ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು



ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್‌ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.

ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.

ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ