ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಜ.19 ರಿಂದ ವಿಶ್ವ ದಾಸೋಹ ದಿನ ; ನಾನಾ ಕಾರ್ಯಕ್ರಮ ಸಾಣೇಹಳ್ಳಿ ಶಿವಸಂಚಾರ ತಂಡದಿಂದ ಮೂರು ದಿನ ನಾಟಕೋತ್ಸವ

ಮುದ್ದೇಬಿಹಾಳ : ತುಮಕೂರು ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿ ಅವರ ಜನ್ಮದಿನೋತ್ಸವ ಹಾಗೂ ಮಡಿಕೇಶ್ವರದ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ಬಿದ್ದಾಗ ಕೈ ಹಿಡಿದು ಮೇಲೆತ್ತಿ ಜೋಪಾನ ಮಾಡುವ ಸಂಸ್ಕಾರ ಮಕ್ಕಳಲ್ಲಿ ಬೆಳೆಸಿ-ಅಕ್ಷಯಾ ಗೋಖಲೆ

ತಾಳಿಕೋಟಿ : ತಂದೆ ತಾಯಿ ಹುಟ್ಟಿನಿಂದ ನೀಡುವ ಸಂಸ್ಕಾರವು ಮಗುವಿನ ಭವಿಷ್ಯ ನಿರ್ಧರಿಸುತ್ತದೆ. ಈ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ ಇಲ್ಲಿನ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಸಾಧಕರಿಗೆ ಸನ್ಮಾನ ಹಾಗೂ ನೂತನ ದಿನದರ್ಶಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳು ಮಹಾ ಮಂಡಳ ನಿ..ಬೆಂಗಳೂರು ಇದರ ನಿರ್ದೇಶಕರಾಗಿ ಆಯ್ಕೆಯಾದ ಆನಂದಗೌಡ ಎಸ್. ಬಿರಾದಾರ ಹಾಗೂ ಹಸಿರು ತೋರಣ ಗೆಳೆಯರ ಬಳಗಕ್ಕೆ ನೂತನ ಮುದ್ದೇಬಿಹಾಳ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪಂಚಮಸಾಲಿ ಸಮಾಜದ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ ಪಟ್ಟಣದ ಮಾರುತಿ ನಗರದ ಗಣಪತಿ ಗುಡಿ ಹತ್ತಿರ ಇರುವ ಎಂ.ಆರ್.ಇ.ಎo ಇಂಟರ್‌ನ್ಯಾಶನಲ್ ಸ್ಕೂಲ್ ಹಾಗೂ ಭಾಗ್ಯವಂತಿ ಎಚ್.ಪಿ.ಎಸ್ ಶಾಲೆಯಲ್ಲಿ ಮಂಗಳವಾರ ಅದ್ದೂರಿಯಾಗಿ ಆಚರಿಸಲಾಯಿತು. ಸಂಕ್ರಾಂತಿಯ ಸಂಭ್ರಮದ ಅಂಗವಾಗಿ ಉತ್ತರ ಕರ್ನಾಟಕದ ಬಗೆ ಬಗೆಯ ತಿನಿಸುಗಳು,ಆಹಾರ ಪದ್ಧತಿಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯವನ್ನು ಶಿಕ್ಷಕರು ಮಾಡಿದರು.ಶಾಲೆಯ ಮುಖ್ಯಗುರುಮಾತೆ ಅಮೃತಾ ಹಿರೇಮಠ ಮಾತನಾಡಿ, ನಮ್ಮ ಭಾಗದಲ್ಲಿ ಆಚರಣೆಯಲ್ಲಿರುವ ಸಂಕ್ರಾಂತಿಯ