ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಕಡಿಮೆ ಜನಸಂಖ್ಯೆಯ ಜನಾಂಗದ ದಾರ್ಶನಿಕರ ಜಯಂತಿಯಲ್ಲಿ ಪಾಲ್ಗೊಳ್ಳಿ-ಎ.ಗಣೇಶ ನಾರಾಯಣಸ್ವಾಮಿ

ಮುದ್ದೇಬಿಹಾಳ : ಕಡಿಮೆ ಸಂಖ್ಯೆಯಲ್ಲಿರುವ ಸಮಾಜದವರ ಶರಣರು,ಮಹಾನ್ ದಾರ್ಶನಿಕರ ಜಯಂತಿ ಕಾರ್ಯಕ್ರಮಗಳಲ್ಲಿ ಎಲ್ಲ ಅಧಿಕಾರಿಗಳು

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಆ.22 ರಂದು ಪುಟ್ಟರಾಜ ಗವಾಯಿ ಜನಪದ ಸಂಘದ ಪದಗ್ರಹಣ

ಮುದ್ದೇಬಿಹಾಳ : ಗಾನ ಗಾರುಡಿಗ ಪಂಡಿತ ಪುಟ್ಟರಾಜ ಗವಾಯಿಗಳ ಜನಪದ ಮತ್ತು ಸಾಂಸ್ಕೃತಿಕ ಸಂಘ ಮುದ್ದೇಬಿಹಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆ.22 ರಂದು ಸಂಜೆ 4ಕ್ಕೆ ಪಟ್ಟಣದ ವಿದ್ಯಾನಗರದಲ್ಲಿರುವ ಓಸ್ವಾಲ್ ಫಂಕ್ಷನ್ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸಾನಿಧ್ಯವನ್ನು ಕೋಳೂರು ಬಸವೇಶ್ವರ ದೇವಸ್ಥಾನದ ಆರ್ಚಕ ಸಂತೋಷಸ್ವಾಮಿ ಹಿರೇಮಠ ವಹಿಸುವರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕಾಮರಾಜ ಬಿರಾದಾರ ಉದ್ಘಾಟಿಸುವರು.ಗಾಯಕ ಸಂಗಮೇಶ ಶಿವಣಗಿ ಅಧ್ಯಕ್ಷತೆ ವಹಿಸುವರು.ಗಣ್ಯರಾದ ಎಸ್.ಎಸ್. ಹೂಗಾರ, ಎ.ಆರ್.

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ವಿನಂತಿಸಿದರು. ಪಟ್ಟಣದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ವಿಜಯಪುರದ ದರ್ಬಾರ ಹೈಸ್ಕೂಲ್ ಮೈದಾನದಲ್ಲಿ ಆ.23ರಂದು ಮದ್ಯಾಹ್ನ 12ಗಂಟೆಗೆ ಸಂಗೊಳ್ಳಿ ರಾಯಣ್ಣನ ಜಾತ್ರೆಯ ಸಮಾರಂಭವಿದ್ದು ಕಾಗಿನೆಲೆ ಕನಕ ಗುರುಪೀಠದ ಜಗದ್ಗುರುಗಳಾದ ಪ.ಪೂ. ನಿರಂಜನಾನOದಪುರಿ ಮಹಾಸ್ವಾಮೀಜಿಗಳು, ವಿವಿಧ ಜಿಲ್ಲೆಗಳ ಹರಗುರು ಚರಮೂರ್ತಿಗಳು, ಹುಲಜಂತಿ ಮಾಳಿಂಗರಾಯ ಮಹಾರಾಜರು, ರಾಜ್ಯದ ಮಂತ್ರಿ