ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ!

ಬೆಳಗಾವಿ: “ರಾಜ್ಯದಲ್ಲಿ ಇನ್ನೂ ಭಾರಿ ಮಳೆಯಾಗುವ ಲಕ್ಷಣ ಇದ್ದು, ಇದರಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಲಿವೆ. ಕಾರ್ತಿಕ ಮಾಸದಲ್ಲಿ ತೊಂದರೆ ಆಗುವ ಲಕ್ಷಣ ತೋರುತ್ತಿದೆ. ಮಳೆ, ರೋಗದಿಂದ ದೇಶಕ್ಕೆ ಗಂಡಾಂತರವಿದ್ದು, ಮತ್ತೆ ತೊಂದರೆ ಆಗುತ್ತದೆ” ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದರು.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಮಠದ ಶ್ರೀಗಳು, ಪ್ರಾರಂಭದಲ್ಲೇ ನಾನು ಹೇಳಿದ್ದೆ. ಮಳೆ, ಗಾಳಿ, ಗುಡುಗು ಇದೆ. ಇದರಿಂದ ರಾಜ್ಯದಲ್ಲಿ ಹೆಚ್ಚಿನ ಅವಾಂತರ ಸೃಷ್ಟಿಸಲಿದೆ ಎಂದು ಹೇಳಿದ್ದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳು ಆಗುತ್ತವೆ ಎಂದು ಮೊದಲೇ ಹೇಳಿದ್ದೆ. ಅಲ್ಲದೇ ಜನ ಅಶಾಂತಿಯಿಂದ ಇರುತ್ತಾರೆ ಎಂದು ತಿಳಿಸಿದ್ದೆ ಎಂದು ಕೋಡಿ ಶ್ರೀಗಳು ಹೇಳಿದರು.

ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದೂ ಹೇಳಿದ್ದೆ. ಅದರಂತೆ ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಎಚ್ಚರಿಕೆ ಕೂಡ ನೀಡಿದ್ದೆ ಎಂದರು.
ಈಗಲೂ ಅಂತಹ ಪರಿಸ್ಥಿತಿ ಇದೆ. ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಲಿದೆ ಎಂದು ಶ್ರೀಗಳು ಹೇಳಿದರು.

ಸಂವತ್ಸರದ ಕಡೆಯವರೆಗೂ ರಾಜ್ಯದಲ್ಲಿ ತೊಂದರೆ ಇರಲಿವೆ. ಅಚ್ಚರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದು ಕೂಡ ಆಗುತ್ತದೆ ಕಾದು ನೋಡಿ. ಅಲ್ಲದೇ ಬೆಂಕಿಯಿಂದ ಹೆಚ್ಚು ಸಮಸ್ಯೆ ಉಂಟಾಗಲಿದೆ. ಅಪಮೃತ್ಯು ಹೆಚ್ಚಾಗಲಿದೆ. ರಾಜ್ಯದಲ್ಲಿ ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಇದರಿಂದ ರಾಜ್ಯಾದ್ಯಂತ ಅಶಾಂತಿ ಹೆಚ್ಚಾಗಲಿವೆ ಎಂದರು.

ಒಂದೆಡೆ ಪ್ರಕೃತಿ ವಿಕೋಪ, ಮತ್ತೊಂದೆತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗುವುದಿಲ್ಲ, ಬದಲಾಗಿ ಅಶುಭ ಆಗುತ್ತದೆ. ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳು ಆಗುತ್ತವೆ. ಗುಡ್ಡಗಳು ಕುಸಿತ, ಭೂಕಂಪ ಹೆಚ್ಚಾಗುವ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ ಎಂದರು.

Latest News

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ:                     ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಕೆಬಿಜೆಎನ್‌ಎಲ್ ಅಧಿಕಾರಿ ವಿರುದ್ಧ ಆರೋಪ: ‘ಸರ್ಕಾರ ಹಣ ಕೊಡುತ್ತಿಲ್ಲ,ನೀವೆ ಪಟ್ಟಿ ಹಾಕಿಕೊಂಡು ಕಾಲುವೆ ದುರಸ್ತಿ ಮಾಡಿಕೊಳ್ಳಿ’

ಮುದ್ದೇಬಿಹಾಳ : ಸರ್ಕಾರ ಕಾಲುವೆಗಳ ದುರಸ್ತಿಗೆ ಹಣ ಕೊಡುತ್ತಿಲ್ಲ.ನೀವೇ ಪಟ್ಟಿ ಹಾಕಿಕೊಂಡು ಕಾಲುವೆ ರಿಪೇರಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಬಿಎಚ್‌ಇಓ ಹುದ್ದೆ ಪದೋನ್ನತಿ ವಿಳಂಬ: ಆರೋಗ್ಯ ಸಚಿವ ಯು.ಟಿ.ಖಾದರ್‌ಗೆ ಮನವಿ

ಮುದ್ದೇಬಿಹಾಳ : ಆರೋಗ್ಯ ಇಲಾಖೆಯಲ್ಲಿ ಪದವೀಧರ ಆರೋಗ್ಯ ನಿರೀಕ್ಷಣಾಧಿಕಾರಿಗಳು (ಬಿಎಚ್‌ಇಓ) ಹಾಗೂ ಪದವೀಧರ ಪ್ರಾಥಮಿಕ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ ಆಗ್ರಹಿಸಿ ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಿಳಿಸಿದ್ದಾರೆ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಮುದ್ದೇಬಿಹಾಳ ,ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಣೆ ಮಾಡುತ್ತಿಲ್ಲ.ರೈತರು ಸಂಕಷ್ಟದಲ್ಲಿದ್ದು ಅವರಿಗೆ ಬೆಂಬಲಿಸಲು, ಸರ್ಕಾರದ ಮೇಲೆ ಒತ್ತಡ ಹೇರಲು ಈ ಬಂದ್ ಆಚರಿಸಲಾಗುತ್ತದೆ ಎಂದು ಹೇಳಿದರು. ಸೆ.12

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ:                                                                                   ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಬಸರಕೋಡದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಸನ್ಮಾನ: ಥ್ಯಾಂಕ್‌ಲೆಸ್ ಜಾಬ್‌ನಲ್ಲಿ ಸಮಾಜದ ಗೌರವ ನೀಡಿದ್ದೇ ಹೆಮ್ಮೆ-ಫಸಿವುದ್ದೀನ್

ಮುದ್ದೇಬಿಹಾಳ : ಪೊಲೀಸ್ ಕೆಲಸ ಅದೊಂದು ಥ್ಯಾಂಕಲೆಸ್ ಜಾಬ್ ಎಂಬ ಅಪವಾದದ ಮಧ್ಯೆ ನಮ್ಮ ಇಲಾಖೆಯ ಎಲ್ಲ ಅಧಿಕಾರಿ,ಸಿಬ್ಬಂದಿ ಕೈಗೊಂಡ ಬಸರಕೋಡದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸಿ ಅವರಿಂದ ಬೆಳ್ಳಿ ವಶಕ್ಕೆ ಪಡೆದ ಕಾರಣದಿಂದ ಸಮಾಜ ಕೊಟ್ಟಿರುವ ಸನ್ಮಾನ,ಗೌರವ ನಮ್ಮ ಕರ್ತವ್ಯದ ಸಮಯದ ಮಹತ್ವದ ಕ್ಷಣಗಳಲ್ಲಿ ಒಂದಾಗಿದೆ ಎಂದು ಮುದ್ದೇಬಿಹಾಳ ಸಿಪಿಐ ಮೊಹ್ಮದ ಫಸಿವುದ್ದೀನ್ ಹೇಳಿದರು. ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪೊಲೀಸ್