ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಮುದ್ದೇಬಿಹಾಳ : 2047ರ ಹೊತ್ತಿಗೆ ‘ವಿಕಸಿತ ಭಾರತ’ವನ್ನು ನಿರ್ಮಿಸುವ ಬಿಜೆಪಿಯ ಸಂಕಲ್ಪಕ್ಕೆ ಈ ಬಜೆಟ್ ಭದ್ರ ಬುನಾದಿಯಾಗಿದ್ದು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿಷಯವಾಗಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಕೇಂದ್ರ ತೆರಿಗೆಗಳ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಶೇ.3.64% ರಿಂದ 4.13% ಕ್ಕೆ ಏರಿಕೆಯಾಗಿದೆ.ಇದರಿಂದಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಗಳ ಪಾಲಿನ ರೂಪದಲ್ಲಿ ₹63,049.58
ಕೋಟಿ ಹಂಚಿಕೆಯಾಗಲಿದೆ. ಕರ್ನಾಟಕದ ಹೈ-ಸ್ಪೀಡ್ ರೈಲು ಕಾರಿಡಾರ್ಗಳ ಸಂಪರ್ಕ
ದೇಶದಲ್ಲಿ ಪ್ರಸ್ತಾಪಿಸಲಾದ ಏಳು ಹೈ-ಸ್ಪೀಡ್ ರೈಲು ಕಾರಿಡಾರ್ಗಳಲ್ಲಿ ಕರ್ನಾಟಕಕ್ಕೆ ನೇರ ಪ್ರಯೋಜನ ನೀಡುವ ಎರಡು ಪ್ರಮುಖ ಮಾರ್ಗಗಳು ಹೈದರಾಬಾದ್ – ಬೆಂಗಳೂರು ಮತ್ತು ಚೆನ್ನೆöÊ – ಬೆಂಗಳೂರು ಘೋಷಿಸಲಾಗಿದೆ. ಬೆಂಗಳೂರು ಉಪನಗರ ರೈಲು ಯೋಜನೆಗೆ ಬಜೆಟ್ ಬೆಂಬಲವಾಗಿ ₹500 ಕೋಟಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

2025–26 ಹಣಕಾಸು ವರ್ಷದಲ್ಲಿ ₹350 ಕೋಟಿ ಅನುದಾನ ನೀಡಲಾಗಿತ್ತು. ಈ ಹೆಚ್ಚುವರಿ ಅನುದಾನದಿಂದ ಬೆಂಗಳೂರಿನ ಮಧ್ಯಮವರ್ಗದ ಜನತೆಗೆ ಹೆಚ್ಚಿನ ಸೌಲಭ್ಯಗಳು ಹಾಗೂ ಸುಗಮ ಸಾರಿಗೆ ವ್ಯವಸ್ಥೆ ಲಭಿಸಲಿದೆ. ಉನ್ನತ ಮೌಲ್ಯದ ಕೃಷಿಗೆ ಉತ್ತೇಜನ ಕರ್ನಾಟಕದ ಹೆಮ್ಮೆಯಾದ ಶ್ರೀಗಂಧದ ಕೃಷಿಯನ್ನು ಉತ್ತೇಜಿಸಲು ಮತ್ತು ಅದರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಕೇಂದ್ರ ಸರ್ಕಾರವು ರಾಜ್ಯದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳಲಿದೆ. ‘ತೆಂಗು ಪ್ರಚಾರ ಯೋಜನೆ’ಯನ್ನು ಘೋಷಿಸಲಾಗಿದೆ.ಭಾರತೀಯ ಗೋಡಂಬಿಯನ್ನು 2030ರ ವೇಳೆಗೆ ಜಾಗತಿಕ ಬ್ರಾಂಡ್ ಆಗಿ ಪರಿವರ್ತಿಸಲು ಮತ್ತು ಸಂಸ್ಕರಣಾ ಸಾಮರ್ಥ್ಯ ಹೆಚ್ಚಿಸಲು ವಿಶೇಷ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನ ಸೆಮಿಕಂಡಕ್ಟರ್ ಹಬ್‌ಗೆ ಬಲ ನೀಡಲು ‘ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0’ಘೋಷಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ಉತ್ಪಾದನಾ ಯೋಜನೆಗೆ 40,000 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ. ಜಾಗತಿಕ ಕ್ಲೌಡ್ ಸೇವೆ ನೀಡುವ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆ ನೀಡಿರುವುದು, ಬೆಂಗಳೂರಿನ ಐಟಿ ಉದ್ಯಮ ಮತ್ತು ಡಿಜಿಟಲ್ ಆರ್ಥಿಕತೆಗೆ ಭಾರಿ ಬೂಸ್ಟ್ ನೀಡಲಿದೆ.ಜೈವಿಕ ಔಷಧಿಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು 10,000 ಕೋಟಿ ರೂ.ಮೊತ್ತದ ಬಯೋ ಫಾರ್ಮಾಶಕ್ತಿ ಯೋಜನೆಯನ್ನು ಘೋಷಿಸಲಾಗಿದೆ. ಇದು ದೇಶದ ಬಯೋಟೆಕ್ ಹಬ್ ಆಗಿರುವ ಕರ್ನಾಟಕದ ಬಯೋಫಾರ್ಮಾ ಉದ್ಯಮಕ್ಕೆ ಭಾರಿ ಶಕ್ತಿ ನೀಡಲಿದೆ.ಏರೋಸ್ಪೇಸ್ ಮತ್ತು ರಕ್ಷಣಾ ಉತ್ಪಾದನೆ ವಿಮಾನದ ಬಿಡಿಭಾಗಗಳು, ಎಂಜಿನ್ ಮತ್ತು ಕಚ್ಚಾವಸ್ತುಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿರುವುದರಿಂದ ಏರೋಸ್ಪೇಸ್ ಕೇಂದ್ರವಾಗಿರುವ ಕರ್ನಾಟಕದ ಬೆಂಗಳೂರಿಗೆ ಲಾಭವಾಗಲಿದೆ ಎಂದು ತಿಳಿಸಿದರು.

‘ಸಿಟಿ ಎಕನಾಮಿಕ್ ರೀಜನ್’ ಯೋಜನೆಯನ್ನು ತರಲಾಗಿದ್ದು , ಪ್ರತಿ ಪ್ರದೇಶಕ್ಕೆ ಐದು ವರ್ಷ ಗಳ ಅವಧಿಗೆ 5,000 ಕೋಟಿ ರೂ.ಹÀಂಚಿಕೆ ಮಾಡಲಾಗಿದೆ.10 ಲಕ್ಷಕ್ಕೂ ಹೆಚ್ಚು ಮತ್ತು 5 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ನಗರಗಳಿಗೆ ವಿಶೇಷ ಮೂಲಸೌಕರ್ಯ ಬೆಂಬಲ ನೀಡಲಾಗುತ್ತಿದ್ದು , ಕರ್ನಾಟಕದ ಪ್ರಮುಖ ನಗರಗಳು ಈ ಯೋಜನೆಗಳಡಿ ಆಧುನಿಕ ಸೌಲಭ್ಯಗಳನ್ನು ಪಡೆಯಲಿವೆ ಎಂದು ಮಾಹಿತಿ ನೀಡಿದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ