ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ರಂಜಾನ್ ಮಾಸದಲ್ಲೇ ಯುದ್ಧ ನಡೆಯುವ ಅವಶ್ಯಕತೆ ಇರಲಿಲ್ಲ-ನಾಡಗೌಡ

ಮುದ್ದೇಬಿಹಾಳ : ರಂಜಾನ್ ಹಬ್ಬ ಎಲ್ಲ ಹಬ್ಬಗಳ ಜೊತೆಗೆ ಆಚರಣೆಗೆ ಬರುತ್ತದೆ.ನಾವೆಲ್ಲ ಯುದ್ಧವನ್ನು ಖಂಡಿಸಬೇಕು.ವಿಶೇಷವಾಗಿ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮಾ.9 ರಂದು ಎಂಟನೇ ವರ್ಷದ ವಾರ್ಷಿಕೋತ್ಸವ

ಮುದ್ದೇಬಿಹಾಳ : ಪಟ್ಟಣದ ಮಹಾಂತೇಶ ನಗರದಲ್ಲಿರುವ ವಿಶ್ವಭಾರತಿ ಪಬ್ಲಿಕ್ ಸ್ಕೂಲ್‌ನ ಎಂಟನೇ ವಾರ್ಷಿಕೋತ್ಸವ ಕಾರ್ಯಕ್ರಮ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ ತಾಲ್ಲೂಕಿನ ಬೆಳಗಲ್ ಗ್ರಾಮದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಉದ್ದೇಶಿಸಿದ್ದೇವೆ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಗುರುವಾರ ಹುನಗುಂದದ ಶ್ರೀ ಎಸ್.ಆರ್.ಕೆ. ಸೌಹಾರ್ದ ಪತ್ತಿನ ಸಹಕಾರಿ ಸಂಘ ಇದರ 15ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.ಹುನಗುಂದ ಭಾಗದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ಸೃಷ್ಟಿಯಾಗುತ್ತವೆ.ಅದರಲ್ಲಿಯೂ ಈ ಭಾಗದ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಚಿಣ್ಣರ ಬಣ್ಣದೋಕುಳಿ ಸಡಗರ ಹೆಚ್ಚಿಸಿದ ವರ್ಣರಂಜಿತ ಕಾರಂಜಿ

ಮುದ್ದೇಬಿಹಾಳ : ಬಣ್ಣದ ಹಬ್ಬ ಪ್ರೀತಿ ಮತ್ತು ವಸಂತಗಳ ಸಂಕೇತವಾಗಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ.ದೇವತೆಗಳ ಶಾಶ್ವತ ಮತ್ತು ದೈವಿಕ ಪ್ರೀತಿಯನ್ನು ಇದು ಸೂಚಿಸುತ್ತದೆ.ಈ ದಿನವು ದುಷ್ಟರ ಮೇಲೆ ಒಳ್ಳೆಯದರ ವಿಜಯವನ್ನು ಸೂಚಿಸುತ್ತದೆ ಎಂದು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯದ ರೇಣುಕಾ ಅಕ್ಕನವರು ಹೇಳಿದರು. ಪಟ್ಟಣದ ಹುಡ್ಕೋ ಗವಿಸಿದ್ಧೇಶ್ವರ ವೇದಿಕೆಯ ಆವರಣದಲ್ಲಿ ಸಮಾನ ಮನಸ್ಕ ಯುವ ಬಳಗದ ಆಶ್ರಯದಲ್ಲಿ ಬುಧವಾರ ಚಿಣ್ಣರ ಬಣ್ಣದ ಓಕುಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.