ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೆಯುಡಿಎ ಅನುಮತಿ ಕೊಟ್ಟರೆ ಅನಾಹುತಕ್ಕೆ ಹೊಣೆ ಯಾರು?

ಕೋಲಾರ: ನಗರಾಭಿವೃದ್ಧಿ ಪ್ರಾಧಿಕಾರದಿಂದ ಇಷ್ಟ ಬಂದ ಹಾಗೇ ಅನುಮತಿ ಕೊಟ್ಟರೆ ಮುಂದೆ ನಡೆಯುವ ಅನಾಹುತಗಳಿಗೆ ಯಾರು ಹೊಣೆ ಯಾವುದೇ ಅನುಮತಿ ಕೊಡಬೇಕಾದರೂ ಮೊದಲು ಸ್ಥಳ ಪರಿಶೀಲನೆ ಮಾಡಬೇಕು ಇದಕ್ಕೆ ಸಂಬಂಧಪಟ್ಟ ಇಲಾಖೆಯ ಕಡೆಯಿಂದ ನಡೆಯಬೇಕು ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಹೊರವಲಯದ ಕೆಯುಡಿಎ ಕಛೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪ್ರಾಧಿಕಾರಕ್ಕೆ ಹೆಸರಿಗೆ ಅಷ್ಟೇ ಹೋಟೆಲ್, ಮನೆ, ಮಳಿಗೆ ಅಂತ ಅರ್ಜಿ ಹಾಕಿಕೊಳ್ಳತ್ತಾರೆ ಅನುಮತಿ ಬಂದ ಮೇಲೆ ಮುಂದಿನ ದಿನಗಳಲ್ಲಿ ಬೇರೆ ಕೆಲಸಕ್ಕೆ ಬಳಸಿಕೊಳ್ಳತ್ತಾರೆ ಅವತ್ತು ಏನಾದರೂ ಸಮಸ್ಯೆ ಬಂದರೆ ಪ್ರಾಧಿಕಾರದ ಮೇಲೆ ಆರೋಪ ಮಾಡತ್ತಾರೆ ಇಷ್ಟು ದಿನ ಆಗಿರಬಹುದು ಮುಂದೆ ಅಂತಹವುಗಳು ನಡೆಯಬಾರದು ಕೋಲಾರವನ್ನು ಮುಂದಿನ‌ ಐವತ್ತು ವರ್ಷದ ಭವಿಷ್ಯದಲ್ಲಿ ನೋಡಿಕೊಂಡು ಕೆಲಸ ಮಾಡಬೇಕು ಎಂದರು.

ನಗರದಿಂದ ಸುಮಾರು ಒಂಭತ್ತು ಕಿಮೀ ಅಂತರದಲ್ಲಿ ರಿಂಗ್ ರೋಡ್ ಕಾಮಗಾರಿಗೆ ಸರಕಾರದಿಂದ ಅನುಮೋದನೆ ಸಿಕ್ಕಿದೆ ಈಗಾಗಲೇ ಇದಕ್ಕೆ ಅನುದಾನ ಸಹ ಬಿಡುಗಡೆಯಾಗಿದೆ ಅದರ ಒಳಗಡೆಯಲ್ಲಿ ಕೆಯುಡಿಎ ವತಿಯಿಂದ ರೈತರ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಿಸಲು ಭೂಮಿಯನ್ನು ಪಡೆಯಬೇಕು ಇದಕ್ಕೆ ರೈತ ಪಟ್ಟಿಯನ್ನು ಕೊಡಿ ನಂತರ ಅದರ ಬಗ್ಗೆ ಪರಿಶೀಲನೆ ಮಾಡಿ ರೈತರನ್ನು ಮನವೊಲಿಸುವ ಪ್ರಯತ್ನ ಮಾಡಲಾಗುತ್ತದೆ ಖಾಲಿ ಉಳಿದಿರುವ 332 ನಿವೇಶನಗಳನ್ನು ಸರಕಾರದ ನಿಯಮಾನುಸಾರವಾಗಿ ಮಾರಾಟ ಮಾಡಲು ಅದಕ್ಕೆ ಬೇಕಾದ ತಯಾರಿಗಳನ್ನು ನಡೆಸಲು ಸೂಚನೆ ನೀಡಿದರು.

ಬೆಂಗಳೂರಿನಲ್ಲಿ ಬಿಬಿಎಂಪಿ ಕಡೆಯಿಂದ ಕೇಳಿದಕ್ಕೆ ಎಲ್ಲಾ ಅನುಮತಿ ಕೊಟ್ಟು ಕೊಟ್ಟು ಇವತ್ತು ಹಾಳಾಗಿ ಹೋಗಿದೆ ಕೆಲವು ಸಂದರ್ಭಗಳಲ್ಲಿ ಕುಡಿಯಕ್ಕೆ ನೀರು ಇರಲ್ಲ ಮಳೆ ಬಂದರೆ ಅಷ್ಟೇ ಕಥೆ ಮುಗಿದಂತೆ ಅದರ ಪರಿಸ್ಥಿತಿ ಕೋಲಾರಕ್ಕೆ ಬರಬಾರದು ಎಂದರೆ ಮುಂಜಾಗ್ರತವಾಗಿ ಆಲೋಚನೆ ಮಾಡಿ ಯೋಜನೆ ರೂಪಿಸಬೇಕು ಖಾಸಗಿಯಾಗಿ ಲೇಔಟ್ ನಿರ್ಮಾಣ ಮಾಡೋರಿಗೆ ಕನಿಷ್ಠ ನೀರು, ಚರಂಡಿ, ರಸ್ತೆ, ವಿದ್ಯುತ್‌ ಇದ್ದೀಯಾ ಇಲ್ಲವಾ ಅಂತ ಪರಿಶೀಲನೆ ನಡೆಸಬೇಕು ಸಂಬಂಧಿಸಿದ ಇಲಾಖೆಯಿಂದ ಅನುಮತಿ ಇದ್ದರೆ ಅಷ್ಟೇ ಪ್ರಾಧಿಕಾರದಿಂದ ಅನುಮತಿ ಕೊಡಿ ಇಲ್ಲದೆ ಹೋದರೆ ಸಭೆಯ ಅಜೆಂಡಾಗೆ ತರಬೇಡಿ ಎಂದರು.

ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಬಡಾವಣೆಯಲ್ಲಿ ನ್ಯಾಯಾಧೀಶರು ವಾಸ ಮಾಡತ್ತಾ ಇದ್ದಾರೆ ಅವರಿಗೆ ಮೂಲಭೂತ ಸೌಲಭ್ಯಗಳನ್ನು ಇಲ್ಲ ಎಂದರೆ ಮುಂದೆ ನಮ್ಮ ಬಗ್ಗೆ ತಪ್ಪು ತಿಳಿವಳಿಕೆ ಹೋಗುತ್ತದೆ ಸುಮಾರು 30 ವರ್ಷವಾಗಿದೆ ಬಡಾವಣೆ ಪ್ರಾರಂಭವಾಗಿ ಅಭಿವೃದ್ಧಿ ಯಾಗಿಲ್ಲ ಎಂದರೆ ಹೇಗೆ ಮಳೆಗಾಲ ಪ್ರಾರಂಭವಾಗಿದೆ ಚರಂಡಿಗಳು ಸೇರಿದಂತೆ ಇನ್ನೂ ವಿವಿಧ ಅಭಿವೃದ್ಧಿ ಕೆಲಸವನ್ನು ಮಾಡಲಿಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಮಾತನಾಡಿ ಕೆಯುಡಿಎ ಕಛೇರಿ ಪ್ರಾರಂಭವಾಗಿ ಇಷ್ಟು ವರ್ಷಗಳ ಕಳೆದರೂ ಕಡತಗಳನ್ನು ಗಣಕೀಕೃತ ಮಾಡಿಲ್ಲ ಎಂದರೆ ಹೇಗೆ ಕೂಡಲೇ ಸಂಬಂಧಿಸಿದ ಇಲಾಖೆಯ ಮಾರ್ಗದರ್ಶನದಲ್ಲಿ ಕೂಡಲೇ ಮಾಡಬೇಕು ಪ್ರಾಧಿಕಾರಕ್ಕೆ ಅನುಮತಿಗಾಗಿ ಬರುವ ಪ್ರತಿಯೊಬ್ಬರ ಅರ್ಜಿಯ ಜೊತೆಗೆ ನೇರವಾಗಿ ಸ್ಥಳ ಪರಿಶೀಲನೆ ಮಾಡಿ ಸಮಸ್ಯೆ ಇದ್ದರೆ ಇಂತಿಷ್ಟು ದಿನಗಳಲ್ಲಿ ಸರಿ ಪಡಿಸಬೇಕು ಅಂತ ಅವರ ಕಡೆಯಿಂದ ಲಿಖಿತವಾಗಿ ಉತ್ತರ ಪಡೆದು ಅನುಮತಿ ಕೊಡಬೇಕು ಎಂದರು.

ಸಭೆಯಲ್ಲಿ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ಅಪರ ಜಿಲ್ಲಾಧಿಕಾರಿ ಮಂಗಳಾ, ಕೆಯುಡಿಎ ಆಯುಕ್ತ ಶ್ರೀನಾಥ್, ಸಹಾಯಕ ನಿರ್ದೇಶಕಿ ಅನಿತಾ, ಡಿಹೆಚ್ಒ ಜಗದೀಶ್, ಪಿಡ್ಯೂಡಿ ಇಂಜಿನಿಯರ್ ರಾಮಮೂರ್ತಿ, ಇನ್ಸ್ಪೆಕ್ಟರ್ ಶಿವಕುಮಾರ್ ಸೇರಿದಂತೆ ಮುಂತಾದವರು ಇದ್ದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ