Muda case Kumarswamy back side budda icon

KAS: ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಪರೀಕ್ಷೆ ನಡೆಸುವ ಆತುರ, ದುರುದ್ದೇಶ ಏಕೆ? HDK ಪ್ರಶ್ನೆ

KAS: ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ ಪರೀಕ್ಷೆ ನಡೆಸುವ ಆತುರ, ದುರುದ್ದೇಶ ಏಕೆ? HDK ಪ್ರಶ್ನೆ

ನವದೆಹಲಿ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿ ಅಭ್ಯರ್ಥಿಗಳಿಗೆ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (KPSC) ಈ ತಿಂಗಳ 27ರಂದು 2023-24ರ KAS ಪೂರ್ವಭಾವಿ ಪರೀಕ್ಷೆ ನಡೆಸಲು ಎಲ್ಲಿಲ್ಲದ ತರಾತುರಿ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಇಂದು ಹೇಳಿದ್ದಾರೆ.

ವಿಕಲಚೇತನ ಆಕಾಂಕ್ಷಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದಕ್ಕೆ ಹಾಕಿ ಮತ್ತೊಂದು ದಿನಾಂಕ ನಿಗದಿ ಮಾಡಬೇಕು ಎಂದು ಅಭ್ಯರ್ಥಿಗಳು ಮನವಿ ಮಾಡುತ್ತಿದ್ದರೂ KPSC ಹಟಕ್ಕೆ ಬಿದ್ದಿರುವುದು ಸರಿಯಲ್ಲ ಎಂದಿದ್ದಾರೆ ಕೇಂದ್ರ ಸಚಿವರು.

Join Our Telegram: https://t.me/dcgkannada

ಪರೀಕ್ಷೆ ಬರೆಯುವವರನ್ನೇ ಚಿತ್ರಹಿಂಸೆಗೆ ಒಳಪಡಿಸಿ KPSCಯು ಪರೀಕ್ಷೆ ನಡೆಸುವ ಆತುರದ ಹಿಂದಿರುವ ದುರುದ್ದೇಶವಾದರೂ ಏನು? ಅನೇಕ ಆಕಾಂಕ್ಷಿಗಳಿಗೆ ಪರೀಕ್ಷೆ ಬರೆಯಲಿಕ್ಕೇ ಸಾಧ್ಯವಾಗುತ್ತಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ, ಅದರಲ್ಲೂ ಅಂಧ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಹಾಜರಾಗುವುದು ಬಹುದೊಡ್ಡ ಸಮಸ್ಯೆಯಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿ: Guarantee schemes: ಗ್ಯಾರಂಟಿ ಯೋಜನೆಗಳಿಗೆ ಸಿದ್ದು ಗ್ಯಾರಂಟಿ

ಕೆಲವರು ದುಡ್ಡು ಮಾಡಿಕೊಳ್ಳುವುದಕ್ಕೆ ಈ ಪರೀಕ್ಷೆಯನ್ನು ನಡೆಸುತ್ತಿರುವಂತೆ ಕಾಣುತ್ತಿದೆ. 4-5 ವರ್ಷಗಳಿಂದ ಕಷ್ಟಪಟ್ಟು ಓದಿರುವವರಿಗೆ ಅನ್ಯಾಯ ಮಾಡುವ ದುರಾಸೆ ಒಳ್ಳೆಯದಲ್ಲ. ರಾಜ್ಯ ಸರಕಾರ ಹಾಗೂ ಕೆಪಿಎಸ್ಸಿ ಕೂಡಲೇ ಪರೀಕ್ಷೆಯನ್ನು ಮುಂದೂಡಬೇಕು. ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಎಲ್ಲಾ ಆಕಾಂಕ್ಷಿಗಳಿಗೂ ಅನುಕೂಲ ಆಗುವ ದಿನಾಂಕ ನಿಗದಿಪಡಿಸಿ ಪರೀಕ್ಷೆ ನಡೆಸಲಿ ಎಂದು ಅವರು ಆಗ್ರಹಪಡಿಸಿದ್ದಾರೆ.

Latest News

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.