KS Eshwarappa: State BJP should be purged

KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ

KS Eshwarappa: ರಾಜ್ಯ ಬಿಜೆಪಿ ಶುದ್ಧೀಕರಣ ಆಗಬೇಕು: ಕೆ.ಎಸ್.ಈಶ್ವರಪ್ಪ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವವನ್ನು ನಾನು ಒಪ್ಪಿಲ್ಲ. ಬಿಜೆಪಿಯಲ್ಲಿ ಶುದ್ದೀಕರಣ ಆಗಬೇಕು ಎನ್ನುವುದು ನನ್ನೊಬ್ಬನ ಆಸೆ ಅಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ(KS Eshwarappa) ಹೇಳಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಸತ್ತರೆ ಬಿಜೆಪಿ ಧ್ವಜವನ್ನು ಮೈಮೇಲೆ ಹಾಕಿಕೊಂಡೇ ಸಾಯುತ್ತೇನೆ. ಬಿಜೆಪಿಯಿಂದ ಹೊರಗೆ ಇರುವುದಿಲ್ಲ ಎಂದು ಹೇಳಿದರು. ಬಿಜೆಪಿಯಲ್ಲಿ ಶುದ್ದೀಕರಣ ಆಗಬೇಕು ಎನ್ನುವುದು ನನ್ನೊಬ್ಬನ ಆಸೆ ಅಲ್ಲ. ನಾನು ಆರಂಭದಿಂದಲೂ ಈ ಬಗ್ಗೆ ಧ್ವನಿ ಎತ್ತಿದ್ದೇನೆ. ನಂತರ ಯತ್ನಾಳ, ರಮೇಶ ಜಾರಕಿಹೊಳಿ, ಲಿಂಬಾವಳಿ ಶುರು ಮಾಡಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಕ್ಷದೊಳಗೆ ಅಸಮಾಧಾನ, ಆತೃಪ್ತಿ ಇದೆ. ಅದು ಶುದ್ದೀಕರಣ ಆಗಬೇಕು ಎಂದು ಹೇಳಿದರು.

ನಾನು ಚುನಾವಣೆಯಲ್ಲಿ ಸೋತೆ. ಆದರದು ಯಡಿಯೂರಪ್ಪ ಅವರ ಮಗನ ವಿರುದ್ದ ಅಲ್ಲ, ಮೋದಿಗೆ ಸೋತೆ. ಶಿವಮೊಗ್ಗದ ಜನ ಮೋದಿಗೆ ಓಟ್ ಕೊಟ್ಟಿದ್ದಾರೆ. ರಾಘವೇಂದ್ರನಿಗಲ್ಲ. ಯಡಿಯೂರಪ್ಪ ಕುಟುಂಬ ಮೋದಿನ ಬಿಟ್ಟು ಹೊರ ಬಂದು ಗೆಲ್ಲಲಿ ಎಂದು ಸವಾಲೆಸೆದರು.

ಈ ಹಿಂದೆ ಒಮ್ಮೆ ನನಗೆ ಅಖಿಲೇಶ್ ಯಾದವ್ ಕಾಲ್ ಮಾಡಿದ್ದರು. ಕಾಲ್ ಮಾಡಬೇಡಿ ಅಂತಾ ಹೇಳಿದೆ. ಕಾಂಗ್ರೆಸ್ ನಾಯಕರು ಫೋನ್ ಮಾಡಿದ್ದರು. ನನ್ನ ಕುತ್ತಿಗೆ ಕೊಯ್ದರೂ ಬಿಜೆಪಿ ಬಿಟ್ಟು ಹೊರಗೆ ಹೋಗಲ್ಲ ಎಂದಿದ್ದೇನೆ ಎಂದರು.

ಇದನ್ನೂ ಓದಿ: Accident news: ಭೀಕರ ಅಪಘಾತದಲ್ಲಿ ಯುವಕನ ದುರ್ಮರಣ

Latest News

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ರೈತರನ್ನು ಸಾಲಗಾರರನ್ನಾಗಿ ಮಾಡುವುದು ನಮ್ಮ ಉದ್ದೇಶವಲ್ಲ: ಶಾಸಕ ಶಿವಾನಂದ ಪಾಟೀಲ

ಮುದ್ದೇಬಿಹಾಳ : ರೈತರಿಗೆ ಸಾಲ ನೀಡುವುದು ಅವರನ್ನು ಸಾಲಗಾರರನ್ನಾಗಿ ಮಾಡುವ ಉದ್ದೇಶದಿಂದಲ್ಲ, ಬದಲಾಗಿ ಕೃಷಿ ಚಟುವಟಿಕೆಗಳನ್ನು ಬಲಪಡಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಎಂದು ವಿಜಯಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಹೇಳಿದರು. ತಾಲ್ಲೂಕಿನ ಹಿರೇಮುರಾಳದ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನೂತನ ಕಟ್ಟಡವನ್ನು ಅಂಕಲಿಮಠದ ವೀರಭದ್ರ ಸ್ವಾಮೀಜಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ರೈತರು ತಮ್ಮ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು.

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ