ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು



ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಹಾಯ್ದು ತಹಶೀಲ್ದಾರ್ ಕಚೇರಿ ಆವರಣಕ್ಕೆ ಆಗಮಿಸಿದರು.ಈ ವೇಳೆ ಸರ್ಕಾರದ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸೈನಿಕ ನಾಗಲಿಂಗಯ್ಯ ಮಠ ಮಾತನಾಡಿ, ಕುಂಟೋಜಿ ಸರ್ವೆ ನಂಬರ್ 277, 278,279,289, 290,291, 300,301, 303, 304, 305, 311, 312, 313, 466/2ರಲ್ಲಿ ಅಂದಾಜು 380 ಎಕರೆ ಜಮೀನುಗಳನ್ನು ಕೆಲವರು ಖರೀದಿ ಮಾಡಿದ್ದು ಇನ್ನು ಕೆಲವರ ಆಸ್ತಿಗಳು ಪಿತ್ರಾರ್ಜಿತ ಆಸ್ತಿಗಳಿವೆ. ಈ ರೀತಿಯ ಜಮೀನುಗಳಲ್ಲಿ 2019 ಜನವೇರಿಯಲ್ಲಿ ವಕ್ಬ್ ಆಸ್ತಿ ಕರ್ನಾಟಕ ಸರಕಾರ ಅಂತ 11ನೇ ಕಾಲಂನಲ್ಲಿ ನಮೂದಿಸಲಾಗಿದೆ.ಇದರಿಂದ ಸರ್ಕಾರ ಯಾವುದೇ ಸೌಲಭ್ಯ, ಸಾಲ ಪಡೆದುಕೊಳ್ಳುವುದಕ್ಕೆ ನಮಗೆ ತೊಂದರೆಯಾಗಿದ್ದು 1973ರ ಗೆಜೆಟ್‌ನಲ್ಲಿ ನಮೂದಿಸಿರುವ ವಕ್ಭ್ ಆಸ್ತಿ ಹಾಗೂ ಪಹಣಿಗಳಲ್ಲಿನ ವಕ್ಭ್ ಮಂಡಳಿ ಕರ್ನಾಟಕ ಸರ್ಕಾರ ತಗೆದು ಹಾಕಬೇಕು ಎಂದು ಒತ್ತಾಯಿಸಿದರು.

ಮುಖಂಡ ಸಿದ್ದು ಹೆಬ್ಬಾಳ ಮಾತನಾಡಿ, ರೈತರ ಜಮೀನುಗಳು ಇನಾಮು ಜಮೀನುಗಳಾಗಿದ್ದು 1961ರಲ್ಲೇ ಇವುಗಳ ಉತಾರೆಯಲ್ಲಿದ್ದ ಸರ್ಕಾರವನ್ನು ವಜಾಗೊಳಿಸಲಾಗಿದೆ.ತಕ್ಷಣ ರೈತರ ಜಮೀನುಗಳ ಮೇಲೆ ಇರುವ ವಕ್ಭ್ ಬೋರ್ಡ್ ಪದವನ್ನು ತಗೆದುಹಾಕಬೇಕು.ಇಲ್ಲದಿದ್ದರೆ ತಹಶೀಲ್ದಾರ್ ಕಚೇರಿ ಎದುರಿಗೆ ನ.6 ರಿಂದ ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ. ರೈತರಿಗೆ ತೊಂದರೆಯಾದಾಗ ಎಲ್ಲ ಹೋರಾಟಗಾರರು, ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಆತನೊಂದಿಗೆ ನಿಲ್ಲಬೇಕು ಎಂದು ತಿಳಿಸಿದರು.

ಪ್ರಗತಿಪರ ರೈತ ಭೀಮಸಿ ಹೂಗಾರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಲು ಓಡಾಡಿ ಓಟು ಹಾಕಿಸಿಕೊಂಡವರು ಇಂದು ರೈತರಿಗೆ ತೊಂದರೆಯಾಗಿರುವುದರ ಬಗ್ಗೆ ಧ್ವನಿ ಎತ್ತಬೇಕು.ಕ್ಷೇತ್ರದ ಶಾಸಕರು ಈ ವಿಷಯದ ಕುರಿತು ಧ್ವನಿ ಎತ್ತಬೇಕು.ಕೇವಲ ಹಿಂದೂಗಳಷ್ಟೇ ಅಲ್ಲದೇ ಮುಸ್ಲಿಂರ ಜಮೀನುಗಳಲ್ಲೂ ವಕ್ಭ್ ಬೋರ್ಡ್ ಪದ ಸೇರ್ಪಡೆಯಾಗಿದ್ದು ಅದನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರಲ್ಲದೇ ವಕ್ಬ್ ಕಾನೂನು ಸಂವಿಧಾನಕ್ಕಿಂತ ದೊಡ್ಡದಲ್ಲ ಎಂದು ಹೇಳಿದರು.

ರೈತ ಸಂಘದ ಮುಖಂಡ ಸಂಗಣ್ಣ ಬಾಗೇವಾಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ, , ಸಂತೋಷಗೌಡ ಬಿರಾದಾರ , ಗುರುಪಾದ ಹೆಬ್ಬಾಳ , ಮಂಜು ಅಬ್ಬಿಹಾಳಮಠ ಮಲ್ಲಿಕಾರ್ಜುನ ನಾಟಿಕಾರ , ಸಚೀನ ಚಿನ್ನಾಪೂರ , ಈರಣ್ಣ ಹೂಗಾರ , ಸಂಗಣ್ಣ ಕುಂಬಾರ , ದುರ್ಗಪ್ಪ ಕವಡಿಮಟ್ಟಿ ಸೇರಿದಂತೆ ಕುಂಟೋಜಿ ಹಾಗೂ ಬಿದರಕುಂದಿ ರೈತರು ಹಾಗೂ ರೈತ ಸಂಘದ ಪದಾಧಿಕಾರಿಗಳು ಇದ್ದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಮಾತನಾಡಿ, ಮೇಲಧಿಕಾರಿಗಳಿಂದ ಬರುವ ನಿರ್ದೇಶನದಂತೆ ನಾನು ನಡೆದುಕೊಳ್ಳುತ್ತೇನೆ ಎಂದು ಹೇಳಿದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ