ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ದುರ್ಮರಣ! ಮತ್ತೊಬ್ಬ ಮಗ-ತಂದೆ ಸ್ಥಿತಿ ಗಂಭೀರ

ಬಾಗಲಕೋಟೆ: ಎರಡು ‌ಕಾರುಗಳು ನಡುವೆ ಮುಖಾಮುಖಿಯಾಗಿ ಡಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕಾರಿನಲ್ಲಿದ್ದ ಇಬ್ಬರು

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅರಿತುಕೊಳ್ಳಿ-ಅಂಗಡಿ

ಮುದ್ದೇಬಿಹಾಳ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಸಂಪೂರ್ಣವಾಗಿ ತಮ್ಮನ್ನು ಆಧುನಿಕ ಮಾಧ್ಯಮಗಳಲ್ಲಿ ಮಗ್ನರಾಗಿದ್ದು ಮಾನವೀಯ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ತೆರಬಂಡಿ ಸ್ಪರ್ಧೆ: ರೂಢಗಿ ಎತ್ತುಗಳಿಗೆ ಬಹುಮಾನ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ತಾಂಡಾದ ಮಾರುತೇಶ್ವರ ಜಾತ್ರೆಯ ಅಂಗವಾಗಿ ಹಮ್ಮಿಕೊಂಡಿದ್ದ ತೆರಬಂಡಿ ಸ್ಪರ್ಧೆಯಲ್ಲಿ ಶ್ರೀ ಲಕ್ಷ್ಮಿದೇವಿ ಕಮೀಟಿ ರೂಢಗಿ ಎತ್ತುಗಳು ಪ್ರಥಮ, ರೂಢಗಿ ಎಸ್.ಕೆ.ಟಿ ತಂಡ ದ್ವಿತೀಯ ಸ್ಥಾನ ಪಡೆದುಕೊಂಡವು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸಂತೋಷ ಚವ್ಹಾಣ, ಗ್ರಾಮೀಣ ಪ್ರದೇಶದಲ್ಲಿ ರೈತರು ಎತ್ತುಗಳ ಸಂಸ್ಕೃತಿಯನ್ನು ಜೀವಂತವಾಗಿಡುವ ಸಲುವಾಗಿ ಇಂತಹ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಗ್ರಾಪಂ ಸದಸ್ಯ ಶಿವಾನಂದ ಲಮಾಣಿ, ಮಾಜಿ ಸದಸ್ಯ ಥಾವರಪ್ಪ

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಶ್ರೀ ಗದಿಗೆಪ್ಪಗೌಡ ವ್ಹಿ ಕೋನಪ್ಪನವರ ನಿಧನ.

ಬಾಗಲಕೋಟೆ :ಮುರನಾಳ ಗ್ರಾಮದ ಶ್ರೀ ಗದಿಗೆಪ್ಪಗೌಡ ವೆಂಕಪ್ಪ ಕೋನಪ್ಪನವರ ( ೮೩ ) ಇವರು ವಿದ್ಯಾಗಿರಿ , ಬಾಗಲಕೋಟೆ ನಿವಾಸದಲ್ಲಿ ಸ್ವರ್ಗಸ್ಥರಾದರು. ಸೋಮವಾರ ದಿ ೧೨ ಮೇ ೨೦೨೫ ರಂದು ಬೆಳಿಗ್ಗೆ ೧೦ ಗಂಟೆಗೆ ನಂದೀಶ್ವರ ನಗರ, ವಿದ್ಯಾಗಿರಿ ಬಾಗಲಕೋಟೆ ದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವದು. ಸಂಪರ್ಕ ಮೊಬೈಲ್ ನಂಬರ್9740339050 _ಓಂ ಶಾಂತಿ