Kashi Rudrakshi Garland handed over by devotees to Kuntoji Ratha to the Committee

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಕುಂಟೋಜಿ ರಥಕ್ಕೆ ಭಕ್ತರಿಂದ ಕಾಶಿಯ ರುದ್ರಾಕ್ಷಿ ಮಾಲೆ ಕಮೀಟಿಗೆ ಹಸ್ತಾಂತರ

ಮುದ್ದೇಬಿಹಾಳ : ತಾಲೂಕಿನ ಸುಕ್ಷೇತ್ರ ಕುಂಟೋಜಿಯ ಶ್ರೀ ಬಸವಣ್ಣ, ಸಂಗಮೇಶ್ವರ ನೂತನ ತೇರಿಗೆ ಅಳವಡಿಸಲು ಕಾಶಿಯ ರುದ್ರಾಕ್ಷಿಗಳಿಂದ ತಯಾರಿಸಿದ ಎರಡು ಬೃಹತ್ ರುದ್ರಾಕ್ಷಿ ಮಾಲೆಗಳನ್ನು ಮಂಗಳವಾರ ಗದಗ ಜಿಲ್ಲೆ ನರಗುಂದ ತಾಲೂಕಿನ ಇಬ್ರಾಹಿಂಪುರದಲ್ಲಿರುವ ಶಿವಾನಂದ ಸ್ವಾಮೀಜಿಯವರ ಮಠದಲ್ಲಿ ಕುಂಟೋಜಿ ಬಸವೇಶ್ವರ ದೇವಸ್ಥಾನ ಕಮೀಟಿ ಪದಾಧಿಕಾರಿಗಳು, ಊರಿನ ದೈವಮಂಡಳಿಯ ನಿಯೋಗಕ್ಕೆ ಹಸ್ತಾಂತರಿಸಲಾಯಿತು.

ಅಬ್ಬಿಹಾಳ ಗ್ರಾಮಸ್ಥರು ಮತ್ತು ಮುದ್ದೇಬಿಹಾಳ ತಾಲೂಕು ಸರ್ಕಾರಿ ನೌಕರರ ಸಂಘದ ನಿರ್ದೇಶಕ ಶರಣು ಹಿರೇಮಠ ಅವರು ತಲಾ ಒಂದು ರುದ್ರಾಕ್ಷಿ ಮಾಲೆಯನ್ನು ಭಕ್ತಿ ಕಾಣಿಕೆಯಾಗಿ ದೇವಸ್ಥಾನಕ್ಕೆ ನೀಡಿದ್ದಾರೆ.

ಒಂದು ಬೃಹತ್ ಮಾಲೆಯನ್ನು ಕೋಟಿ ರುದ್ರಾಕ್ಷಿ ಮಣಿಗಳಿಂದ ತಯಾರಿಸಲಾಗಿದ್ದು ಶಿವಭಕ್ತರು ಧರಿಸುವ ಪವಿತ್ರ ಮಣಿಯಾಗಿರುವುದರಿಂದ ಈ ಮಾಲೆಗೆ ವಿಶೇಷ ಮಹತ್ವ ಇದೆ ಎಂದು ಕಮಿಟಿಯ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ, ಈರಯ್ಯ ಶಂಕೀನಮಠ, ಶರಣು ಹಿರೇಮಠ, ಆನಂದ ಗಸ್ತಿಗಾರ, ರಾಮಣ್ಣ ಹುಲಗಣ್ಣಿ, ಮಲಕಾಜಿ ಹೆಬ್ಬಾಳ, ಬಸಲಿಂಗಪ್ಪಗೌಡ ಬಿರಾದಾರ, ಬಸವರಾಜ ಕೋರಿ, ಗುರು ಮಡಿವಾಳರ, ಸಂಗಮೇಶ ಯರಝರಿ, ಬಸವರಾಜ ಹುಲಗಣ್ಣಿ, ಮುತ್ತು ಮದರಿ, ಸಂಗಮೇಶ ಒಣರೊಟ್ಟಿ, ಹಾಜಿ ನಾಯ್ಕೋಡಿ ಸೇರಿ ಹಲವರು ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ