ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಸಾರ್ವಜನಿಕರಿಂದ ಶಾಸಕ ಕೊತ್ತೂರು ಮಂಜುನಾಥ್ ಅಹವಾಲು ಸ್ವೀಕಾರ

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಖಾತೆ, ಕಂದಾಯ, ಪಡಿತರ, ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಸಾರ್ವಜನಿಕರು ಮನವಿಗಳನ್ನು ಸಲ್ಲಿಸಿದರು. ಬಹುತೇಕ ಗ್ರಾಮೀಣ ಭಾಗದಿಂದ ಆಗಮಿಸಿದ ಸಾರ್ವಜನಿಕರು ಸಮಸ್ಯೆಗಳ ಅರ್ಜಿಯ ಜೊತೆಗೆ ಬಂದಿದ್ದರು ಸಣ್ಣ ಪುಟ್ಟ ಸಮಸ್ಯೆಗಳಿಗೆ ಶಾಸಕರು ಅಧಿಕಾರಿಗಳಿಗೆ ಕಚೇರಿಯಿಂದಲೇ ಕರೆ ಮಾಡಿ ಇತ್ಯರ್ಥ ಮಾಡಿದರು ಮನೆ ಇಲ್ಲದವರು, ಅನಾರೋಗ್ಯ ಪೀಡಿತರು, ವಿದ್ಯುತ್ ಸಂಪರ್ಕ, ನಿರುದ್ಯೋಗಿಗಳು, ಮನೆ ದುರಸ್ತಿ, ಕಲಿಕೆಗೆ ನೆರವು ಸೇರಿದಂತೆ ಅನೇಕ ಮಂದಿ ತಮ್ಮ ಅಹವಾಲನ್ನು ಶಾಸಕರ ಮುಂದೆ ಹೇಳಿಕೊಂಡರು. ವೃದ್ಧರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ನಂತರ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್ ಮುಖ್ಯಮಂತ್ರಿಯವರ ಆಶಯದಂತೆ, ಸಾರ್ವಜನಿಕರ ಸಮಸ್ಯೆಗಳನ್ನು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿಯೇ ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಜನಸ್ಪಂದನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಅ ಕಾರ್ಯಕ್ರಮದಿಂದ ರೈತರು, ಜನಸಾಮಾನ್ಯರು ಜಿಲ್ಲಾ ಮತ್ತು ತಾಲೂಕು ಕೇಂದ್ರಕ್ಕೆ ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಸೂಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಜನಪನಹಳ್ಳಿ ನವೀನ್ ಕುಮಾರ್, ರವೀಂದ್ರನಾಥ್, ಮುಂತಾದವರು ಇದ್ದರು.

Latest News

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

4 ತಿಂಗಳ ಗರ್ಭಿಣಿ ಆತ್ಮಹತ್ಯೆ..!

ಕಲಬುರಗಿ: ಪ್ರೀತಿಸಿ ಮದುವೆಯಾದ ಪತಿಯ ನಿರಂತರ ಕಿರುಕುಳಕ್ಕೆ ಬೇಸತ್ತು 4 ತಿಂಗಳ ಗರ್ಭಿಣಿಯೊಬ್ಬರು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲೂಕಿನ ಔರಾದ್ (ಬಿ) ಗ್ರಾಮದಲ್ಲಿ ನಡೆದಿದೆ. ಶೃತಿ (22 ವರ್ಷ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷಗಳ ಹಿಂದೆ ಈಕೆ ಗೋಪಾಲ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ ವಿವಾಹದ ಬಳಿಕ ಕುಡಿತ, ಜೂಜಾಟ ಹಾಗೂ ದುಶ್ಚಟಗಳಿಗೆ ದಾಸನಾಗಿದ್ದ ಗೋಪಾಲ್, ಸಾಲ ತೀರಿಸಲು ಮನೆ