ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ರೈತರಿಗೆ ವಂಚನೆ-ಆರೋಪ

ತಾಳಿಕೋಟಿ : ತಾಲ್ಲೂಕಿನ ಮೂಕಿಹಾಳ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ರೈತರಿಗೆ ಪ್ರಧಾನ ಮಂತ್ರಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿಯಾದ ಮುದ್ದೇಬಿಹಾಳ ಮತಕ್ಷೇತ್ರದ ನಿಯೋಗ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಅವರಿಗೆ ಸಂಪುಟ ವಿಸ್ತರಣೆಯಲ್ಲಿ ಅವಕಾಶ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ ಕಳಂಕವಿಲ್ಲದ ವ್ಯಕ್ತಿತ್ವ ಹೊಂದಿರುವ ಅಜಾತಶತ್ರು ಎಂದೇ ಹೆಸರಾಗಿರುವ ಶಾಸಕ ಸಿ.ಎಸ್.ನಾಡಗೌಡರಿಗೆ ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಆದ್ಯತೆ ನೀಡಬೇಕು.ಇಲ್ಲದಿದ್ದರೆ ಕಾರ್ಯಕರ್ತರಿಂದ ಪಕ್ಷತ್ಯಾಗ ನಡೆಯಲಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸುರೇಶಗೌಡ ಪಾಟೀಲ(ಇಂಗಳಗೇರಿ) ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶುಕ್ರವಾರ ಮುದ್ದೇಬಿಹಾಳ ಬಂದ್ ಕರೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಮುಖಂಡರು, ವ್ಯಾಪಾರಸ್ಥರಿoದ ಹಮ್ಮಿಕೊಂಡಿದ್ದ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ ಮಹ್ಮದರಫೀಕ ಶಿರೋಳ ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ವಿಳಂಬ ಮಾಡುತ್ತಿರುವ ಹೈಕಮಾಂಡ್ ಧೋರಣೆಗೆ ಬೇಸತ್ತು ಈ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ,ಮಾಜಿ ಸಿಎಂ ಸಿದ್ಧರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಅವರು ಆರು ಬಾರಿ ಕಾಂಗ್ರೆಸ್‌ನಿAದ ಆಯ್ಕೆಯಾಗಿರುವ ಶಾಸಕ ನಾಡಗೌಡರಿಗೆ ಮಂತ್ರಿ