ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ:  ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಎಸ್.ಎಸ್.ಎಲ್.ಸಿ ಟಾಪರ್‌’ಳಿಗೆ ಶಾಸಕರ ಗೌರವ: ನಾಗರಬೆಟ್ಟದ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣ-ನಾಡಗೌಡ ಶ್ಲಾಘನೆ

ಮುದ್ದೇಬಿಹಾಳ : ಯಾವುದೇ ಒಂದು ಸಾಧನೆ ಇರಲಿ ಅಲ್ಲಿ ಆತ್ಮಸ್ಥೆರ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈಗಿನ ಹೆಣ್ಣು ಮಕ್ಕಳು ಮಾಡುವ ಸಾಧನೆಯನ್ನು ಪುರುಷ ಪ್ರಧಾನ ಸಮಾಜ ತಲೆ ಎತ್ತಿ ನೋಡುವಂತೆ ಆಗಿದೆ ಎಂದು ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟ ಆಕ್ಸ್ಫರ್ಡ್ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮರು ಮೌಲ್ಯಮಾಪನದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಟಾಪರ್‌ಗಳಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು. ನಾಗರಬೆಟ್ಟದ ಆಕ್ಸಫರ್ಡ್

SSLC RE VALUVETION RESULT :                                                            ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

SSLC RE VALUVETION RESULT : ಮೈಲೇಶ್ವರ ಬ್ರಿಲಿಯಂಟ್ ಶಾಲೆ ವಿದ್ಯಾರ್ಥಿನಿ ಗಂಗಮ್ಮ ರಾಜ್ಯಕ್ಕೆ ಫಸ್ಟ್ ರ‍್ಯಾಂಕ್

ತಾಳಿಕೋಟಿ : ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನದಲ್ಲಿ ಈ ಮೊದಲು ರಾಜ್ಯಕ್ಕೆ ಮೂರನೆ ಸ್ಥಾನ ಪಡೆದುಕೊಂಡಿದ್ದ ತಾಲ್ಲೂಕಿನ ಮೈಲೇಶ್ವರದ ಬ್ರಿಲಿಯಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಕೋಳೂರುಗೆ ಮತ್ತೆ ಎರಡು ಅಂಕಗಳು ಬಂದಿದ್ದು ಅದರೊಂದಿಗೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾಳಿಕೋಟಿ ಪಟ್ಟಣದ ನಿವಾಸಿಯಾಗಿರುವ ಗಂಗಮ್ಮ ಅಶೋಕ ಕೋಳೂರ ಈ ಮೊದಲು ಫಲಿತಾಂಶ ಬಂದಾಗ 623 ಅಂಕ ಪಡೆದುಕೊಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದುಕೊಂಡಿದ್ದಳು.ಆದರೆ ಶಾಲೆಯ