ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ