Koppal: The bull going around the temple every day.. People are surprised

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

Koppal: ಪ್ರತಿದಿನ ದೇವಸ್ಥಾನದ ಪ್ರದಕ್ಷಿಣೆ ಹಾಕುತ್ತಿರುವ ಗೂಳಿ.. ಜನರಲ್ಲಿ ಅಚ್ಚರಿ! (ವಿಡಿಯೋ ನೋಡಿ)

ಕೊಪ್ಪಳ: ಗೂಳಿಯೊಂದು ಪ್ರತಿ ದಿನ ದೇವಾಲಯದ ಪ್ರದಕ್ಷಿಣೆ ಹಾಕುವ ಮೂಲಕ ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ.

ಹೌದು, ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿರುವ ಯರಡೋಣಾ ಗ್ರಾಮದಲ್ಲಿರುವ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಗೂಳಿಯೊಂದು ಕಳೆದ ನಾಲ್ಕು ದಿನಗಳಿಂದ ಪ್ರತಿದಿನ ರಾತ್ರಿ ಗುಡಿಯ ಸುತ್ತಲೂ ಪ್ರದಕ್ಷಿಣೆ ಹಾಕುತ್ತಿದೆ. ಇದನ್ನು ಕಂಡ ಗ್ರಾಮಸ್ಥರು ಆಶ್ಚರ್ಯಗೊಂಡಿದ್ದಾರೆ.

Join Out Telegram: https://t.me/dcgkannada

ಈ ಗೂಳಿ ಗ್ರಾಮದ ನಿವಾಸಿಗಳು ಸಾಕಿದ್ದಲ್ಲ. ಊರವರು ಹೇಳುವ ಪ್ರಕಾರ ಗ್ರಾಮದ ಆರಾಧ್ಯ ದೈವ ಶ್ರೀ ಮುರಡಬಸವೇಶ್ವರ ದೇವಸ್ಥಾನಕ್ಕೆ ಬಿಟ್ಟಿರುವ ಗೂಳಿಯಾಗಿದೆ. ಇದು ಪ್ರದಕ್ಷಿಣೆ ಹಾಕುಬ ಮೂಲಕ ಗ್ರಾಮ ದೇವತೆ ಗೆ ಭಕ್ತಿ ಅರ್ಪಿಸುತ್ತಿದೆ ಎನ್ನುತ್ತಾರೆ ಸ್ಥಳೀಯರು.

ಉತ್ತರ ಕರ್ನಾಟಕದಲ್ಲಿ ಗೂಳಿಗಳನ್ನು ದೇವರಿಗೆ ಬಿಡುವ ಪದ್ಧತಿ ಈಗಲೂ ಜಾರಿಯಲ್ಲಿದೆ. ಹಾಗೆ ದೇವರಿಗೆ ಬಿಟ್ಟ ಗೂಳಿಗಳ ಯೋಗಕ್ಷೇಮ ಆಯಾ ಊರವರು ನೋಡಿಕೊಳ್ಳುತ್ತಾರೆ.

ಇದನ್ನೂ ಓದಿ: Vijay: ಖ್ಯಾತ ನಟ ರಾಜಕೀಯಕ್ಕೆ‌ ಎಂಟ್ರಿ.. ಸ್ವಂತ ಪಕ್ಷದ ಧ್ವಜ, ಚಿಹ್ನೆ ಅನಾವರಣ.. (ವಿಡಿಯೋ ನೋಡಿ)

ಯರಡೋಣಾ ಗ್ರಾಮದಲ್ಲಿ ನಿನ್ನೆ ಊರಲ್ಲಿ ಜಿಟಿಜಿಟಿ ಮಳೆಯಾಗುತ್ತಿದ್ದರೆ, ಗೂಳಿ ಶ್ರೀ ದ್ಯಾವಮ್ಮ ದೇವಿ ದೇವಸ್ಥಾನದಲ್ಲಿ ಬರೋಬ್ಬರಿ 35 ಸುತ್ತುಗಳನ್ನು ಹಾಕಿದೆಯಂತೆ. ಇದು ಗ್ರಾಮದಲ್ಲಿ ದೊಡ್ಡ ಸುದ್ದಿಯಾಗಿ, ಸ್ಥಳೀಯರು ಗುಂಪು ಗುಂಪಾಗಿ ಬಂದು ಗೂಳಿಯನ್ನು ನೋಡಲು ಬರುತ್ತಿದ್ದಾರೆ.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ