ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿ: ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ ಆದರೂ ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಂಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.೨೧ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು.

Latest News

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕಿನಿಂದ ಕಾಂಗ್ರೆಸ್ ಪಕ್ಷದ ನಿಯೋಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವ ನಗರದಲ್ಲಿರುವ ನಿವಾಸಕ್ಕೆ ತೆರಳಿದ ನಿಯೋಗವು ಖರ್ಗೆ ಅವರನ್ನು ಭೇಟಿಯಾದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ನಿಯೋಗದ ಉಸ್ತುವಾರಿ ವಹಿಸಿದ್ದ ವಾಯ್.ಎಚ್.ವಿಜಯಕರ್