Kashi Rudrakshi Garland handed over by devotees to Kuntoji Ratha to the Committee

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಮುದ್ದೇಬಿಹಾಳ : ತಾಲೂಕಿನ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವಣ್ಣ, ಸಂಗಮೇಶ್ವರ ನೂತನ ತೇರಿಗೆ ಅಳವಡಿಸಲು ಕಾಶಿಯ ರುದ್ರಾಕ್ಷಿಗಳಿಂದ ತಯಾರಿಸಿದ ಎರಡು ಬೃಹತ್ ರುದ್ರಾಕ್ಷಿ ಮಾಲೆಗಳನ್ನು ಮಂಗಳವಾರ ಗದಗ ಜಿಲ್ಲೆ ನರಗುಂದ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಶಿವಾನಂದ ಸ್ವಾಮೀಜಿಯವರ ಮಠದಲ್ಲಿ ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಪದಾಧಿಕಾರಿಗಳು, ಊರಿನ ದೈವಮಂಡಳಿಯ ನಿಯೋಗಕ್ಕೆ ಹಸ್ತಾಂತರಿಸಲಾಯಿತು.

ಅಬ್ಬಿಹಾಳ ಗ್ರಾಮಸ್ಥರು ಮತ್ತು ಮುದ್ದೇಬಿಹಾಳ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶರಣು ಹಿರೇಮಠ ಅವರು ತಲಾ ಒಂದು ರುದ್ರಾಕ್ಷಿ ಮಾಲೆಯನ್ನು ಭಕ್ತಿ ಕಾಣಿಕೆಯಾಗಿ ದೇವಸ್ಥಾನಕ್ಕೆ ನೀಡಿದ್ದಾರೆ.

ಒಂದು ಬೃಹತ್ ಮಾಲೆಯನ್ನು ಕೋಟಿ ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದ್ದು ಶಿವಭಕ್ತರು ಧರಿಸುವ ಪವಿತ್ರ ಮಣಿಯಾಗಿರುವುದರಿಂದ ಈ ಮಾಲೆಗೆ ವಿಶೇಷ ಮಹತ್ವ ಇದೆ ಎಂದು ಕಮಿಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ, ಈರಯ್ಯ ಶಂಕೀನಮಠ, ಶರಣು ಹಿರೇಮಠ, ಆನಂದ ಗಸ್ತಿಗಾರ, ರಾಮಣ್ಣ ಹುಲಗಣ್ಣಿ, ಮಲಕಾಜಿ ಹೆಬ್ಬಾಳ, ಬಸಲಿಂಗಪ್ಪಗೌಡ ಬಿರಾದಾರ, ಬಸವರಾಜ ಕೋರಿ, ಗುರು ಮಡಿವಾಳರ, ಸಂಗಮೇಶ ಯರಝರಿ, ಬಸವರಾಜ ಹುಲಗಣ್ಣಿ, ಮುತ್ತು ಮದರಿ, ಸಂಗಮೇಶ ಒಣರೊಟ್ಟಿ, ಹಾಜಿ ನಾಯ್ಕೋಡಿ ಸೇರಿ ಹಲವರು ಇದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್