ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು