Murder Case Image of murder symbol

Koppal: ಮಕ್ಕಳಾಗದ ಕಾರಣಕ್ಕೆ ಪತಿಯಿಂದಲೇ ಪತ್ನಿಯ ಕೊಲೆ?

Koppal: ಮಕ್ಕಳಾಗದ ಕಾರಣಕ್ಕೆ ಪತಿಯಿಂದಲೇ ಪತ್ನಿಯ ಕೊಲೆ?

ಕೊಪ್ಪಳ: ಮಕ್ಕಳಾಗಲಿಲ್ಲ ಎನ್ನುವ ಕಾರಣಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಘಟನೆ ಕುಕನೂರು ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ನಡೆದಿದೆ.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ವಿವಾಹ ಪೂರ್ವದಿಂದಲೂ ಸಂಬಂಧಿಕರೇ ಆಗಿದ್ದ ಕೊಲೆ ಆರೋಪಿ ಅರಕೇರಿ ಗ್ರಾಮದ ದೇವರಡ್ಡೆಪ್ಪ ಭಾವಿಕಟ್ಟಿ ಹಾಗೂ ಗೀತಾ (25) ಆರು ವರ್ಷಗಳ ಹಿಂದೆ ದಾಂಪತ್ಯ ಬದುಕಿಗೆ ಕಾಲಿಟ್ಟಿದ್ದರು.

ಮಕ್ಕಳಾಗದ ಕಾರಣಕ್ಕೆ ಅವರ ನಡುವೆ ಹಲವು ಬಾರಿ ವಾದ, ಸಂಘರ್ಷ. ಆಗಿತ್ತು. ಇದೇ ರೀತಿ ಸೆ. 7ರಂದು ತಡರಾತ್ರಿ ತಮ್ಮ ಮನೆಯಲ್ಲಿ ಸಂಘರ್ಷ ಶುರುವಾಗಿದ್ದು, ಪತ್ನಿಗೆ ಕಟ್ಟಿಗೆಯಿಂದ ಮುಖಕ್ಕೆ ಹೊಡೆದು ಪತಿ ಗಾಯಗೊಳಿಸಿ ಕೊಲೆ ಮಾಡಿದ್ದಾನೆ ಎಂದು ಮೃತ ಗೀತಾ ಅವರ ಸಹೋದರ ಸಿದ್ದರೆಡ್ಡಿ ಗಿರಡ್ಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಎಫ್‌ಐಆರ್‌ ದಾಖಲಾಗಿದೆ.

ಆರೋಪಿ, ಅವರ ತಂದೆ ಮಲ್ಲಾರಡ್ಡೆಪ್ಪ ಭಾವಿಕಟ್ಟಿ ಹಾಗೂ ಇತರರು ಗೀತಾ ಅವರ ಪೋಷಕರಿಗೆ ಸುಳ್ಳುಹೇಳಿ ಅವಸರದಿಂದಲೇ ಮೃತದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯಿಂದಾಗಿ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು.

ಘಟನೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೀತಾ ಅವರ ತಂದೆ ಈಶಪ್ಪ ‘ಮಾವನ ಮಗನಿಗೇ ಮಗಳನ್ನು ಕೊಟ್ಟಿದ್ದೆ. ಎರಡು ದಿನಗಳ ಹಿಂದೆ ರಾತ್ರಿ ನಮ್ಮ ಮನೆಗೆ ಬಂದು ಊಟ ಮಾಡಿ ಗಂಡನ ಮನೆಗೆ ಹೋಗಿದ್ದಳು. ರಾತ್ರಿ ವೇಳೆ ಕುಡಿದು ಬಂದ ಗಂಡ ಆಕೆಯನ್ನು ಹೊಡೆದು ಕೊಂದಿದ್ದಾನೆ. ಆಕೆಗೆ ಮಕ್ಕಳಾಗಿಲ್ಲ ಎನ್ನುವ ಒಂದು ಕಾರಣಕ್ಕೆ ಆಕೆಯನ್ನು ಕೊಂದಿದ್ದಾನೆ’ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: Viral news: ಪತ್ನಿಗೆ ಡ್ರಗ್ಸ್ ನೀಡಿ 73 ಜನರಿಂದ ಅತ್ಯಾಚಾರ ಮಾಡಿಸಿದ ಪಾಪಿ ಪತಿ..!

ಘಟನೆ ಸಂಬಂಧ ಅಪ್ಪ ಹಾಗೂ ಮಗನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ