ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ