ್ನಣೆ

ಧಾರವಾಡ, ಜೂನ್‌16: ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಅಧಿಕಾರಿಗಳ ನಿರ್ಲಕ್ಷ್ಯದಿಂದ ಯಾವುದೇ ಜೀವಹಾನಿ ಉಂಟಾದರೆ ಅವರ ವಿರುದ್ಧ ಕ್ರಮ: ಸಚಿವ ಸಂತೋಷ್‌ ಲಾಡ್

ಧಾರವಾಡ, ಜೂನ್‌ 16: ಮಳೆಗಾಲದ ಸಂಕಷ್ಟ ಸಂದರ್ಭದಲ್ಲಿಯೂ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಾರ್ವಜನಿಕ ಸ್ನೇಹಿಯಾಗಿ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ನೀಟ್ ಪರೀಕ್ಷೆ ಫಲಿತಾಂಶ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನ ಆಕಾಶಗೆ 604 ಅಂಕ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ನೀಟ್

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ರಸ್ತೆ ಕಾಮಗಾರಿ ಅಪೂರ್ಣ : ಟೋಲ್ ಸಂಗ್ರಹಕ್ಕೆ ವಿರೋಧ

ಮುದ್ದೇಬಿಹಾಳ : ಹುನಗುಂದ ತಾಲ್ಲೂಕಿನಿಂದ ತಂಗಡಗಿ ಮುಖಾಂತರ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಬಸವಸಾಗರ ಜಲಾಶಯದಿಂದ 8 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ನಾರಾಯಣಪುರ: ಬಸವಸಾಗರವು ಶೇ.83 ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಜಲಾಶಯದ ಕ್ರಸ್ಟ್ ಗೇಟ್‌ಗೆ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ಕ್ರಸ್ಟ್ ಗೇಟ್ ಮೂಲಕ 5 ಸಾವಿರ ಕ್ಯೂಸೆಕ್ ಹಾಗೂ ಎಂಪಿಸಿಎಲ್ ಖಾಸಗಿ ಜಲವಿದ್ಯುತ್ ಸ್ಥಾವರದಿಂದ 3 ಸಾವಿರ ಕ್ಯೂಸೆಕ್ ಸೇರಿ 8 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ಬಸವಸಾಗರಕ್ಕೆ ಆಲಮಟ್ಟಿ ಶಾಸ್ತ್ರೀ ಜಲಾಶಯದಿಂದ ಒಳಹರಿವು ಸದ್ಯ 20 ಸಾವಿರ ಕ್ಯೂಸೆಕ್‌ನಷ್ಟಿದೆ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹೊಸ ಬಸ್ ಸಂಚಾರಕ್ಕೆ ಮನವಿ

ನಾರಾಯಣಪುರ: ನಾರಾಯಣಪುರ ಮಾರ್ಗವಾಗಿ ರಾತ್ರಿ ವೇಳೆ ಕಲಬುರಗಿಯಿಂದ ವಿಜಯಪುರಕ್ಕೆ ಹಾಗೂ ಕೊಡೇಕಲ್ ಮಾರ್ಗವಾಗಿ ತಾಳಿಕೋಟಿಗೆ ಹೊಸ ಬಸ್ ಸಂಚಾರ ಶನಿವಾರ ಯಾದಗಿರಿ ಸಾರಿಗೆ ಡಿಸಿ (ಡಿವಿಜನಲ್ ಕಂಟ್ರೋಲರ್) ಅವರಿಗೆ ಬರೆದ ಮನವಿಯನ್ನು ಸಾರಿಗೆ ನಿಯಂತ್ರಕ ಐ.ಎ ಕರಣಿ ಅವರಿಗೆ ಗ್ರಾಮಸ್ಥರ ಸಲ್ಲಿಸಿದರು. ಈ ವೇಳೆ ಮುಖಂಡ ಸಂಗಮೇಶ ತಾಳಿಕೋಟಿ ಮಾತನಾಡಿ ಜಿಲ್ಲೆಯ ಗಡಿಗ್ರಾಮವಾಗಿರುವನಾರಾಯಣಪುರ ಸೇರಿ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಗ್ರಾಮಸ್ಥರಿಗೆ ರಾತ್ರಿ ವೇಳೆ ನಾರಾಯಣಪುರ ಮಾರ್ಗವಾಗಿ ಬಸ್ಸುಗಳ ಸಂಚಾರ ಇಲ್ಲದೆ