ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಏ.10 ರಿಂದ ಐದು ದಿನಗಳ ಕಾಲ ವಿಜಯಪುರದಲ್ಲಿ ಪುಸ್ತಕ ಮೇಳ

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯಲ್ಲಿ ಏ.10 ರಿಂದ 14ರವರೆಗೆ ಮೇ ಸಾಹಿತ್ಯ ಮೇಳ ಬಳಗದ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಉಪನ್ಯಾಸಕಿ ಗುರುದೇವಿ ಹಳ್ಳೂರರಿಗೆ ಪಿ.ಎಚ್.ಡಿ ಪ್ರದಾನ

ಮುದ್ದೇಬಿಹಾಳ : ಮುದ್ದೇಬಿಹಾಳ ಮೂಲದ ಉಪನ್ಯಾಸಕಿ ಗುರುದೇವಿ ಹಳ್ಳೂರ ಅವರು ಶಿಕ್ಷಣಶಾಸ್ತçದಲ್ಲಿ ವಿಜಯಪುರದ ಕರ್ನಾಟಕ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ   ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಐದು ಲಕ್ಷ ರೂ.ಸ್ಕಾಲರಶಿಪ್ ಗೆಲ್ಲುವ ಅವಕಾಶ ಮುದ್ದೇಬಿಹಾಳ : ಮಾ.29 ರಂದು ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ಪಟ್ಟಣದ ಎಸ್.ಎಸ್.ವಿ.ವಿ ಸಂಘದ ಅಡಿಯಲ್ಲಿ ನಡೆಯುತ್ತಿರುವ ಸ್ವಾಮಿ ವಿವೇಕಾನಂದ ಇಂಟರ್‌ನ್ಯಾಶನಲ್ ಇಂಗ್ಲಿಷ್ ಮಿಡಿಯಂ ಸ್ಕೂಲ್ ಹಾಗೂ ಚಾಲೆಂಜ್ ನವೋದಯ ಕೋಚಿಂಗ್ ಕ್ಲಾಸಸ್‌ನ ಸಹಯೋಗದಲ್ಲಿ ಮಾ.29 ರಂದು ಬೆಳಗ್ಗೆ 11ಕ್ಕೆ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ವೀರೇಶ ಹವಾಲ್ದಾರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುದ್ದೇಬಿಹಾಳ ಪಟ್ಟಣದ ತಂಗಡಗಿ ರಸ್ತೆಯಲ್ಲಿರುವ ಎಸ್.ಎಸ್.ಶಿವಾಚಾರ್ಯ ಪಿಯು ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದೆ.ಪ್ರಥಮ ಬಹುಮಾನ 60 ಸಾವಿರ ರೂ.(ಶಿಷ್ಯವೇತನ,ಐದು ಸಾವಿರ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಢವಳಗಿಯಲ್ಲಿ ಮಾ. 29ರಂದು ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸಲು ಹಾಗೂ ಅವರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾಸ್ಪೂರ್ತಿ ಸಂಸ್ಥೆಯ ವತಿಯಿಂದ “ವಿದ್ಯಾಸ್ಪೂರ್ತಿ ಟಾಲೆಂಟ್ ಅವಾರ್ಡ್” ಪರೀಕ್ಷೆಯನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ. ಈ ಪರೀಕ್ಷೆ ಮಾರ್ಚ್ 29ರಂದು (ಭಾನುವಾರ) ಬೆಳಿಗ್ಗೆ 10:30 ಗಂಟೆಗೆ ನಡೆಯಲಿದ್ದು, 3ನೇ ಮತ್ತು 4ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ವ್ಯಕ್ತವಾಗಿದೆ. ಪರೀಕ್ಷೆಯು ವಿಜಯಪುರ ಜಿಲ್ಲೆಯ