ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು