ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

ಆ.23 ರಂದು ರಾಯಣ್ಣನವರ ಜಾತ್ರೆ:        ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಆ.23 ರಂದು ರಾಯಣ್ಣನವರ ಜಾತ್ರೆ: ಮುದ್ದೇಬಿಹಾಳದಿಂದ ಐದು ಸಾವಿರ ಜನ ಭಾಗಿ-ಎಂ.ಎನ್.ಮದರಿ

ಮುದ್ದೇಬಿಹಾಳ : ವಿಜಯಪುರದಲ್ಲಿ ಆ.23 ರಂದು ನಡೆಯಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಆ.22 ರಂದು ಜಾನಪದ ಪರಿಷತ್ ಘಟಕ ಉದ್ಘಾಟನೆ

ಮುದ್ದೇಬಿಹಾಳ : ಕರ್ನಾಟಕ ಜಾನಪದ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ,ಜನಪದ ಕರಗ

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

‘ಕಾಲುವೆಗೆ ನೀರು ಬಿಡಿ,ಇಲ್ಲವೇ ಸಾಯಲು ವಿಷ ಕೊಡಿ’

ಮುದ್ದೇಬಿಹಾಳ : ಬರಗಾಲ ಬಿದ್ದಿದೆ.ಹೊಲದಲ್ಲಿ ಬಿತ್ತಿರುವ ಬೆಳೆಗಳು ಒಣಗಿ ಹೋಗುತ್ತಿವೆ.ದನ-ಕರುಗಳಿಗೆ ಕುಡಿಯಲು ನೀರಿಲ್ಲ. ಹೊಲಕ್ಕೆ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು ಜತನದಿಂದ ಕಾಪಾಡಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಮಹಿಳಾಪರ ಚಿಂತಕಿ ರಾಜೇಶ್ವರಿ ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಫೂರ್ತಿ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ 80 ನೇ ಸ್ವಾತಂತ್ರ್ಯೋ್ತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಮಕ್ಕಳಲ್ಲಿ ದೇಶಾಭಿಮಾನ,ದೇಶಪ್ರೇಮ ಭಾವನೆ ಮೂಡಿಸಲು ಶಿಕ್ಷಕರು ,ಪಾಲಕರು ಶ್ರಮಿಸಬೇಕು ಎಂದರು. ಶಾಲೆಯ ಅಧ್ಯಕ್ಷ ಬಸಮ್ಮ ಸಿದರಡ್ಡಿ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸ  ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಎಎಸ್ಐ ಎಂ.ಪಿ.ಹೋಕಳೆ, ಪೊಲೀಸ ಸಿಬ್ಬಂದಿ ಬಸವರಾಜ ಸಜ್ಜನ ಹಾಗೂ ತಂಗಡಗಿ ಗ್ರಾಮದ ವಿಕಾಸ ಕಮಲಾಪೂರ ಹಾಗೂ ಬಂಡಿನಾಥ ಕಮಲಾಪೂರ ,ರವಿ ಹಾಲ್ಯಾಳ ಅವರನ್ನು ಸನ್ಮಾನಿಸಲಾಯಿತು. ಎಎಸ್ಐ ಎಂ.ಪಿ.ಹೋಕಳೆ ಧ್ವಜಾರೋಹಣ ಮಾಡಿದರು.ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ, ಮುಖಂಡರಾದ ರಾಜುಗೌಡ ಕೊಂಗಿ,ಸ್ನೇಹಸಿರಿ ಸೇವಾ ಸಂಘದ ಸಂಚಾಲಕ ಬಸವರಾಜ ನಿಡಗುಂದಿ ಸೇರಿದಂತೆ