ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.
ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.
ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು
Latest News
ದಿನಕ್ಕೊಂದು ಧನಾತ್ಮಕ ಕಥೆ: ಸಣ್ಣ ಬದಲಾವಣೆ, ದೊಡ್ಡ ಪರಿಣಾಮ
ಒಂದು ದೊಡ್ಡ ನಗರದ ಹೊರವಲಯದಲ್ಲಿ ಒಬ್ಬ ಅನುಭವಿ ಕುಂಬಾರ ವಾಸಿಸುತ್ತಿದ್ದನು. ಆತನ ಹೆಸರು ರಾಘವ.
ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆಗೆ ಪ್ರಸ್ತಾವನೆ-ಶಾಸಕ ನಾಡಗೌಡ
ಮುದ್ದೇಬಿಹಾಳ : ಪಟ್ಟಣದ ವ್ಯಾಪ್ತಿಯಲ್ಲಿ ಕಾರ್ಮಿಕ ಇಲಾಖೆಯಿಂದಲೂ ವಸತಿ ಶಾಲೆ ಆರಂಭಿಸಲು ಪ್ರಸ್ತಾವನೆ ಕಳಿಸಲಾಗಿದೆ
ಪ್ರಸ್ತುತ ಕರ್ನಾಟಕ ರಾಜಕೀಯ ಚಿತ್ರಣ: ಸವಾಲು ಮತ್ತು ಗ್ಯಾರಂಟಿಗಳು
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೇರಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು
MUDDEBIHAL : PWD AEE ರೆಡ್ಡಿ ಅಧಿಕಾರ ಸ್ವೀಕಾರ
ಮುದ್ದೇಬಿಹಾಳ : ತಾಲ್ಲೂಕಿನ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾಗಿ ಅಯ್ಯಪ್ಪಗೌಡ ರೆಡ್ಡಿ ಶುಕ್ರವಾರ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಗುತ್ತಿಗೆದಾರರ ಸಂಘದ ತಾಲ್ಲೂಕು ಅಧ್ಯಕ್ಷ ಸುರೇಶಗೌಡ ಪಾಟೀಲ ಇಂಗಳಗೇರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಚಿನಗೌಡ ಪಾಟೀಲ, ಗುತ್ತಿಗೆದಾರ ಶ್ರೀಕಾಂತಗೌಡ ಪಾಟೀಲ, ಮುಖಂಡ ರುದ್ರಗೌಡ ಅಂಗಡಗೇರಿ ಸನ್ಮಾನಿಸಿದರು. ಅಯ್ಯಪ್ಪಗೌಡ ರೆಡ್ಡಿ ಅವರು ಈ ಮುಂಚೆ ಶಿರಸಿ ಸಿದ್ದಾಪುರ,ಮುದ್ದೇಬಿಹಾಳ,ಆಲಮಟ್ಟಿ,ತಾಳಿಕೋಟಿ ಭಾಗದಲ್ಲಿ ವಿವಿಧ ಇಲಾಖೆಗಳಲ್ಲಿ ಸಹಾಯಕ ಅಭಿಯಂತರರಾಗಿ ಸೇವೆ ಸಲ್ಲಿಸಿದ್ದು ಅವರಿಗೆ ಸರ್ಕಾರ ಈ
ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಆಯ್ಕೆ; ಮುದ್ದೇಬಿಹಾಳ ಕಾನಿಪ ಸಂಘಕ್ಕೆ ಚುನಾವಣೆ : ವಡವಡಗಿ ಪೆನಲ್ಗೆ ಜಯ
ಮುದ್ದೇಬಿಹಾಳ : ಕಾನಿಪ ಸಂಘದ ತಾಲ್ಲೂಕು ಘಟಕದ 2025-28ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗೆ ಬುಧವಾರ ಚುನಾವಣೆ ನಡೆಸಲಾಗಿದ್ದು ವಡವಡಗಿ-ಬನ್ನೆಟ್ಟಿ ಪೆನಲ್ ಮಧ್ಯೆ ಏರ್ಪಟ್ಟ ಸ್ಪರ್ಧೆಯಲ್ಲಿ ವಡವಡಗಿ ಪೆನಲ್ ಪದಾಧಿಕಾರಿಗಳು ಭರ್ಜರಿ ಜಯ ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಡಿ.ಬಿ.ವಡವಡಗಿ ಹಾಗೂ ಮಕ್ಬೂಲ್ ಬನ್ನೆಟ್ಟಿ ನಾಮಪತ್ರ ಸಲ್ಲಿಸಿದ್ದು ನೂತನ ಅಧ್ಯಕ್ಷರಾಗಿ ಡಿ.ಬಿ.ವಡವಡಗಿ ಅವರು 19 ಮತ ಪಡೆದು ಆಯ್ಕೆಯಾಗಿ ಪ್ರತಿಸ್ಪರ್ಧಿ ಮಕ್ಬುಲ್ ಬನ್ನೆಟ್ಟಿ ಅವರನ್ನು 10 ಮತಗಳ ಅಂತರದಿoದ ಪರಾಭವಗೊಳಿಸಿದರು. ಉಪಾಧ್ಯಕ್ಷ







