ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ ಆದರೂ ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಂಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.೨೧ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು.

Latest News

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಬೆಳೆ ಸಮೀಕ್ಷೆದಾರರಿಗೆ ಕಿಟ್ ವಿತರಣೆ

ಮುದ್ದೇಬಿಹಾಳ : ರೈತರ ಬೆಳೆದ ಬೆಳೆ ವಿವರಗಳನ್ನು ದಾಖಲಿಸುವಲ್ಲಿ ಬೆಳೆಯ ಸಮೀಕ್ಷೆದಾರರ ಪಾತ್ರವು ಅತಿ ಮುಖ್ಯವಾಗಿದ್ದು ಅವರ ಬೇಡಿಕೆಯಂತೆ ಐಡಿ ಕಾರ್ಡ್ ಹಾಗೂ ಕಿಟ್ ವಿತರಿಸಲಾಗಿದೆ ಎಂದು ತಹಸೀಲ್ದಾರ್ ಕೀರ್ತಿ ಚಾಲಕ್ ತಿಳಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರ ಹಾಗೂ ಸರ್ಕಾರದ ಪ್ರತಿನಿಧಿಯಾಗಿ ಈ ಬೆಳೆ ಸಮೀಕ್ಷೆದಾರರು ಕಾರ್ಯನಿರ್ವಹಿಸಲಿದ್ದಾರೆ ಎಂದರು. ಸಹಾಯಕ ಕೃಷಿ ನಿರ್ದೇಶಕ ಎಸ್. ಡಿ. ಭಾವಿಕಟ್ಟಿ, ಕೃಷಿ ಅಧಿಕಾರಿಗಳಾದ ಗೋವಿಂದರೆಡ್ಡಿ