ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಪರಿಸರ ರಕ್ಷಕ” ಪ್ರಶಸ್ತಿ ಪ್ರದಾನ ಭೂಮಿ ಮೇಲೆ ಸ್ವಾರ್ಥವಿಲ್ಲದೇ ಬದುಕು ನಡೆಸೋಣ: ಬಲರಾಮ ಕಟ್ಟಿಮನಿ

ಮುದ್ದೇಬಿಹಾಳ : ಭೂಮಿಯ ಮೇಳೆ ಮನುಷ್ಯ ಸ್ವಾರ್ಥವಿಲ್ಲದ ಜೀವನ ನಡೆಸಬೇಕು. ಈ ಭೂಮಿಯ ಮೇಲೆ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ನರೇಗಾ ಕೂಲಿಕಾರರಿಗೆ ಅರೋಗ್ಯ ಉಚಿತ ತಪಾಸಣೆ ಶಿಬಿರ

ಖಾತ್ರಿ ಯೋಜನೆಯಡಿ ನಿರಂತರ ಕೆಲಸ : ಗಣಾಚಾರಿ ಮುದ್ದೇಬಿಹಾಳ : ತಾಲ್ಲೂಕಿನ ಮುದ್ನಾಳ ಗ್ರಾಮದ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಗ್ರಾಮದೇವತೆ ಜಾತ್ರೆಯ ನಿಮಿತ್ಯ ಸ್ಪರ್ಧೆ: ರಂಗೋಲಿ ಸ್ಪರ್ಧೆ ವಿಜೇತರಿಗೆ ನಗದು ಬಹುಮಾನ

ಮುದ್ದೇಬಿಹಾಳ : ಪಟ್ಟಣದ ಗ್ರಾಮ ದೇವತೆ ಜಾತ್ರೆಯ ಅಂಗವಾಡಿ ಅಂಬೇಡ್ಕರ್ ಸಭಾಂಗಣದಲ್ಲಿ ಮಹಿಳೆಯರಿಗಾಗಿ ಏರ್ಪಡಿಸಿದ್ದ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಕ್ರೀಡಾಪಟುಗಳಿಗೆ ಅನ್ಯಾಯವಾಗದಂತೆ ಕಾರ್ಯನಿರ್ವಹಿಸಿ-ಸಾವಳಗಿ

ಮುದ್ದೇಬಿಹಾಳ : ಕ್ರೀಡಾಪಟುಗಳನ್ನು ಅವರ ಕೌಟುಂಬಿಕ ಹಿನ್ನೆಲೆ, ಜಾತಿ, ಮತದ ಆಧಾರದ ಮೇಲೆ ಗುರುತಿಸದೇ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಗ್ರಾಮದೇವತೆ ಜಾತ್ರೆ : ರಾಷ್ಟ್ರ, ರಾಜ್ಯಮಟ್ಟದ ಪೈಲ್ವಾನ್‌ಗಳಿಂದ ರಂಗೇರಿದ ಕುಸ್ತಿ

ಮುದ್ದೇಬಿಹಾಳ : ಪಟ್ಟಣದ ಗ್ರಾಮದೇವತೆ ಜಾತ್ರೆಯ ಅಂಗವಾಗಿ ಭಾನುವಾರ ಸಂಜೆ ಇಲ್ಲಿನ ಪ್ರಾರ್ಥನಾ ವಿದ್ಯಾಮಂದಿರದ ಹಿಂಭಾಗದಲ್ಲಿರುವ ಕುಸ್ತಿ ಮೈದಾನದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಕುಸ್ತಿಪಟುಗಳಿಂದ ಭರ್ಜರಿ ಕುಸ್ತಿ ಪ್ರದರ್ಶನ ನಡೆಯಿತು. ಮಧ್ಯಪ್ರದೇಶ, ಮಹಾರಾಷ್ಟ್ರ, ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರಾಜ್ಯಮಟ್ಟದ ಕುಸ್ತಿಪಟುಗಳು ಪಾಲ್ಗೊಂಡು ಅಖಾಡವನ್ನು ರಂಗೇರಿಸಿದ್ದರು. ವಿಶೇಷವಾಗಿ ಕುಸ್ತಿಯನ್ನು ನಿಗದಿ ಮಾಡಿದ ಪೈಲ್ವಾನ್‌ರೊಂದಿಗೆ ಆಡಿಸಿದ್ದು ಕುಸ್ತಿ ಪ್ರೇಮಿಗಳ ಮೆಚ್ಚುಗೆಗೆ ಕಾರಣವಾಯಿತು. ಸಾವಿರಾರು ಜನರು ಕುಸ್ತಿಯನ್ನು ವೀಕ್ಷಿಸಿದರು.